TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »