TOP STORIES:

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!


‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ ಇದೀಗ ಜನಪ್ರೀಯತೆಯನ್ನ ಪಡೆದಿದ್ದಾನೆ. ಹೌದು ನಾವು ಹೇಳ ಹೊರಟಿರುವುದು ಉಡುಪಿಯ ಕಾಡೂರು ಮೂಲದ ದಯಾನಂದ ಮತ್ತು ಸುನೀತಾ ದಂಪತಿಯ ಪುತ್ರ ಸಂಜಯ್ ಅವ್ರ ಬಗ್ಗೆ. ಸಂಜಯ್ ಓದಿರೋದು ಡಿಪ್ಲೋಮ ಇನ್ ಸಯನ್ಸ್. ಹುಟ್ಟಿನಿಂದಲೇ ಒಂದಲ್ಲ ಒಂದು ಕ್ಷೇತ್ರದಲ್ಲಿ ಏನಾದ್ರು ಒಂದು ಸಾಧನೆಯನ್ನ ಮಾಡಲೇಬೇಕು ಅನ್ನೋ ಛಲವನ್ನ ಹೊಂದಿದ್ದ ಸಂಜಯ್ ಗೆ ‘ಮೈಕ್ರೋ ಆರ್ಟ್’ ತನ್ನಲ್ಲಿನ ಕಲೆಯನ್ನ ಪ್ರದರ್ಶಿಸಿತು. ಜೊತೆಗೆ ಜೀವನದಲ್ಲಿ ಸಾಧನೆಯನ್ನ ಮಾಡುವ ಛಲವನ್ನ ತೋರಿಸಿಕೊಟ್ಟಿತು. ಯಸ್ ಮೈಕ್ರೋ ಆರ್ಟ್ ಅರ್ಥಾತ್ ಸೂಕ್ಷ್ಮ ಕಲಾ ಕ್ಷೇತ್ರ. ಇದೇನು ಅಷ್ಟು ಸುಲಭದ ಕಲೆಯಲ್ಲ. ಅದಕ್ಕೆ ಅದರದೇ ರೀತಿ ಸೂಕ್ಷ್ಮ ಮತ್ತು ಕಠಿಣ ಪರಿಶ್ರಮಬೇಕು. ಚೂರು ಎಡವಿದರೂ ಕಲಾಕೃತಿ ಹಾಗೂ ಮಾಡಿದ ಪರಿಶ್ರಮ ವ್ಯರ್ಥವಾಗಿಬಿಡುತ್ತೆ. ಅಷ್ಟು ಸೂಕ್ಷ್ಮ ಕಲೆ ಇದು.

ತಾತ ಕೊರಗಪ್ಪ ಮತ್ತು ಅಜ್ಜಿ ಸುಂದರಮ್ಮರ ಮೂಲಕ ಮೈಕ್ರೋ ಆರ್ಟ್ ಮಾಡಲು ಸ್ಫೂರ್ತಿ ಪಡೆದ ಇವರಿಗೆ ಆರಂಭದಲ್ಲಿ ಬೆಂಬಲಕ್ಕೆ ನಿಂತವರು ಕೇವಲ ಕುಟುಂಬದವರು ಅರ್ಥಾತ್ ಸಹೋದರರು ಮತ್ತು ಪಾಲಕರು ಹಾಗೂ ಕೆಲವು ಗೆಳೆಯರು ಮಾತ್ರ. ಹಾಗಾಗಿ ಸಂಜಯ್ ಇವತ್ತಿಗೂ ಅವರಿಗೆ ಅಭಾರಿಯಾಗಿ ನನ್ನ ಸಾಧನೆಯ ಪರಿಶ್ರಮಕ್ಕೆ ಹೆಜ್ಜೆ ಹಾಕಿದವರು ಎನ್ನುತ್ತಾರೆ.

ಅಂದಹಾಗೆ ಸಂಜಯ್ ಇದುವರೆಗೂ 2 ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್, 1 ವರ್ಲ್ಡ್ ಕಿಂಗ್ಸ್, ಮತ್ತು 2 ಗಿನ್ನಿಸ್ ದಾಖಲೆ ಮಾಡಿದ್ದಾರೆ. ಇವರ ಸಾಧನೆ ಗುರುತಿಸಿ ಇದುವರೆಗೂ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು, ಜಿಲ್ಲಾ ಮಟ್ಟದಲ್ಲಿ 1 ಸನ್ಮಾನ (ಸಂಘಟನೆಗಳ ಮೂಲಕ ), ಸ್ಥಳೀಯ ಆಡಳಿತ (ಗ್ರಾಮ ಪಂಚಾಯತ್ )ವತಿಯಿಂದ 5 ಸನ್ಮಾನ ಸೇರಿದಂತೆ 35ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ ಪಡೆದಿದ್ದಾರೆ. ಜೊತೆಗೆ ಮಂಗಳೂರಿಯನ್.ಕಾಮ್ ಮತ್ತು ಡೈಜಿವರ್ಲ್ಡ್ ಚಾನೆಲ್ ನ ವೆಬ್ಸೈಟ್ ನಲ್ಲಿ ಇವರ ಸಾಧನೆ ಕುರಿತು ಲೇಖನ ಪ್ರಕಟವಾಗಿತ್ತು.

ಇಷ್ಟೇ ಅಲ್ಲ ಇವರು ಇದುವರೆಗೂ 25 ಮಣ್ಣಿನ ಕಲಾಕೃತಿ, 15-20 ಸೋಪ್ ಆರ್ಟ್, 100ಕ್ಕೂ ಹೆಚ್ಚು ಚಾಕ್ ಆರ್ಟ್, 25-30 ಪೆನ್ಸಿಲ್ ಆರ್ಟ್, 30 ಪೆನ್ಸಿಲ್ ಗಣೇಶ ಮೂರ್ತಿ ಮಾಡಿದ್ದಾರೆ. ಇವರೊಬ್ಬ ಬಹುಮುಖ ಪ್ರತಿಭೆ. ‘ಚಿನ್ಮಯ’ ಹೆಸರಿನ ಒಂದು ಕವನ ಸಂಕಲನವನ್ನು ಕೂಡಾ ಬರೆದಿದ್ದು ಹಲವಾರು ಪೇಂಟಿಂಗ್ಸ್ ಕೂಡಾ ಮಾಡಿದ್ದಾರೆ.

ಇನ್ನೇನು ಸಂಜಯ್ 2 ಗಿನ್ನಿಸ್ ದಾಖಲೆ ಬರೆದಿದ್ದಾರೆ ಅಂದ ಮಾತ್ರಕ್ಕೆ ಇವರ ಆರಂಭಿಕ ಜೀವನ ಹೂವಿನ ಹಾಸಿಗೆಯಾಗಿತ್ತು ಅಂತ ಭಾವಿಸಿದ್ದರೆ ಅದು ಮೂರ್ಖತನ. ಯಾಕಂದ್ರೆ ಅವರ ಬದುಕಿನುದ್ದಕ್ಕೂ ಕಷ್ಟಗಳನ್ನೇ ಅನುಭವಿಸಿ ಮೇಲೆ ಬಂದವರು. ಹಾಗಾಗಿ ಇಂತಹ ಕಲಾವಿದರಿಗೆ ಇನ್ನಷ್ಟು ಬೆಂಬಲ ದೊರೆಯಲಿ ಮತ್ತು ಅದರಿಂದ ಇನ್ನಷ್ಟು ಸಾಧನೆ ಮಾಡಲು ಶಕ್ತಿ ಸ್ಫೂರ್ತಿ ದೊರೆಯಲಿ ಎನ್ನುವ ಆಶಯ ನಮ್ಮದು.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »