TOP STORIES:

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!


‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ ಇದೀಗ ಜನಪ್ರೀಯತೆಯನ್ನ ಪಡೆದಿದ್ದಾನೆ. ಹೌದು ನಾವು ಹೇಳ ಹೊರಟಿರುವುದು ಉಡುಪಿಯ ಕಾಡೂರು ಮೂಲದ ದಯಾನಂದ ಮತ್ತು ಸುನೀತಾ ದಂಪತಿಯ ಪುತ್ರ ಸಂಜಯ್ ಅವ್ರ ಬಗ್ಗೆ. ಸಂಜಯ್ ಓದಿರೋದು ಡಿಪ್ಲೋಮ ಇನ್ ಸಯನ್ಸ್. ಹುಟ್ಟಿನಿಂದಲೇ ಒಂದಲ್ಲ ಒಂದು ಕ್ಷೇತ್ರದಲ್ಲಿ ಏನಾದ್ರು ಒಂದು ಸಾಧನೆಯನ್ನ ಮಾಡಲೇಬೇಕು ಅನ್ನೋ ಛಲವನ್ನ ಹೊಂದಿದ್ದ ಸಂಜಯ್ ಗೆ ‘ಮೈಕ್ರೋ ಆರ್ಟ್’ ತನ್ನಲ್ಲಿನ ಕಲೆಯನ್ನ ಪ್ರದರ್ಶಿಸಿತು. ಜೊತೆಗೆ ಜೀವನದಲ್ಲಿ ಸಾಧನೆಯನ್ನ ಮಾಡುವ ಛಲವನ್ನ ತೋರಿಸಿಕೊಟ್ಟಿತು. ಯಸ್ ಮೈಕ್ರೋ ಆರ್ಟ್ ಅರ್ಥಾತ್ ಸೂಕ್ಷ್ಮ ಕಲಾ ಕ್ಷೇತ್ರ. ಇದೇನು ಅಷ್ಟು ಸುಲಭದ ಕಲೆಯಲ್ಲ. ಅದಕ್ಕೆ ಅದರದೇ ರೀತಿ ಸೂಕ್ಷ್ಮ ಮತ್ತು ಕಠಿಣ ಪರಿಶ್ರಮಬೇಕು. ಚೂರು ಎಡವಿದರೂ ಕಲಾಕೃತಿ ಹಾಗೂ ಮಾಡಿದ ಪರಿಶ್ರಮ ವ್ಯರ್ಥವಾಗಿಬಿಡುತ್ತೆ. ಅಷ್ಟು ಸೂಕ್ಷ್ಮ ಕಲೆ ಇದು.

ತಾತ ಕೊರಗಪ್ಪ ಮತ್ತು ಅಜ್ಜಿ ಸುಂದರಮ್ಮರ ಮೂಲಕ ಮೈಕ್ರೋ ಆರ್ಟ್ ಮಾಡಲು ಸ್ಫೂರ್ತಿ ಪಡೆದ ಇವರಿಗೆ ಆರಂಭದಲ್ಲಿ ಬೆಂಬಲಕ್ಕೆ ನಿಂತವರು ಕೇವಲ ಕುಟುಂಬದವರು ಅರ್ಥಾತ್ ಸಹೋದರರು ಮತ್ತು ಪಾಲಕರು ಹಾಗೂ ಕೆಲವು ಗೆಳೆಯರು ಮಾತ್ರ. ಹಾಗಾಗಿ ಸಂಜಯ್ ಇವತ್ತಿಗೂ ಅವರಿಗೆ ಅಭಾರಿಯಾಗಿ ನನ್ನ ಸಾಧನೆಯ ಪರಿಶ್ರಮಕ್ಕೆ ಹೆಜ್ಜೆ ಹಾಕಿದವರು ಎನ್ನುತ್ತಾರೆ.

ಅಂದಹಾಗೆ ಸಂಜಯ್ ಇದುವರೆಗೂ 2 ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್, 1 ವರ್ಲ್ಡ್ ಕಿಂಗ್ಸ್, ಮತ್ತು 2 ಗಿನ್ನಿಸ್ ದಾಖಲೆ ಮಾಡಿದ್ದಾರೆ. ಇವರ ಸಾಧನೆ ಗುರುತಿಸಿ ಇದುವರೆಗೂ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು, ಜಿಲ್ಲಾ ಮಟ್ಟದಲ್ಲಿ 1 ಸನ್ಮಾನ (ಸಂಘಟನೆಗಳ ಮೂಲಕ ), ಸ್ಥಳೀಯ ಆಡಳಿತ (ಗ್ರಾಮ ಪಂಚಾಯತ್ )ವತಿಯಿಂದ 5 ಸನ್ಮಾನ ಸೇರಿದಂತೆ 35ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ ಪಡೆದಿದ್ದಾರೆ. ಜೊತೆಗೆ ಮಂಗಳೂರಿಯನ್.ಕಾಮ್ ಮತ್ತು ಡೈಜಿವರ್ಲ್ಡ್ ಚಾನೆಲ್ ನ ವೆಬ್ಸೈಟ್ ನಲ್ಲಿ ಇವರ ಸಾಧನೆ ಕುರಿತು ಲೇಖನ ಪ್ರಕಟವಾಗಿತ್ತು.

ಇಷ್ಟೇ ಅಲ್ಲ ಇವರು ಇದುವರೆಗೂ 25 ಮಣ್ಣಿನ ಕಲಾಕೃತಿ, 15-20 ಸೋಪ್ ಆರ್ಟ್, 100ಕ್ಕೂ ಹೆಚ್ಚು ಚಾಕ್ ಆರ್ಟ್, 25-30 ಪೆನ್ಸಿಲ್ ಆರ್ಟ್, 30 ಪೆನ್ಸಿಲ್ ಗಣೇಶ ಮೂರ್ತಿ ಮಾಡಿದ್ದಾರೆ. ಇವರೊಬ್ಬ ಬಹುಮುಖ ಪ್ರತಿಭೆ. ‘ಚಿನ್ಮಯ’ ಹೆಸರಿನ ಒಂದು ಕವನ ಸಂಕಲನವನ್ನು ಕೂಡಾ ಬರೆದಿದ್ದು ಹಲವಾರು ಪೇಂಟಿಂಗ್ಸ್ ಕೂಡಾ ಮಾಡಿದ್ದಾರೆ.

ಇನ್ನೇನು ಸಂಜಯ್ 2 ಗಿನ್ನಿಸ್ ದಾಖಲೆ ಬರೆದಿದ್ದಾರೆ ಅಂದ ಮಾತ್ರಕ್ಕೆ ಇವರ ಆರಂಭಿಕ ಜೀವನ ಹೂವಿನ ಹಾಸಿಗೆಯಾಗಿತ್ತು ಅಂತ ಭಾವಿಸಿದ್ದರೆ ಅದು ಮೂರ್ಖತನ. ಯಾಕಂದ್ರೆ ಅವರ ಬದುಕಿನುದ್ದಕ್ಕೂ ಕಷ್ಟಗಳನ್ನೇ ಅನುಭವಿಸಿ ಮೇಲೆ ಬಂದವರು. ಹಾಗಾಗಿ ಇಂತಹ ಕಲಾವಿದರಿಗೆ ಇನ್ನಷ್ಟು ಬೆಂಬಲ ದೊರೆಯಲಿ ಮತ್ತು ಅದರಿಂದ ಇನ್ನಷ್ಟು ಸಾಧನೆ ಮಾಡಲು ಶಕ್ತಿ ಸ್ಫೂರ್ತಿ ದೊರೆಯಲಿ ಎನ್ನುವ ಆಶಯ ನಮ್ಮದು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »