TOP STORIES:

FOLLOW US

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!


‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ ಇದೀಗ ಜನಪ್ರೀಯತೆಯನ್ನ ಪಡೆದಿದ್ದಾನೆ. ಹೌದು ನಾವು ಹೇಳ ಹೊರಟಿರುವುದು ಉಡುಪಿಯ ಕಾಡೂರು ಮೂಲದ ದಯಾನಂದ ಮತ್ತು ಸುನೀತಾ ದಂಪತಿಯ ಪುತ್ರ ಸಂಜಯ್ ಅವ್ರ ಬಗ್ಗೆ. ಸಂಜಯ್ ಓದಿರೋದು ಡಿಪ್ಲೋಮ ಇನ್ ಸಯನ್ಸ್. ಹುಟ್ಟಿನಿಂದಲೇ ಒಂದಲ್ಲ ಒಂದು ಕ್ಷೇತ್ರದಲ್ಲಿ ಏನಾದ್ರು ಒಂದು ಸಾಧನೆಯನ್ನ ಮಾಡಲೇಬೇಕು ಅನ್ನೋ ಛಲವನ್ನ ಹೊಂದಿದ್ದ ಸಂಜಯ್ ಗೆ ‘ಮೈಕ್ರೋ ಆರ್ಟ್’ ತನ್ನಲ್ಲಿನ ಕಲೆಯನ್ನ ಪ್ರದರ್ಶಿಸಿತು. ಜೊತೆಗೆ ಜೀವನದಲ್ಲಿ ಸಾಧನೆಯನ್ನ ಮಾಡುವ ಛಲವನ್ನ ತೋರಿಸಿಕೊಟ್ಟಿತು. ಯಸ್ ಮೈಕ್ರೋ ಆರ್ಟ್ ಅರ್ಥಾತ್ ಸೂಕ್ಷ್ಮ ಕಲಾ ಕ್ಷೇತ್ರ. ಇದೇನು ಅಷ್ಟು ಸುಲಭದ ಕಲೆಯಲ್ಲ. ಅದಕ್ಕೆ ಅದರದೇ ರೀತಿ ಸೂಕ್ಷ್ಮ ಮತ್ತು ಕಠಿಣ ಪರಿಶ್ರಮಬೇಕು. ಚೂರು ಎಡವಿದರೂ ಕಲಾಕೃತಿ ಹಾಗೂ ಮಾಡಿದ ಪರಿಶ್ರಮ ವ್ಯರ್ಥವಾಗಿಬಿಡುತ್ತೆ. ಅಷ್ಟು ಸೂಕ್ಷ್ಮ ಕಲೆ ಇದು.

ತಾತ ಕೊರಗಪ್ಪ ಮತ್ತು ಅಜ್ಜಿ ಸುಂದರಮ್ಮರ ಮೂಲಕ ಮೈಕ್ರೋ ಆರ್ಟ್ ಮಾಡಲು ಸ್ಫೂರ್ತಿ ಪಡೆದ ಇವರಿಗೆ ಆರಂಭದಲ್ಲಿ ಬೆಂಬಲಕ್ಕೆ ನಿಂತವರು ಕೇವಲ ಕುಟುಂಬದವರು ಅರ್ಥಾತ್ ಸಹೋದರರು ಮತ್ತು ಪಾಲಕರು ಹಾಗೂ ಕೆಲವು ಗೆಳೆಯರು ಮಾತ್ರ. ಹಾಗಾಗಿ ಸಂಜಯ್ ಇವತ್ತಿಗೂ ಅವರಿಗೆ ಅಭಾರಿಯಾಗಿ ನನ್ನ ಸಾಧನೆಯ ಪರಿಶ್ರಮಕ್ಕೆ ಹೆಜ್ಜೆ ಹಾಕಿದವರು ಎನ್ನುತ್ತಾರೆ.

ಅಂದಹಾಗೆ ಸಂಜಯ್ ಇದುವರೆಗೂ 2 ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್, 1 ವರ್ಲ್ಡ್ ಕಿಂಗ್ಸ್, ಮತ್ತು 2 ಗಿನ್ನಿಸ್ ದಾಖಲೆ ಮಾಡಿದ್ದಾರೆ. ಇವರ ಸಾಧನೆ ಗುರುತಿಸಿ ಇದುವರೆಗೂ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು, ಜಿಲ್ಲಾ ಮಟ್ಟದಲ್ಲಿ 1 ಸನ್ಮಾನ (ಸಂಘಟನೆಗಳ ಮೂಲಕ ), ಸ್ಥಳೀಯ ಆಡಳಿತ (ಗ್ರಾಮ ಪಂಚಾಯತ್ )ವತಿಯಿಂದ 5 ಸನ್ಮಾನ ಸೇರಿದಂತೆ 35ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ ಪಡೆದಿದ್ದಾರೆ. ಜೊತೆಗೆ ಮಂಗಳೂರಿಯನ್.ಕಾಮ್ ಮತ್ತು ಡೈಜಿವರ್ಲ್ಡ್ ಚಾನೆಲ್ ನ ವೆಬ್ಸೈಟ್ ನಲ್ಲಿ ಇವರ ಸಾಧನೆ ಕುರಿತು ಲೇಖನ ಪ್ರಕಟವಾಗಿತ್ತು.

ಇಷ್ಟೇ ಅಲ್ಲ ಇವರು ಇದುವರೆಗೂ 25 ಮಣ್ಣಿನ ಕಲಾಕೃತಿ, 15-20 ಸೋಪ್ ಆರ್ಟ್, 100ಕ್ಕೂ ಹೆಚ್ಚು ಚಾಕ್ ಆರ್ಟ್, 25-30 ಪೆನ್ಸಿಲ್ ಆರ್ಟ್, 30 ಪೆನ್ಸಿಲ್ ಗಣೇಶ ಮೂರ್ತಿ ಮಾಡಿದ್ದಾರೆ. ಇವರೊಬ್ಬ ಬಹುಮುಖ ಪ್ರತಿಭೆ. ‘ಚಿನ್ಮಯ’ ಹೆಸರಿನ ಒಂದು ಕವನ ಸಂಕಲನವನ್ನು ಕೂಡಾ ಬರೆದಿದ್ದು ಹಲವಾರು ಪೇಂಟಿಂಗ್ಸ್ ಕೂಡಾ ಮಾಡಿದ್ದಾರೆ.

ಇನ್ನೇನು ಸಂಜಯ್ 2 ಗಿನ್ನಿಸ್ ದಾಖಲೆ ಬರೆದಿದ್ದಾರೆ ಅಂದ ಮಾತ್ರಕ್ಕೆ ಇವರ ಆರಂಭಿಕ ಜೀವನ ಹೂವಿನ ಹಾಸಿಗೆಯಾಗಿತ್ತು ಅಂತ ಭಾವಿಸಿದ್ದರೆ ಅದು ಮೂರ್ಖತನ. ಯಾಕಂದ್ರೆ ಅವರ ಬದುಕಿನುದ್ದಕ್ಕೂ ಕಷ್ಟಗಳನ್ನೇ ಅನುಭವಿಸಿ ಮೇಲೆ ಬಂದವರು. ಹಾಗಾಗಿ ಇಂತಹ ಕಲಾವಿದರಿಗೆ ಇನ್ನಷ್ಟು ಬೆಂಬಲ ದೊರೆಯಲಿ ಮತ್ತು ಅದರಿಂದ ಇನ್ನಷ್ಟು ಸಾಧನೆ ಮಾಡಲು ಶಕ್ತಿ ಸ್ಫೂರ್ತಿ ದೊರೆಯಲಿ ಎನ್ನುವ ಆಶಯ ನಮ್ಮದು.


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »