TOP STORIES:

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು ಎಲ್ಲೆಲ್ಲೂ ಹಾಹಾಕಾರ.. ಹೋ ಎಂದು ಬೆಚ್ಚಿ ಬೆದರಿ ಓಡುವ ಜನಮಂದೆಯ ಬೊಬ್ಬೆ ಗಲಾಟೆ. ನೋಡುವುದೇನು?
ಆಗಸದೆತ್ತರಕ್ಕೆ ಧೂಳೆಬ್ಬಿಸುತ್ತ ಹೂಂಕರಿಸುತ್ತಾ ಘೀಳಿಡುತ್ತಾ ಪರ್ವತ ಗಾತ್ರದ ಅರಸನ ಪಟ್ಟದ ಆನೆ ಇಡೀ ಪಟ್ಟಣವನ್ನೇ ಪುಡಿ ಗಟ್ಟುವ ಹುಮ್ಮಸ್ಸಿನಲ್ಲಿ ಮುನ್ನುಗ್ಗಿ ಬರುತ್ತಿತ್ತು. ಅರಮನೆಯ ಲಾಯದಲ್ಲಿ ಕಾಲಿಗೆ ಕಟ್ಟಿದ ಕಬ್ಬಿಣದ ಸಂಕೋಲೆಯನ್ನು ತುಂಡರಿಸಿಕೊಂಡು ಮದ ಏರಿದ ಆನೆ ಪೇಟೆಯ ಕಡೆಗೆ ನುಗ್ಗಿತ್ತು. ಒಂದಷ್ಟು ಕಟ್ಟಾಳುಗಳು ಆನೆಯನ್ನು ಕಟ್ಟಿ ಹಾಕುವ ಭರದಲ್ಲಿ ಮುನ್ನುಗ್ಗಿದರು. ಅವರಲ್ಲಿ ಕೆಲವರು ಸೊಂಡಿಲಿಗೆ ಸಿಕ್ಕಿ ಕಬ್ಬಿನ ಜಲ್ಲೆಯಂತೆ ನೆಲಕ್ಕೆ ಒಗೆಯಲ್ಪಟ್ಟರು. ಇನ್ನು ಕೆಲವರು ಆನೆಯ ಕಾಲಡಿಗೆ ಸಿಕ್ಕಿ ಕುಂಬಳಕಾಯಿಯಂತೆ ತಲೆ ಒಡೆಸಿಕೊಂಡರು. ಈ ರುದ್ರ ಭಯಾನಕ ದೃಶ್ಯ ಕಂಡ ನಗರದ ಜನರು ಆನೆಯನ್ನು ಹಿಡಿಯುವ ಯತ್ನವನ್ನು ಬಿಟ್ಟು ತಮ್ಮ ಮನೆ ಮಠ ಸ್ವತ್ತು ಸಾಮಗ್ರಿಗಳನ್ನು ಉಳಿಸುವ ಧಾವಂತಕ್ಕೆ ಬಿದ್ದರು. ತೆಂಗಿನ ಸೋಗೆಗಳನ್ನು ಸುಟ್ಟು ಆನೆಯನ್ನು ತಮ್ಮ ಬೀದಿಗೆ ಬರದಂತೆ ತಡೆದರು. ದೊಂದಿ ರಾಳಗಳನ್ನು ಹಿಡಿದು ಆನೆಯನ್ನು ಕಾಡಿಗಟ್ಟುವ ಪ್ರಯತ್ನದಲ್ಲಿ ತೊಡಗಿದರು. ಬೆಂಕಿ ಕಂಡು ಬೆದರಿದ ಆನೆ ಪರ್ಪಲೆಯ ತಪ್ಪಲಿಗೆ ಬಂತು. ಅಲ್ಲಿಂದ ಮುಂದೆ ಪರ್ಪಲೆ ಗುಡ್ಡೆ ಹತ್ತಿ ಕಾಣೆಯಾಯಿತು.
ಪಟ್ಟದ ಆನೆಗೆ ಮದ ಏರಿದ ಚಿಂತೆಯಲ್ಲಿ ಅರಸನಿದ್ದರೆ, ಮದ ಏರಿದ ಆನೆ ಪೇಟೆ ಬಿಟ್ಟು ಪರ್ಪಲೆಯ ಗುಡ್ಡ ಹತ್ತಿದ ನೆಮ್ಮದಿಯಲ್ಲಿ ಜನರು ನಿದ್ದೆ ಮಾಡಿದರು.
ಕಾಡಿನಲ್ಲಿ ಅಲೆದು ಮರಗಳ ಮೇಲೆ ಸಿಟ್ಟು ತೋರಿಸಿ ಸುಸ್ತಾದ ಆನೆ ಮರುದಿನ ಮದ ಇಳಿದು ಬಾಯರಿ ನೀರನ್ನು ಅರಸಿಕೊಂಡು ಮೆಲ್ಲನೆ ಪರ್ಪಲೆ ಗುಡ್ಡದ ಪೂರ್ವಕ್ಕೆ ಇಳಿದು ಆನೆಕೆರೆಯ ಕಡೆಗೆ ಹೆಜ್ಜೆ ಹಾಕಿತು. ನಗರದ ಜನರು ಮತ್ತೆ ಸೇರಿದರು. ಮಾವುತನಿಗೆ ಸುದ್ದಿ ಮುಟ್ಟಿಸಿದರು. ಆನೆ ಸಹಜ ಸ್ಥಿತಿಗೆ ಬಂದಿತ್ತು. ಮಾವುತನನ್ನು ಹಿಂಬಾಲಿಸುತ್ತ ಏನೂ ಆಗಿಲ್ಲವೆಂಬಂತೆ ಅರಮನೆಯ ಕಡೆಗೆ ಹೆಜ್ಜೆ ಹಾಕಿತು.
ಅರಮನೆಯ ಬಳಿ ಬಂದು ಗಜ ಲಾಯದ ಗೂಟದ ಸಂಕೋಲೆಯನ್ನು ಆನೆಯ ಕಾಲಿಗೆ ಕಟ್ಟಬೇಕು ಎಂದು ಮಾವುತ ಬಗ್ಗಿದಾಗ ನೋಡುವುದೇನು?
ಆನೆಯ ಕಾಲಿನಲ್ಲಿದ್ದ ಕಬ್ಬಿಣದ ತುಂಡು ಸರಪಳಿ ಬಂಗಾರವಾಗಿದೆ!
ಅಷ್ಟಕ್ಕೂ ಆನೆಯ ಕಾಲಿನಲ್ಲಿದ್ದ ಕಬ್ಬಿಣದ ಸರಪಳಿ ಬಂಗಾರ ವಾಗಿದ್ದು ಹೇಗೆ ?
ಕಬ್ಬಿಣವನ್ನು ಬಂಗಾರ ಮಾಡಿದ ಆ ರಸಬಾವಿ ಅಥವಾ ಸ್ಪರ್ಶಮಣಿ ಪರ್ಪಲೆ ಗುಡ್ಡದಲ್ಲಿ ಎಲ್ಲಿದೆ ?
ಆ ಇಡಿ ರಾತ್ರಿ ಆನೆ ಅಲೆದಾಡಿದ ಪ್ರದೇಶದಲ್ಲಿ ಕಾಲ ಕಬ್ಬಿಣದ ಸರಪಳಿಗೆ ಸ್ಪರ್ಶಿಸಿದ ಆ ಚಮತ್ಕಾರಿ ವಸ್ತು ಯಾವುದು?
ಇತಿಹಾಸದ ಅನೇಕ ಪುಟಗಳಲ್ಲಿ ಬಂದು ಹೋಗುವ ರಸವಿದ್ಯೆಯನ್ನು ಕರಗತ ಮಾಡಿಕೊಂಡ ಯೋಗಿಗಳು ಈ ಗುಡ್ಡದ ಮೇಲಿದ್ದರೇ?
5 ಶತಮಾನಗಳಿಂದ ಜನರ ಬಾಯಿಂದ ಬಾಯಿಗೆ ಹರಡಿ ಕೊಂಡು ಬಂದ ಈ ದಂತ ಕಥೆಯ ಹಿಂದಿನ ರೋಚಕ ಸತ್ಯವೇನು?
ಮೊನ್ನೆ ಅಷ್ಟಮಂಗಲ ಪ್ರಶ್ನೆ ಇರಿಸಿದ ಪಯ್ಯನ್ನೂರಿನ ನಾರಾಯಣ ಪೊದುವಾಲರು.. ಇದ್ ಭೂಮಿ ಸ್ವರ್ಣ ಮಯಿ…ಈ ಭೂಮಿಕ್ಕ್ ಸ್ವರ್ಣ ಸೃಷ್ಟಿಕ್ಕಿನ ಶಕ್ತಿ ಇಂಡ್ ಎಂದಾಗ ನಮ್ಮೆಲ್ಲರ ಮೈ ಮುಳ್ಳೆದ್ದಿದ್ದು ಇದೇ ಕಾರಣಕ್ಕೆ..
ಆವತ್ತಿನ ಅಷ್ಟಮಂಗಲ ಪ್ರಶ್ನೆಯಲ್ಲಿ ಇಂತಹ ಅನೇಕ ಮುಖ್ಯ ಬಿಂದುಗಳು ದೈವಜ್ಞರ ಗಮನಕ್ಕೆ ಬಂದರೂ ಅದನ್ನು ವಿಸ್ತರಿಸುವ ಕೆಲಸ ನಡೆದಿರಲಿಲ್ಲ
ಅರಸನ ಆನೆಯ ಸರಪಳಿ ಬಂಗಾರವಾದ ಕಥೆ ನನಗೆ ತಿಳಿದಿದ್ದು ಅಷ್ಟಮಂಗಲ ಪ್ರಶ್ನೆ ಮುಗಿದು ಒಂದು ವಾರದ ಬಳಿಕ. ಯಾರೋ ಒಬ್ಬರು ಹಿರಿಯ ಜೈನ ಇಂದ್ರರ ಮೂಲಕ
ಕಾಲದ ಚಿಪ್ಪಿನೊಳಗೆ ಭದ್ರವಾಗಿ ಕುಳಿತಿರುವ ಅನೇಕ ಸಂಗತಿಗಳು ಆ ಶಕ್ತಿಗಳ ಅಪೇಕ್ಷೆಗನುಗುಣವಾಗಿ ಮತ್ತೆ ಮುನ್ನೆಲೆಗೆ ಬರುತ್ತಿದೆ.
ಪರ್ಪಲೆಯ ಸತ್ಯ ಸಾನಿಧ್ಯ ನಿತ್ಯ ನಿರಂತರ ಬೆಳಗುತ್ತಿರಲಿ
ಜೈ ಮಹಾಕಾಲ್

credits: beauty of tulunadu


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »