TOP STORIES:

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!


‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ ಇದೀಗ ಜನಪ್ರೀಯತೆಯನ್ನ ಪಡೆದಿದ್ದಾನೆ. ಹೌದು ನಾವು ಹೇಳ ಹೊರಟಿರುವುದು ಉಡುಪಿಯ ಕಾಡೂರು ಮೂಲದ ದಯಾನಂದ ಮತ್ತು ಸುನೀತಾ ದಂಪತಿಯ ಪುತ್ರ ಸಂಜಯ್ ಅವ್ರ ಬಗ್ಗೆ. ಸಂಜಯ್ ಓದಿರೋದು ಡಿಪ್ಲೋಮ ಇನ್ ಸಯನ್ಸ್. ಹುಟ್ಟಿನಿಂದಲೇ ಒಂದಲ್ಲ ಒಂದು ಕ್ಷೇತ್ರದಲ್ಲಿ ಏನಾದ್ರು ಒಂದು ಸಾಧನೆಯನ್ನ ಮಾಡಲೇಬೇಕು ಅನ್ನೋ ಛಲವನ್ನ ಹೊಂದಿದ್ದ ಸಂಜಯ್ ಗೆ ‘ಮೈಕ್ರೋ ಆರ್ಟ್’ ತನ್ನಲ್ಲಿನ ಕಲೆಯನ್ನ ಪ್ರದರ್ಶಿಸಿತು. ಜೊತೆಗೆ ಜೀವನದಲ್ಲಿ ಸಾಧನೆಯನ್ನ ಮಾಡುವ ಛಲವನ್ನ ತೋರಿಸಿಕೊಟ್ಟಿತು. ಯಸ್ ಮೈಕ್ರೋ ಆರ್ಟ್ ಅರ್ಥಾತ್ ಸೂಕ್ಷ್ಮ ಕಲಾ ಕ್ಷೇತ್ರ. ಇದೇನು ಅಷ್ಟು ಸುಲಭದ ಕಲೆಯಲ್ಲ. ಅದಕ್ಕೆ ಅದರದೇ ರೀತಿ ಸೂಕ್ಷ್ಮ ಮತ್ತು ಕಠಿಣ ಪರಿಶ್ರಮಬೇಕು. ಚೂರು ಎಡವಿದರೂ ಕಲಾಕೃತಿ ಹಾಗೂ ಮಾಡಿದ ಪರಿಶ್ರಮ ವ್ಯರ್ಥವಾಗಿಬಿಡುತ್ತೆ. ಅಷ್ಟು ಸೂಕ್ಷ್ಮ ಕಲೆ ಇದು.

ತಾತ ಕೊರಗಪ್ಪ ಮತ್ತು ಅಜ್ಜಿ ಸುಂದರಮ್ಮರ ಮೂಲಕ ಮೈಕ್ರೋ ಆರ್ಟ್ ಮಾಡಲು ಸ್ಫೂರ್ತಿ ಪಡೆದ ಇವರಿಗೆ ಆರಂಭದಲ್ಲಿ ಬೆಂಬಲಕ್ಕೆ ನಿಂತವರು ಕೇವಲ ಕುಟುಂಬದವರು ಅರ್ಥಾತ್ ಸಹೋದರರು ಮತ್ತು ಪಾಲಕರು ಹಾಗೂ ಕೆಲವು ಗೆಳೆಯರು ಮಾತ್ರ. ಹಾಗಾಗಿ ಸಂಜಯ್ ಇವತ್ತಿಗೂ ಅವರಿಗೆ ಅಭಾರಿಯಾಗಿ ನನ್ನ ಸಾಧನೆಯ ಪರಿಶ್ರಮಕ್ಕೆ ಹೆಜ್ಜೆ ಹಾಕಿದವರು ಎನ್ನುತ್ತಾರೆ.

ಅಂದಹಾಗೆ ಸಂಜಯ್ ಇದುವರೆಗೂ 2 ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್, 1 ವರ್ಲ್ಡ್ ಕಿಂಗ್ಸ್, ಮತ್ತು 2 ಗಿನ್ನಿಸ್ ದಾಖಲೆ ಮಾಡಿದ್ದಾರೆ. ಇವರ ಸಾಧನೆ ಗುರುತಿಸಿ ಇದುವರೆಗೂ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು, ಜಿಲ್ಲಾ ಮಟ್ಟದಲ್ಲಿ 1 ಸನ್ಮಾನ (ಸಂಘಟನೆಗಳ ಮೂಲಕ ), ಸ್ಥಳೀಯ ಆಡಳಿತ (ಗ್ರಾಮ ಪಂಚಾಯತ್ )ವತಿಯಿಂದ 5 ಸನ್ಮಾನ ಸೇರಿದಂತೆ 35ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ ಪಡೆದಿದ್ದಾರೆ. ಜೊತೆಗೆ ಮಂಗಳೂರಿಯನ್.ಕಾಮ್ ಮತ್ತು ಡೈಜಿವರ್ಲ್ಡ್ ಚಾನೆಲ್ ನ ವೆಬ್ಸೈಟ್ ನಲ್ಲಿ ಇವರ ಸಾಧನೆ ಕುರಿತು ಲೇಖನ ಪ್ರಕಟವಾಗಿತ್ತು.

ಇಷ್ಟೇ ಅಲ್ಲ ಇವರು ಇದುವರೆಗೂ 25 ಮಣ್ಣಿನ ಕಲಾಕೃತಿ, 15-20 ಸೋಪ್ ಆರ್ಟ್, 100ಕ್ಕೂ ಹೆಚ್ಚು ಚಾಕ್ ಆರ್ಟ್, 25-30 ಪೆನ್ಸಿಲ್ ಆರ್ಟ್, 30 ಪೆನ್ಸಿಲ್ ಗಣೇಶ ಮೂರ್ತಿ ಮಾಡಿದ್ದಾರೆ. ಇವರೊಬ್ಬ ಬಹುಮುಖ ಪ್ರತಿಭೆ. ‘ಚಿನ್ಮಯ’ ಹೆಸರಿನ ಒಂದು ಕವನ ಸಂಕಲನವನ್ನು ಕೂಡಾ ಬರೆದಿದ್ದು ಹಲವಾರು ಪೇಂಟಿಂಗ್ಸ್ ಕೂಡಾ ಮಾಡಿದ್ದಾರೆ.

ಇನ್ನೇನು ಸಂಜಯ್ 2 ಗಿನ್ನಿಸ್ ದಾಖಲೆ ಬರೆದಿದ್ದಾರೆ ಅಂದ ಮಾತ್ರಕ್ಕೆ ಇವರ ಆರಂಭಿಕ ಜೀವನ ಹೂವಿನ ಹಾಸಿಗೆಯಾಗಿತ್ತು ಅಂತ ಭಾವಿಸಿದ್ದರೆ ಅದು ಮೂರ್ಖತನ. ಯಾಕಂದ್ರೆ ಅವರ ಬದುಕಿನುದ್ದಕ್ಕೂ ಕಷ್ಟಗಳನ್ನೇ ಅನುಭವಿಸಿ ಮೇಲೆ ಬಂದವರು. ಹಾಗಾಗಿ ಇಂತಹ ಕಲಾವಿದರಿಗೆ ಇನ್ನಷ್ಟು ಬೆಂಬಲ ದೊರೆಯಲಿ ಮತ್ತು ಅದರಿಂದ ಇನ್ನಷ್ಟು ಸಾಧನೆ ಮಾಡಲು ಶಕ್ತಿ ಸ್ಫೂರ್ತಿ ದೊರೆಯಲಿ ಎನ್ನುವ ಆಶಯ ನಮ್ಮದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »