TOP STORIES:

FOLLOW US

ಮುಂಬೈಗರ ಮನಗೆದ್ದ ಗೋವಿಂದ ಬಾಬು ಪೂಜಾರಿ


ಕರುನಾಡ ಕರುಣೆಯ ಕಾಮಧೇನು ಹಾಗೂ ನನ್ನ ಆತ್ಮೀಯರಾದ ಶ್ರೀ ಗೋವಿಂದ ಬಾಬು ಪೂಜಾರಿಯವರೇ,ನಿನ್ನೆ ಮುಂಬೈ ಬಿಲ್ಲವಭವನದಲ್ಲಿ ನಿಮಗೆ ಆಯೋಜಿಸಿದ ಗೌರವ ಪೂರ್ಣ ಸನ್ಮಾನಕ್ಕೆ ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ.

ಹೌದು,

ನಿನ್ನೆ ನಾನಲ್ಲಿರಬೇಕಿತ್ತು

ಆದರೆ ಇರಲಾಗಲಿಲ್ಲ.

ನಿಮ್ಮ ಜೊತೆಗೆ ಮಾತಾಡುವ,ನಿಮ್ಮ ಮಾತಿಗೆ ಕಿವಿಯಾಗುವ ಅವಕಾಶಕ್ಕೆ ಅನಾನುಕೂಲ ಅಡ್ಡಿ ಆಯಿತು.ಮುಂಬೈಯಿಂದ ದೂರದಗುಜರಾತ್ ಅಹಮದ್ ನಗರಕ್ಕೆ ಬಂದಿದ್ದೆ.ಇಲ್ಲಿ ಕೊರೆಯುವ ಹಿಮದ ಚಳಿ.ಅದರ ತೀವ್ರತೆಗೆ ಜ್ವರ ಬಿಟ್ಟು ಹೋಗಲಾರೆ ಅನ್ನುತ್ತಿದೆ.

ನಿಮಗೆ ಸಿಗದೆ ಇದ್ದುದಕ್ಕೆ ಬೇಸರವಿದೆ.

ಇಂತಹ ಕಾರ್ಯಕ್ರಮಗಳಿಗೆ ಕಾರಣ ಹೇಳಿ ತಪ್ಪಿಸಿಕೊಳ್ಳಬಾರದು.

ಗೋವಿಂದ್ ಅಣ್ಣ ನಿನ್ನೆ ನಿಮ್ಮ ಸನ್ಮಾನ ವಾಚನದ ವೇಳೆ ಜನರ ಕಿವಿಗಡಚಿಕ್ಕುವ ಚಪ್ಪಾಳೆಗೆ ಇಡೀಯ ಸಭಾಂಗಣ ಸಾಕ್ಷಿಆಯಿತು.ನೀವು ಬದುಕಿನ ಹಾದಿಯಲ್ಲಿ ನಡೆದು ಬಂದ ಗಳಿಗೆಗಳ ಒಂದೊಂದು ಹೆಜ್ಜೆಗಳು ಅಲ್ಲಿ ಅನಾವರಣವಾಯಿತು.

ಹೊತ್ತಿನಲ್ಲಿಯೂ

ನಿಮ್ಮ ಮುಖದಲ್ಲಿ ಇದ್ದದ್ದು  ಮಂದಹಾಸ ಬಿಟ್ಟರೇ,ಅಹಂಕಾರದ ಲವಲೇಶವೂ ಇರಲಿಲ್ಲ.

ನನ್ನ ಅನೇಕ ಸ್ನೇಹಿತರು ಇವತ್ತು ಕಾಲ್ ಮಾಡಿ ನಿಮ್ಮ ಸರಳತೆಯ ಬಗ್ಗೆ ಸೌಜನ್ಯತೆಯ ಬಗ್ಗೆ ಮಾತನಾಡಿದರು.

ಬದುಕಿದರೆ ನಿಮ್ಮಂತೆ ಬದುಕಬೇಕು ಅಂದರು.ಅವರೆಲ್ಲರಿಗೂ ನೀವು ಸ್ಫೂರ್ತಿ ಆದಿರಿ.ಅನೇಕರನ್ನು ಕರೆದು ನಿಮ್ಮೊಂದಿಗೆ ನಾನಿದ್ದೇನೆಅನ್ನುವ ದೈರ್ಯದ ಮಾತುಗಳನ್ನು ಆಡಿದ್ದು ತಿಳಿಯಿತು.ಅಂತಹ ಸಾಂತ್ವನ ನಿಮ್ಮಂತವರು ಮಾತ್ರ ಕೊಡಲು ಸಾಧ್ಯ ಗೋವಿಂದ ಅಣ್ಣ.

ಹಣ ಗಳಿಸುವುದು,ಅಂತಸ್ತನ್ನು ಸಂಪಾದಿಸುವುದು ಬಂಗ್ಲೆ ಕಾರುಗಳನ್ನು ಖರೀದಿಸುವುದು ವಿಶೇಷವಲ್ಲ.ಆದರೆ ಜನರ ಪ್ರೀತಿಯನ್ನುಗಳಿಸುವುದು ಅದರಲ್ಲೂ ಅನ್ಯ ರಾಜ್ಯದಲ್ಲಿ ಇಲ್ಲಿನವರ ಅಭಿಮಾನಕ್ಕೆ ಪಾತ್ರರಾಗುವುದಿದೆಯಲ್ಲಾ ಅದು ಸರ್ವಶ್ರೇಷ್ಠ.ಮಾನವೀಯತೆಮತ್ತು ಪ್ರಾಮಾಣಿಕತೆ ನಿಮ್ಮ ಮೂಲ ಗುಣಗಳು.

ಅದನ್ನು ನಿನ್ನೆ ಮುಂಬೈಯ ಜನ ಗುರುತಿಸಿದ್ದಾರೆ.

ನಿಮ್ಮನ್ನು ಬೇಟಿಯಾಗದೆ ಇದ್ದುದಕ್ಕೆ ಕ್ಷಮೆ ಕೋರುತ್ತಾ,ನಾನಿದ್ದಲ್ಲಿಗೆ ಬಂದಾಗ ನಾನು ನಿಮಗೆ ಸಿಗಲಿಲ್ಲ.ಆದರೆ ಕೆಲವೇ ಕೆಲವುದಿನಗಳಲ್ಲಿ ನಾನು ನೀವು ಇದ್ದಲ್ಲಿಗೆ ಅಂದರೇ ಬೆಂಗಳೂರಿಗೆ ಬಂದು ನಿಮ್ಮ ಜೊತೆಗೊಂದಿಷ್ಟು ಹೊತ್ತು ಇದ್ದು ಬರಲುತೀರ್ಮಾನಿಸಿದ್ದೇನೆ….

ನಿಮ್ಮನ್ನು ಸನ್ಮಾನಿಸಿದ ಬಿಲ್ಲವರ ಅಸೋಸಿಯೇಷನ್ ನನ್ನೆಲ್ಲ ಆತ್ಮೀಯ ಬಳಗಕ್ಕೆ ವಂದಿಸುತ್ತಾ,ನಿಮ್ಮ ಪ್ರೀತಿಗೆ ತಲೆಬಾಗುತ್ತಾ,

ನಿಮ್ಮ ಸಲಹೆ ಸಹಕಾರ ಯಾವತ್ತೂ ಹೀಗೆಯೇ ಇರಲಿ ಎಂದು ಆಶಿಸುವ

ಇಂತೀ ನಿಮ್ಮವ,

✍️ಉದಯ್ ಕುಂದಾಪುರ

             (ಮುಂಬೈ)


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »