TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »