TOP STORIES:

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!


‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ ಇದೀಗ ಜನಪ್ರೀಯತೆಯನ್ನ ಪಡೆದಿದ್ದಾನೆ. ಹೌದು ನಾವು ಹೇಳ ಹೊರಟಿರುವುದು ಉಡುಪಿಯ ಕಾಡೂರು ಮೂಲದ ದಯಾನಂದ ಮತ್ತು ಸುನೀತಾ ದಂಪತಿಯ ಪುತ್ರ ಸಂಜಯ್ ಅವ್ರ ಬಗ್ಗೆ. ಸಂಜಯ್ ಓದಿರೋದು ಡಿಪ್ಲೋಮ ಇನ್ ಸಯನ್ಸ್. ಹುಟ್ಟಿನಿಂದಲೇ ಒಂದಲ್ಲ ಒಂದು ಕ್ಷೇತ್ರದಲ್ಲಿ ಏನಾದ್ರು ಒಂದು ಸಾಧನೆಯನ್ನ ಮಾಡಲೇಬೇಕು ಅನ್ನೋ ಛಲವನ್ನ ಹೊಂದಿದ್ದ ಸಂಜಯ್ ಗೆ ‘ಮೈಕ್ರೋ ಆರ್ಟ್’ ತನ್ನಲ್ಲಿನ ಕಲೆಯನ್ನ ಪ್ರದರ್ಶಿಸಿತು. ಜೊತೆಗೆ ಜೀವನದಲ್ಲಿ ಸಾಧನೆಯನ್ನ ಮಾಡುವ ಛಲವನ್ನ ತೋರಿಸಿಕೊಟ್ಟಿತು. ಯಸ್ ಮೈಕ್ರೋ ಆರ್ಟ್ ಅರ್ಥಾತ್ ಸೂಕ್ಷ್ಮ ಕಲಾ ಕ್ಷೇತ್ರ. ಇದೇನು ಅಷ್ಟು ಸುಲಭದ ಕಲೆಯಲ್ಲ. ಅದಕ್ಕೆ ಅದರದೇ ರೀತಿ ಸೂಕ್ಷ್ಮ ಮತ್ತು ಕಠಿಣ ಪರಿಶ್ರಮಬೇಕು. ಚೂರು ಎಡವಿದರೂ ಕಲಾಕೃತಿ ಹಾಗೂ ಮಾಡಿದ ಪರಿಶ್ರಮ ವ್ಯರ್ಥವಾಗಿಬಿಡುತ್ತೆ. ಅಷ್ಟು ಸೂಕ್ಷ್ಮ ಕಲೆ ಇದು.

ತಾತ ಕೊರಗಪ್ಪ ಮತ್ತು ಅಜ್ಜಿ ಸುಂದರಮ್ಮರ ಮೂಲಕ ಮೈಕ್ರೋ ಆರ್ಟ್ ಮಾಡಲು ಸ್ಫೂರ್ತಿ ಪಡೆದ ಇವರಿಗೆ ಆರಂಭದಲ್ಲಿ ಬೆಂಬಲಕ್ಕೆ ನಿಂತವರು ಕೇವಲ ಕುಟುಂಬದವರು ಅರ್ಥಾತ್ ಸಹೋದರರು ಮತ್ತು ಪಾಲಕರು ಹಾಗೂ ಕೆಲವು ಗೆಳೆಯರು ಮಾತ್ರ. ಹಾಗಾಗಿ ಸಂಜಯ್ ಇವತ್ತಿಗೂ ಅವರಿಗೆ ಅಭಾರಿಯಾಗಿ ನನ್ನ ಸಾಧನೆಯ ಪರಿಶ್ರಮಕ್ಕೆ ಹೆಜ್ಜೆ ಹಾಕಿದವರು ಎನ್ನುತ್ತಾರೆ.

ಅಂದಹಾಗೆ ಸಂಜಯ್ ಇದುವರೆಗೂ 2 ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್, 1 ವರ್ಲ್ಡ್ ಕಿಂಗ್ಸ್, ಮತ್ತು 2 ಗಿನ್ನಿಸ್ ದಾಖಲೆ ಮಾಡಿದ್ದಾರೆ. ಇವರ ಸಾಧನೆ ಗುರುತಿಸಿ ಇದುವರೆಗೂ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು, ಜಿಲ್ಲಾ ಮಟ್ಟದಲ್ಲಿ 1 ಸನ್ಮಾನ (ಸಂಘಟನೆಗಳ ಮೂಲಕ ), ಸ್ಥಳೀಯ ಆಡಳಿತ (ಗ್ರಾಮ ಪಂಚಾಯತ್ )ವತಿಯಿಂದ 5 ಸನ್ಮಾನ ಸೇರಿದಂತೆ 35ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ ಪಡೆದಿದ್ದಾರೆ. ಜೊತೆಗೆ ಮಂಗಳೂರಿಯನ್.ಕಾಮ್ ಮತ್ತು ಡೈಜಿವರ್ಲ್ಡ್ ಚಾನೆಲ್ ನ ವೆಬ್ಸೈಟ್ ನಲ್ಲಿ ಇವರ ಸಾಧನೆ ಕುರಿತು ಲೇಖನ ಪ್ರಕಟವಾಗಿತ್ತು.

ಇಷ್ಟೇ ಅಲ್ಲ ಇವರು ಇದುವರೆಗೂ 25 ಮಣ್ಣಿನ ಕಲಾಕೃತಿ, 15-20 ಸೋಪ್ ಆರ್ಟ್, 100ಕ್ಕೂ ಹೆಚ್ಚು ಚಾಕ್ ಆರ್ಟ್, 25-30 ಪೆನ್ಸಿಲ್ ಆರ್ಟ್, 30 ಪೆನ್ಸಿಲ್ ಗಣೇಶ ಮೂರ್ತಿ ಮಾಡಿದ್ದಾರೆ. ಇವರೊಬ್ಬ ಬಹುಮುಖ ಪ್ರತಿಭೆ. ‘ಚಿನ್ಮಯ’ ಹೆಸರಿನ ಒಂದು ಕವನ ಸಂಕಲನವನ್ನು ಕೂಡಾ ಬರೆದಿದ್ದು ಹಲವಾರು ಪೇಂಟಿಂಗ್ಸ್ ಕೂಡಾ ಮಾಡಿದ್ದಾರೆ.

ಇನ್ನೇನು ಸಂಜಯ್ 2 ಗಿನ್ನಿಸ್ ದಾಖಲೆ ಬರೆದಿದ್ದಾರೆ ಅಂದ ಮಾತ್ರಕ್ಕೆ ಇವರ ಆರಂಭಿಕ ಜೀವನ ಹೂವಿನ ಹಾಸಿಗೆಯಾಗಿತ್ತು ಅಂತ ಭಾವಿಸಿದ್ದರೆ ಅದು ಮೂರ್ಖತನ. ಯಾಕಂದ್ರೆ ಅವರ ಬದುಕಿನುದ್ದಕ್ಕೂ ಕಷ್ಟಗಳನ್ನೇ ಅನುಭವಿಸಿ ಮೇಲೆ ಬಂದವರು. ಹಾಗಾಗಿ ಇಂತಹ ಕಲಾವಿದರಿಗೆ ಇನ್ನಷ್ಟು ಬೆಂಬಲ ದೊರೆಯಲಿ ಮತ್ತು ಅದರಿಂದ ಇನ್ನಷ್ಟು ಸಾಧನೆ ಮಾಡಲು ಶಕ್ತಿ ಸ್ಫೂರ್ತಿ ದೊರೆಯಲಿ ಎನ್ನುವ ಆಶಯ ನಮ್ಮದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »