TOP STORIES:

ಮುಂಬೈಗರ ಮನಗೆದ್ದ ಗೋವಿಂದ ಬಾಬು ಪೂಜಾರಿ


ಕರುನಾಡ ಕರುಣೆಯ ಕಾಮಧೇನು ಹಾಗೂ ನನ್ನ ಆತ್ಮೀಯರಾದ ಶ್ರೀ ಗೋವಿಂದ ಬಾಬು ಪೂಜಾರಿಯವರೇ,ನಿನ್ನೆ ಮುಂಬೈ ಬಿಲ್ಲವಭವನದಲ್ಲಿ ನಿಮಗೆ ಆಯೋಜಿಸಿದ ಗೌರವ ಪೂರ್ಣ ಸನ್ಮಾನಕ್ಕೆ ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ.

ಹೌದು,

ನಿನ್ನೆ ನಾನಲ್ಲಿರಬೇಕಿತ್ತು

ಆದರೆ ಇರಲಾಗಲಿಲ್ಲ.

ನಿಮ್ಮ ಜೊತೆಗೆ ಮಾತಾಡುವ,ನಿಮ್ಮ ಮಾತಿಗೆ ಕಿವಿಯಾಗುವ ಅವಕಾಶಕ್ಕೆ ಅನಾನುಕೂಲ ಅಡ್ಡಿ ಆಯಿತು.ಮುಂಬೈಯಿಂದ ದೂರದಗುಜರಾತ್ ಅಹಮದ್ ನಗರಕ್ಕೆ ಬಂದಿದ್ದೆ.ಇಲ್ಲಿ ಕೊರೆಯುವ ಹಿಮದ ಚಳಿ.ಅದರ ತೀವ್ರತೆಗೆ ಜ್ವರ ಬಿಟ್ಟು ಹೋಗಲಾರೆ ಅನ್ನುತ್ತಿದೆ.

ನಿಮಗೆ ಸಿಗದೆ ಇದ್ದುದಕ್ಕೆ ಬೇಸರವಿದೆ.

ಇಂತಹ ಕಾರ್ಯಕ್ರಮಗಳಿಗೆ ಕಾರಣ ಹೇಳಿ ತಪ್ಪಿಸಿಕೊಳ್ಳಬಾರದು.

ಗೋವಿಂದ್ ಅಣ್ಣ ನಿನ್ನೆ ನಿಮ್ಮ ಸನ್ಮಾನ ವಾಚನದ ವೇಳೆ ಜನರ ಕಿವಿಗಡಚಿಕ್ಕುವ ಚಪ್ಪಾಳೆಗೆ ಇಡೀಯ ಸಭಾಂಗಣ ಸಾಕ್ಷಿಆಯಿತು.ನೀವು ಬದುಕಿನ ಹಾದಿಯಲ್ಲಿ ನಡೆದು ಬಂದ ಗಳಿಗೆಗಳ ಒಂದೊಂದು ಹೆಜ್ಜೆಗಳು ಅಲ್ಲಿ ಅನಾವರಣವಾಯಿತು.

ಹೊತ್ತಿನಲ್ಲಿಯೂ

ನಿಮ್ಮ ಮುಖದಲ್ಲಿ ಇದ್ದದ್ದು  ಮಂದಹಾಸ ಬಿಟ್ಟರೇ,ಅಹಂಕಾರದ ಲವಲೇಶವೂ ಇರಲಿಲ್ಲ.

ನನ್ನ ಅನೇಕ ಸ್ನೇಹಿತರು ಇವತ್ತು ಕಾಲ್ ಮಾಡಿ ನಿಮ್ಮ ಸರಳತೆಯ ಬಗ್ಗೆ ಸೌಜನ್ಯತೆಯ ಬಗ್ಗೆ ಮಾತನಾಡಿದರು.

ಬದುಕಿದರೆ ನಿಮ್ಮಂತೆ ಬದುಕಬೇಕು ಅಂದರು.ಅವರೆಲ್ಲರಿಗೂ ನೀವು ಸ್ಫೂರ್ತಿ ಆದಿರಿ.ಅನೇಕರನ್ನು ಕರೆದು ನಿಮ್ಮೊಂದಿಗೆ ನಾನಿದ್ದೇನೆಅನ್ನುವ ದೈರ್ಯದ ಮಾತುಗಳನ್ನು ಆಡಿದ್ದು ತಿಳಿಯಿತು.ಅಂತಹ ಸಾಂತ್ವನ ನಿಮ್ಮಂತವರು ಮಾತ್ರ ಕೊಡಲು ಸಾಧ್ಯ ಗೋವಿಂದ ಅಣ್ಣ.

ಹಣ ಗಳಿಸುವುದು,ಅಂತಸ್ತನ್ನು ಸಂಪಾದಿಸುವುದು ಬಂಗ್ಲೆ ಕಾರುಗಳನ್ನು ಖರೀದಿಸುವುದು ವಿಶೇಷವಲ್ಲ.ಆದರೆ ಜನರ ಪ್ರೀತಿಯನ್ನುಗಳಿಸುವುದು ಅದರಲ್ಲೂ ಅನ್ಯ ರಾಜ್ಯದಲ್ಲಿ ಇಲ್ಲಿನವರ ಅಭಿಮಾನಕ್ಕೆ ಪಾತ್ರರಾಗುವುದಿದೆಯಲ್ಲಾ ಅದು ಸರ್ವಶ್ರೇಷ್ಠ.ಮಾನವೀಯತೆಮತ್ತು ಪ್ರಾಮಾಣಿಕತೆ ನಿಮ್ಮ ಮೂಲ ಗುಣಗಳು.

ಅದನ್ನು ನಿನ್ನೆ ಮುಂಬೈಯ ಜನ ಗುರುತಿಸಿದ್ದಾರೆ.

ನಿಮ್ಮನ್ನು ಬೇಟಿಯಾಗದೆ ಇದ್ದುದಕ್ಕೆ ಕ್ಷಮೆ ಕೋರುತ್ತಾ,ನಾನಿದ್ದಲ್ಲಿಗೆ ಬಂದಾಗ ನಾನು ನಿಮಗೆ ಸಿಗಲಿಲ್ಲ.ಆದರೆ ಕೆಲವೇ ಕೆಲವುದಿನಗಳಲ್ಲಿ ನಾನು ನೀವು ಇದ್ದಲ್ಲಿಗೆ ಅಂದರೇ ಬೆಂಗಳೂರಿಗೆ ಬಂದು ನಿಮ್ಮ ಜೊತೆಗೊಂದಿಷ್ಟು ಹೊತ್ತು ಇದ್ದು ಬರಲುತೀರ್ಮಾನಿಸಿದ್ದೇನೆ….

ನಿಮ್ಮನ್ನು ಸನ್ಮಾನಿಸಿದ ಬಿಲ್ಲವರ ಅಸೋಸಿಯೇಷನ್ ನನ್ನೆಲ್ಲ ಆತ್ಮೀಯ ಬಳಗಕ್ಕೆ ವಂದಿಸುತ್ತಾ,ನಿಮ್ಮ ಪ್ರೀತಿಗೆ ತಲೆಬಾಗುತ್ತಾ,

ನಿಮ್ಮ ಸಲಹೆ ಸಹಕಾರ ಯಾವತ್ತೂ ಹೀಗೆಯೇ ಇರಲಿ ಎಂದು ಆಶಿಸುವ

ಇಂತೀ ನಿಮ್ಮವ,

✍️ಉದಯ್ ಕುಂದಾಪುರ

             (ಮುಂಬೈ)


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »