TOP STORIES:

ಮುಂಬೈಗರ ಮನಗೆದ್ದ ಗೋವಿಂದ ಬಾಬು ಪೂಜಾರಿ


ಕರುನಾಡ ಕರುಣೆಯ ಕಾಮಧೇನು ಹಾಗೂ ನನ್ನ ಆತ್ಮೀಯರಾದ ಶ್ರೀ ಗೋವಿಂದ ಬಾಬು ಪೂಜಾರಿಯವರೇ,ನಿನ್ನೆ ಮುಂಬೈ ಬಿಲ್ಲವಭವನದಲ್ಲಿ ನಿಮಗೆ ಆಯೋಜಿಸಿದ ಗೌರವ ಪೂರ್ಣ ಸನ್ಮಾನಕ್ಕೆ ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ.

ಹೌದು,

ನಿನ್ನೆ ನಾನಲ್ಲಿರಬೇಕಿತ್ತು

ಆದರೆ ಇರಲಾಗಲಿಲ್ಲ.

ನಿಮ್ಮ ಜೊತೆಗೆ ಮಾತಾಡುವ,ನಿಮ್ಮ ಮಾತಿಗೆ ಕಿವಿಯಾಗುವ ಅವಕಾಶಕ್ಕೆ ಅನಾನುಕೂಲ ಅಡ್ಡಿ ಆಯಿತು.ಮುಂಬೈಯಿಂದ ದೂರದಗುಜರಾತ್ ಅಹಮದ್ ನಗರಕ್ಕೆ ಬಂದಿದ್ದೆ.ಇಲ್ಲಿ ಕೊರೆಯುವ ಹಿಮದ ಚಳಿ.ಅದರ ತೀವ್ರತೆಗೆ ಜ್ವರ ಬಿಟ್ಟು ಹೋಗಲಾರೆ ಅನ್ನುತ್ತಿದೆ.

ನಿಮಗೆ ಸಿಗದೆ ಇದ್ದುದಕ್ಕೆ ಬೇಸರವಿದೆ.

ಇಂತಹ ಕಾರ್ಯಕ್ರಮಗಳಿಗೆ ಕಾರಣ ಹೇಳಿ ತಪ್ಪಿಸಿಕೊಳ್ಳಬಾರದು.

ಗೋವಿಂದ್ ಅಣ್ಣ ನಿನ್ನೆ ನಿಮ್ಮ ಸನ್ಮಾನ ವಾಚನದ ವೇಳೆ ಜನರ ಕಿವಿಗಡಚಿಕ್ಕುವ ಚಪ್ಪಾಳೆಗೆ ಇಡೀಯ ಸಭಾಂಗಣ ಸಾಕ್ಷಿಆಯಿತು.ನೀವು ಬದುಕಿನ ಹಾದಿಯಲ್ಲಿ ನಡೆದು ಬಂದ ಗಳಿಗೆಗಳ ಒಂದೊಂದು ಹೆಜ್ಜೆಗಳು ಅಲ್ಲಿ ಅನಾವರಣವಾಯಿತು.

ಹೊತ್ತಿನಲ್ಲಿಯೂ

ನಿಮ್ಮ ಮುಖದಲ್ಲಿ ಇದ್ದದ್ದು  ಮಂದಹಾಸ ಬಿಟ್ಟರೇ,ಅಹಂಕಾರದ ಲವಲೇಶವೂ ಇರಲಿಲ್ಲ.

ನನ್ನ ಅನೇಕ ಸ್ನೇಹಿತರು ಇವತ್ತು ಕಾಲ್ ಮಾಡಿ ನಿಮ್ಮ ಸರಳತೆಯ ಬಗ್ಗೆ ಸೌಜನ್ಯತೆಯ ಬಗ್ಗೆ ಮಾತನಾಡಿದರು.

ಬದುಕಿದರೆ ನಿಮ್ಮಂತೆ ಬದುಕಬೇಕು ಅಂದರು.ಅವರೆಲ್ಲರಿಗೂ ನೀವು ಸ್ಫೂರ್ತಿ ಆದಿರಿ.ಅನೇಕರನ್ನು ಕರೆದು ನಿಮ್ಮೊಂದಿಗೆ ನಾನಿದ್ದೇನೆಅನ್ನುವ ದೈರ್ಯದ ಮಾತುಗಳನ್ನು ಆಡಿದ್ದು ತಿಳಿಯಿತು.ಅಂತಹ ಸಾಂತ್ವನ ನಿಮ್ಮಂತವರು ಮಾತ್ರ ಕೊಡಲು ಸಾಧ್ಯ ಗೋವಿಂದ ಅಣ್ಣ.

ಹಣ ಗಳಿಸುವುದು,ಅಂತಸ್ತನ್ನು ಸಂಪಾದಿಸುವುದು ಬಂಗ್ಲೆ ಕಾರುಗಳನ್ನು ಖರೀದಿಸುವುದು ವಿಶೇಷವಲ್ಲ.ಆದರೆ ಜನರ ಪ್ರೀತಿಯನ್ನುಗಳಿಸುವುದು ಅದರಲ್ಲೂ ಅನ್ಯ ರಾಜ್ಯದಲ್ಲಿ ಇಲ್ಲಿನವರ ಅಭಿಮಾನಕ್ಕೆ ಪಾತ್ರರಾಗುವುದಿದೆಯಲ್ಲಾ ಅದು ಸರ್ವಶ್ರೇಷ್ಠ.ಮಾನವೀಯತೆಮತ್ತು ಪ್ರಾಮಾಣಿಕತೆ ನಿಮ್ಮ ಮೂಲ ಗುಣಗಳು.

ಅದನ್ನು ನಿನ್ನೆ ಮುಂಬೈಯ ಜನ ಗುರುತಿಸಿದ್ದಾರೆ.

ನಿಮ್ಮನ್ನು ಬೇಟಿಯಾಗದೆ ಇದ್ದುದಕ್ಕೆ ಕ್ಷಮೆ ಕೋರುತ್ತಾ,ನಾನಿದ್ದಲ್ಲಿಗೆ ಬಂದಾಗ ನಾನು ನಿಮಗೆ ಸಿಗಲಿಲ್ಲ.ಆದರೆ ಕೆಲವೇ ಕೆಲವುದಿನಗಳಲ್ಲಿ ನಾನು ನೀವು ಇದ್ದಲ್ಲಿಗೆ ಅಂದರೇ ಬೆಂಗಳೂರಿಗೆ ಬಂದು ನಿಮ್ಮ ಜೊತೆಗೊಂದಿಷ್ಟು ಹೊತ್ತು ಇದ್ದು ಬರಲುತೀರ್ಮಾನಿಸಿದ್ದೇನೆ….

ನಿಮ್ಮನ್ನು ಸನ್ಮಾನಿಸಿದ ಬಿಲ್ಲವರ ಅಸೋಸಿಯೇಷನ್ ನನ್ನೆಲ್ಲ ಆತ್ಮೀಯ ಬಳಗಕ್ಕೆ ವಂದಿಸುತ್ತಾ,ನಿಮ್ಮ ಪ್ರೀತಿಗೆ ತಲೆಬಾಗುತ್ತಾ,

ನಿಮ್ಮ ಸಲಹೆ ಸಹಕಾರ ಯಾವತ್ತೂ ಹೀಗೆಯೇ ಇರಲಿ ಎಂದು ಆಶಿಸುವ

ಇಂತೀ ನಿಮ್ಮವ,

✍️ಉದಯ್ ಕುಂದಾಪುರ

             (ಮುಂಬೈ)


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »