TOP STORIES:

FOLLOW US

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ ದಬ’


ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ.

ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.

“ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ ಕಾಮಿಡಿಯಿರುವ ಈ ಚಿತ್ರದ ಕಥೆ ಸಿದ್ದಾವಾಯಿತು. ಕಥೆಗೆ ಒಳ್ಳೆಯ ಟೈಟಲ್ ಬೇಕಿತ್ತು. ಮನೆಯಲ್ಲಿ ನನ್ನ ಅಣ್ಣ, ಅವಳ ಮಗಳಿಗೆ ಅದೇನು ಹೇಳುತ್ತಾಳೊ.. ಗೊತ್ತೆ ಆಗಲ್ಲ “ಅಬ ಜಬ ದಬ” ಅಂತಾಳೆ ಎಂದ. ನಾನು ತಕ್ಷಣ ಈ ಶೀರ್ಷಿಕೆ ಚೆನ್ನಾಗಿದೆ ಅಂತ ಅದೇ ಇಟ್ಟಿದ್ದೀನಿ. ಆನಂತರ ಸ್ನೇಹಿತ ಅನಂತ ಕೃಷ್ಣ ನಿರ್ಮಾಣಕ್ಕೆ ಮುಂದಾದರು. ಪೃಥ್ವಿ ಅಂಬರ್ – ಅಂಕಿತ ಅಮರ್ ನಾಯಕ – ನಾಯಕಿ ಅಂತ ನಿಗದಿಯಾದರು.

ಅಚ್ಯುತಕುಮಾರ್ ಕುಮಾರ್, ಸುಧಾರಾಣಿ, ಹಿರಿಯ ನಟಿ ಊರ್ವಶಿ, ಬಾಬು ಹಿರಣ್ಣಯ್ಯ, ಸಂಗೀತಾ ಭಟ್ ನಮ್ಮ ಚಿತ್ರದಲ್ಲಿ ‌ಅಭಿನಯಿಸಲು ಒಪ್ಪಿದ್ದರು.‌ ಗಿರಿಧರ್ ದಿವಾನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಮೀರ ಸಿಂಹ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌ ಎಲ್ಲರ ಸಹಕಾರದಿಂದ “ಅಬ ಜಬ ದಬ” ಒಳ್ಳೆಯ ಚಿತ್ರವಾಗಿ ಹೊರಹೊಮ್ಮಲಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಮಯೂರ ರಾಘವೇಂದ್ರ.

ನನಗೆ ಮಯೂರ ರಾಘವೇಂದ್ರ ಕಥೆ ಇಷ್ಟವಾಯಿತು. ಇದು ಬರೀ ಕಾಮಿಡಿ ಸಿನಿಮಾ ಅಲ್ಲ. ಫ್ಯಾಂಟಸಿ ಕಾಮಿಡಿ ಸಿನಿಮಾ. ಚಿತ್ರದ ಹಾಡುಗಳು ಚೆನ್ನಾಗಿದೆ. ಊರ್ವಶಿ ಅವರಂತಹ ಹಿರಿಯ ನಟರೊಂದಿಗೆ ನಟಿಸಿದ್ದು ಸಂತೋಷವಾಗಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನನ್ನ ಪಾತ್ರ ಕೂಡ ಸುಂದರವಾಗಿದೆ ಎಂದರು ನಾಯಕ ಪೃಥ್ವಿ ಅಂಬರ್.

ಇದು ನಾನು ಬಣ್ಣ ಹಚ್ಚಿದ ಮೊದಲ ಚಿತ್ರ. ಪ್ರಿಯ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಗಾಯಕಿ. ಎಸ್.ಪಿ.ಬಿ ಅವರ ಅಭಿಮಾನಿ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಅಂಕಿತ ಅಮರ್ ಮಾಹಿತಿ ನೀಡಿದರು.

ಮೂರು ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಸುನಂದಾ ಕಾಂಬ್ರೇಕರ್ ನನ್ನ ಪಾತ್ರದ ಹೆಸರು. ವಿಶೇಷ ಪಾತ್ರ ಅಂತ ಹೇಳಬಹುದು ಎಂದರು ನಟಿ ಸಂಗೀತಾ ಭಟ್. ನಿರ್ಮಾಪಕ ಅನಂತ ಕೃಷ್ಣ, ಛಾಯಾಗ್ರಾಹಕ ಗಿರಿಧರ್ ದಿವಾನ್ ಹಾಗೂ ನಟ ಬಾಬು ಹಿರಣ್ಣಯ್ಯ ಚಿತ್ರದ ಕುರಿತು ಮಾತನಾಡಿದರು. ಸತೀಶ್ ರಘುನಾಥನ್ ಈ ಚಿತ್ರದ ಸಂಗೀತ ನಿರ್ದೇಶಕರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »