TOP STORIES:

FOLLOW US

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು ಎಲ್ಲೆಲ್ಲೂ ಹಾಹಾಕಾರ.. ಹೋ ಎಂದು ಬೆಚ್ಚಿ ಬೆದರಿ ಓಡುವ ಜನಮಂದೆಯ ಬೊಬ್ಬೆ ಗಲಾಟೆ. ನೋಡುವುದೇನು?
ಆಗಸದೆತ್ತರಕ್ಕೆ ಧೂಳೆಬ್ಬಿಸುತ್ತ ಹೂಂಕರಿಸುತ್ತಾ ಘೀಳಿಡುತ್ತಾ ಪರ್ವತ ಗಾತ್ರದ ಅರಸನ ಪಟ್ಟದ ಆನೆ ಇಡೀ ಪಟ್ಟಣವನ್ನೇ ಪುಡಿ ಗಟ್ಟುವ ಹುಮ್ಮಸ್ಸಿನಲ್ಲಿ ಮುನ್ನುಗ್ಗಿ ಬರುತ್ತಿತ್ತು. ಅರಮನೆಯ ಲಾಯದಲ್ಲಿ ಕಾಲಿಗೆ ಕಟ್ಟಿದ ಕಬ್ಬಿಣದ ಸಂಕೋಲೆಯನ್ನು ತುಂಡರಿಸಿಕೊಂಡು ಮದ ಏರಿದ ಆನೆ ಪೇಟೆಯ ಕಡೆಗೆ ನುಗ್ಗಿತ್ತು. ಒಂದಷ್ಟು ಕಟ್ಟಾಳುಗಳು ಆನೆಯನ್ನು ಕಟ್ಟಿ ಹಾಕುವ ಭರದಲ್ಲಿ ಮುನ್ನುಗ್ಗಿದರು. ಅವರಲ್ಲಿ ಕೆಲವರು ಸೊಂಡಿಲಿಗೆ ಸಿಕ್ಕಿ ಕಬ್ಬಿನ ಜಲ್ಲೆಯಂತೆ ನೆಲಕ್ಕೆ ಒಗೆಯಲ್ಪಟ್ಟರು. ಇನ್ನು ಕೆಲವರು ಆನೆಯ ಕಾಲಡಿಗೆ ಸಿಕ್ಕಿ ಕುಂಬಳಕಾಯಿಯಂತೆ ತಲೆ ಒಡೆಸಿಕೊಂಡರು. ಈ ರುದ್ರ ಭಯಾನಕ ದೃಶ್ಯ ಕಂಡ ನಗರದ ಜನರು ಆನೆಯನ್ನು ಹಿಡಿಯುವ ಯತ್ನವನ್ನು ಬಿಟ್ಟು ತಮ್ಮ ಮನೆ ಮಠ ಸ್ವತ್ತು ಸಾಮಗ್ರಿಗಳನ್ನು ಉಳಿಸುವ ಧಾವಂತಕ್ಕೆ ಬಿದ್ದರು. ತೆಂಗಿನ ಸೋಗೆಗಳನ್ನು ಸುಟ್ಟು ಆನೆಯನ್ನು ತಮ್ಮ ಬೀದಿಗೆ ಬರದಂತೆ ತಡೆದರು. ದೊಂದಿ ರಾಳಗಳನ್ನು ಹಿಡಿದು ಆನೆಯನ್ನು ಕಾಡಿಗಟ್ಟುವ ಪ್ರಯತ್ನದಲ್ಲಿ ತೊಡಗಿದರು. ಬೆಂಕಿ ಕಂಡು ಬೆದರಿದ ಆನೆ ಪರ್ಪಲೆಯ ತಪ್ಪಲಿಗೆ ಬಂತು. ಅಲ್ಲಿಂದ ಮುಂದೆ ಪರ್ಪಲೆ ಗುಡ್ಡೆ ಹತ್ತಿ ಕಾಣೆಯಾಯಿತು.
ಪಟ್ಟದ ಆನೆಗೆ ಮದ ಏರಿದ ಚಿಂತೆಯಲ್ಲಿ ಅರಸನಿದ್ದರೆ, ಮದ ಏರಿದ ಆನೆ ಪೇಟೆ ಬಿಟ್ಟು ಪರ್ಪಲೆಯ ಗುಡ್ಡ ಹತ್ತಿದ ನೆಮ್ಮದಿಯಲ್ಲಿ ಜನರು ನಿದ್ದೆ ಮಾಡಿದರು.
ಕಾಡಿನಲ್ಲಿ ಅಲೆದು ಮರಗಳ ಮೇಲೆ ಸಿಟ್ಟು ತೋರಿಸಿ ಸುಸ್ತಾದ ಆನೆ ಮರುದಿನ ಮದ ಇಳಿದು ಬಾಯರಿ ನೀರನ್ನು ಅರಸಿಕೊಂಡು ಮೆಲ್ಲನೆ ಪರ್ಪಲೆ ಗುಡ್ಡದ ಪೂರ್ವಕ್ಕೆ ಇಳಿದು ಆನೆಕೆರೆಯ ಕಡೆಗೆ ಹೆಜ್ಜೆ ಹಾಕಿತು. ನಗರದ ಜನರು ಮತ್ತೆ ಸೇರಿದರು. ಮಾವುತನಿಗೆ ಸುದ್ದಿ ಮುಟ್ಟಿಸಿದರು. ಆನೆ ಸಹಜ ಸ್ಥಿತಿಗೆ ಬಂದಿತ್ತು. ಮಾವುತನನ್ನು ಹಿಂಬಾಲಿಸುತ್ತ ಏನೂ ಆಗಿಲ್ಲವೆಂಬಂತೆ ಅರಮನೆಯ ಕಡೆಗೆ ಹೆಜ್ಜೆ ಹಾಕಿತು.
ಅರಮನೆಯ ಬಳಿ ಬಂದು ಗಜ ಲಾಯದ ಗೂಟದ ಸಂಕೋಲೆಯನ್ನು ಆನೆಯ ಕಾಲಿಗೆ ಕಟ್ಟಬೇಕು ಎಂದು ಮಾವುತ ಬಗ್ಗಿದಾಗ ನೋಡುವುದೇನು?
ಆನೆಯ ಕಾಲಿನಲ್ಲಿದ್ದ ಕಬ್ಬಿಣದ ತುಂಡು ಸರಪಳಿ ಬಂಗಾರವಾಗಿದೆ!
ಅಷ್ಟಕ್ಕೂ ಆನೆಯ ಕಾಲಿನಲ್ಲಿದ್ದ ಕಬ್ಬಿಣದ ಸರಪಳಿ ಬಂಗಾರ ವಾಗಿದ್ದು ಹೇಗೆ ?
ಕಬ್ಬಿಣವನ್ನು ಬಂಗಾರ ಮಾಡಿದ ಆ ರಸಬಾವಿ ಅಥವಾ ಸ್ಪರ್ಶಮಣಿ ಪರ್ಪಲೆ ಗುಡ್ಡದಲ್ಲಿ ಎಲ್ಲಿದೆ ?
ಆ ಇಡಿ ರಾತ್ರಿ ಆನೆ ಅಲೆದಾಡಿದ ಪ್ರದೇಶದಲ್ಲಿ ಕಾಲ ಕಬ್ಬಿಣದ ಸರಪಳಿಗೆ ಸ್ಪರ್ಶಿಸಿದ ಆ ಚಮತ್ಕಾರಿ ವಸ್ತು ಯಾವುದು?
ಇತಿಹಾಸದ ಅನೇಕ ಪುಟಗಳಲ್ಲಿ ಬಂದು ಹೋಗುವ ರಸವಿದ್ಯೆಯನ್ನು ಕರಗತ ಮಾಡಿಕೊಂಡ ಯೋಗಿಗಳು ಈ ಗುಡ್ಡದ ಮೇಲಿದ್ದರೇ?
5 ಶತಮಾನಗಳಿಂದ ಜನರ ಬಾಯಿಂದ ಬಾಯಿಗೆ ಹರಡಿ ಕೊಂಡು ಬಂದ ಈ ದಂತ ಕಥೆಯ ಹಿಂದಿನ ರೋಚಕ ಸತ್ಯವೇನು?
ಮೊನ್ನೆ ಅಷ್ಟಮಂಗಲ ಪ್ರಶ್ನೆ ಇರಿಸಿದ ಪಯ್ಯನ್ನೂರಿನ ನಾರಾಯಣ ಪೊದುವಾಲರು.. ಇದ್ ಭೂಮಿ ಸ್ವರ್ಣ ಮಯಿ…ಈ ಭೂಮಿಕ್ಕ್ ಸ್ವರ್ಣ ಸೃಷ್ಟಿಕ್ಕಿನ ಶಕ್ತಿ ಇಂಡ್ ಎಂದಾಗ ನಮ್ಮೆಲ್ಲರ ಮೈ ಮುಳ್ಳೆದ್ದಿದ್ದು ಇದೇ ಕಾರಣಕ್ಕೆ..
ಆವತ್ತಿನ ಅಷ್ಟಮಂಗಲ ಪ್ರಶ್ನೆಯಲ್ಲಿ ಇಂತಹ ಅನೇಕ ಮುಖ್ಯ ಬಿಂದುಗಳು ದೈವಜ್ಞರ ಗಮನಕ್ಕೆ ಬಂದರೂ ಅದನ್ನು ವಿಸ್ತರಿಸುವ ಕೆಲಸ ನಡೆದಿರಲಿಲ್ಲ
ಅರಸನ ಆನೆಯ ಸರಪಳಿ ಬಂಗಾರವಾದ ಕಥೆ ನನಗೆ ತಿಳಿದಿದ್ದು ಅಷ್ಟಮಂಗಲ ಪ್ರಶ್ನೆ ಮುಗಿದು ಒಂದು ವಾರದ ಬಳಿಕ. ಯಾರೋ ಒಬ್ಬರು ಹಿರಿಯ ಜೈನ ಇಂದ್ರರ ಮೂಲಕ
ಕಾಲದ ಚಿಪ್ಪಿನೊಳಗೆ ಭದ್ರವಾಗಿ ಕುಳಿತಿರುವ ಅನೇಕ ಸಂಗತಿಗಳು ಆ ಶಕ್ತಿಗಳ ಅಪೇಕ್ಷೆಗನುಗುಣವಾಗಿ ಮತ್ತೆ ಮುನ್ನೆಲೆಗೆ ಬರುತ್ತಿದೆ.
ಪರ್ಪಲೆಯ ಸತ್ಯ ಸಾನಿಧ್ಯ ನಿತ್ಯ ನಿರಂತರ ಬೆಳಗುತ್ತಿರಲಿ
ಜೈ ಮಹಾಕಾಲ್

credits: beauty of tulunadu


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »