TOP STORIES:

FOLLOW US

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.


15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು ಎಲ್ಲೆಲ್ಲೂ ಹಾಹಾಕಾರ.. ಹೋ ಎಂದು ಬೆಚ್ಚಿ ಬೆದರಿ ಓಡುವ ಜನಮಂದೆಯ ಬೊಬ್ಬೆ ಗಲಾಟೆ. ನೋಡುವುದೇನು?
ಆಗಸದೆತ್ತರಕ್ಕೆ ಧೂಳೆಬ್ಬಿಸುತ್ತ ಹೂಂಕರಿಸುತ್ತಾ ಘೀಳಿಡುತ್ತಾ ಪರ್ವತ ಗಾತ್ರದ ಅರಸನ ಪಟ್ಟದ ಆನೆ ಇಡೀ ಪಟ್ಟಣವನ್ನೇ ಪುಡಿ ಗಟ್ಟುವ ಹುಮ್ಮಸ್ಸಿನಲ್ಲಿ ಮುನ್ನುಗ್ಗಿ ಬರುತ್ತಿತ್ತು. ಅರಮನೆಯ ಲಾಯದಲ್ಲಿ ಕಾಲಿಗೆ ಕಟ್ಟಿದ ಕಬ್ಬಿಣದ ಸಂಕೋಲೆಯನ್ನು ತುಂಡರಿಸಿಕೊಂಡು ಮದ ಏರಿದ ಆನೆ ಪೇಟೆಯ ಕಡೆಗೆ ನುಗ್ಗಿತ್ತು. ಒಂದಷ್ಟು ಕಟ್ಟಾಳುಗಳು ಆನೆಯನ್ನು ಕಟ್ಟಿ ಹಾಕುವ ಭರದಲ್ಲಿ ಮುನ್ನುಗ್ಗಿದರು. ಅವರಲ್ಲಿ ಕೆಲವರು ಸೊಂಡಿಲಿಗೆ ಸಿಕ್ಕಿ ಕಬ್ಬಿನ ಜಲ್ಲೆಯಂತೆ ನೆಲಕ್ಕೆ ಒಗೆಯಲ್ಪಟ್ಟರು. ಇನ್ನು ಕೆಲವರು ಆನೆಯ ಕಾಲಡಿಗೆ ಸಿಕ್ಕಿ ಕುಂಬಳಕಾಯಿಯಂತೆ ತಲೆ ಒಡೆಸಿಕೊಂಡರು. ಈ ರುದ್ರ ಭಯಾನಕ ದೃಶ್ಯ ಕಂಡ ನಗರದ ಜನರು ಆನೆಯನ್ನು ಹಿಡಿಯುವ ಯತ್ನವನ್ನು ಬಿಟ್ಟು ತಮ್ಮ ಮನೆ ಮಠ ಸ್ವತ್ತು ಸಾಮಗ್ರಿಗಳನ್ನು ಉಳಿಸುವ ಧಾವಂತಕ್ಕೆ ಬಿದ್ದರು. ತೆಂಗಿನ ಸೋಗೆಗಳನ್ನು ಸುಟ್ಟು ಆನೆಯನ್ನು ತಮ್ಮ ಬೀದಿಗೆ ಬರದಂತೆ ತಡೆದರು. ದೊಂದಿ ರಾಳಗಳನ್ನು ಹಿಡಿದು ಆನೆಯನ್ನು ಕಾಡಿಗಟ್ಟುವ ಪ್ರಯತ್ನದಲ್ಲಿ ತೊಡಗಿದರು. ಬೆಂಕಿ ಕಂಡು ಬೆದರಿದ ಆನೆ ಪರ್ಪಲೆಯ ತಪ್ಪಲಿಗೆ ಬಂತು. ಅಲ್ಲಿಂದ ಮುಂದೆ ಪರ್ಪಲೆ ಗುಡ್ಡೆ ಹತ್ತಿ ಕಾಣೆಯಾಯಿತು.
ಪಟ್ಟದ ಆನೆಗೆ ಮದ ಏರಿದ ಚಿಂತೆಯಲ್ಲಿ ಅರಸನಿದ್ದರೆ, ಮದ ಏರಿದ ಆನೆ ಪೇಟೆ ಬಿಟ್ಟು ಪರ್ಪಲೆಯ ಗುಡ್ಡ ಹತ್ತಿದ ನೆಮ್ಮದಿಯಲ್ಲಿ ಜನರು ನಿದ್ದೆ ಮಾಡಿದರು.
ಕಾಡಿನಲ್ಲಿ ಅಲೆದು ಮರಗಳ ಮೇಲೆ ಸಿಟ್ಟು ತೋರಿಸಿ ಸುಸ್ತಾದ ಆನೆ ಮರುದಿನ ಮದ ಇಳಿದು ಬಾಯರಿ ನೀರನ್ನು ಅರಸಿಕೊಂಡು ಮೆಲ್ಲನೆ ಪರ್ಪಲೆ ಗುಡ್ಡದ ಪೂರ್ವಕ್ಕೆ ಇಳಿದು ಆನೆಕೆರೆಯ ಕಡೆಗೆ ಹೆಜ್ಜೆ ಹಾಕಿತು. ನಗರದ ಜನರು ಮತ್ತೆ ಸೇರಿದರು. ಮಾವುತನಿಗೆ ಸುದ್ದಿ ಮುಟ್ಟಿಸಿದರು. ಆನೆ ಸಹಜ ಸ್ಥಿತಿಗೆ ಬಂದಿತ್ತು. ಮಾವುತನನ್ನು ಹಿಂಬಾಲಿಸುತ್ತ ಏನೂ ಆಗಿಲ್ಲವೆಂಬಂತೆ ಅರಮನೆಯ ಕಡೆಗೆ ಹೆಜ್ಜೆ ಹಾಕಿತು.
ಅರಮನೆಯ ಬಳಿ ಬಂದು ಗಜ ಲಾಯದ ಗೂಟದ ಸಂಕೋಲೆಯನ್ನು ಆನೆಯ ಕಾಲಿಗೆ ಕಟ್ಟಬೇಕು ಎಂದು ಮಾವುತ ಬಗ್ಗಿದಾಗ ನೋಡುವುದೇನು?
ಆನೆಯ ಕಾಲಿನಲ್ಲಿದ್ದ ಕಬ್ಬಿಣದ ತುಂಡು ಸರಪಳಿ ಬಂಗಾರವಾಗಿದೆ!
ಅಷ್ಟಕ್ಕೂ ಆನೆಯ ಕಾಲಿನಲ್ಲಿದ್ದ ಕಬ್ಬಿಣದ ಸರಪಳಿ ಬಂಗಾರ ವಾಗಿದ್ದು ಹೇಗೆ ?
ಕಬ್ಬಿಣವನ್ನು ಬಂಗಾರ ಮಾಡಿದ ಆ ರಸಬಾವಿ ಅಥವಾ ಸ್ಪರ್ಶಮಣಿ ಪರ್ಪಲೆ ಗುಡ್ಡದಲ್ಲಿ ಎಲ್ಲಿದೆ ?
ಆ ಇಡಿ ರಾತ್ರಿ ಆನೆ ಅಲೆದಾಡಿದ ಪ್ರದೇಶದಲ್ಲಿ ಕಾಲ ಕಬ್ಬಿಣದ ಸರಪಳಿಗೆ ಸ್ಪರ್ಶಿಸಿದ ಆ ಚಮತ್ಕಾರಿ ವಸ್ತು ಯಾವುದು?
ಇತಿಹಾಸದ ಅನೇಕ ಪುಟಗಳಲ್ಲಿ ಬಂದು ಹೋಗುವ ರಸವಿದ್ಯೆಯನ್ನು ಕರಗತ ಮಾಡಿಕೊಂಡ ಯೋಗಿಗಳು ಈ ಗುಡ್ಡದ ಮೇಲಿದ್ದರೇ?
5 ಶತಮಾನಗಳಿಂದ ಜನರ ಬಾಯಿಂದ ಬಾಯಿಗೆ ಹರಡಿ ಕೊಂಡು ಬಂದ ಈ ದಂತ ಕಥೆಯ ಹಿಂದಿನ ರೋಚಕ ಸತ್ಯವೇನು?
ಮೊನ್ನೆ ಅಷ್ಟಮಂಗಲ ಪ್ರಶ್ನೆ ಇರಿಸಿದ ಪಯ್ಯನ್ನೂರಿನ ನಾರಾಯಣ ಪೊದುವಾಲರು.. ಇದ್ ಭೂಮಿ ಸ್ವರ್ಣ ಮಯಿ…ಈ ಭೂಮಿಕ್ಕ್ ಸ್ವರ್ಣ ಸೃಷ್ಟಿಕ್ಕಿನ ಶಕ್ತಿ ಇಂಡ್ ಎಂದಾಗ ನಮ್ಮೆಲ್ಲರ ಮೈ ಮುಳ್ಳೆದ್ದಿದ್ದು ಇದೇ ಕಾರಣಕ್ಕೆ..
ಆವತ್ತಿನ ಅಷ್ಟಮಂಗಲ ಪ್ರಶ್ನೆಯಲ್ಲಿ ಇಂತಹ ಅನೇಕ ಮುಖ್ಯ ಬಿಂದುಗಳು ದೈವಜ್ಞರ ಗಮನಕ್ಕೆ ಬಂದರೂ ಅದನ್ನು ವಿಸ್ತರಿಸುವ ಕೆಲಸ ನಡೆದಿರಲಿಲ್ಲ
ಅರಸನ ಆನೆಯ ಸರಪಳಿ ಬಂಗಾರವಾದ ಕಥೆ ನನಗೆ ತಿಳಿದಿದ್ದು ಅಷ್ಟಮಂಗಲ ಪ್ರಶ್ನೆ ಮುಗಿದು ಒಂದು ವಾರದ ಬಳಿಕ. ಯಾರೋ ಒಬ್ಬರು ಹಿರಿಯ ಜೈನ ಇಂದ್ರರ ಮೂಲಕ
ಕಾಲದ ಚಿಪ್ಪಿನೊಳಗೆ ಭದ್ರವಾಗಿ ಕುಳಿತಿರುವ ಅನೇಕ ಸಂಗತಿಗಳು ಆ ಶಕ್ತಿಗಳ ಅಪೇಕ್ಷೆಗನುಗುಣವಾಗಿ ಮತ್ತೆ ಮುನ್ನೆಲೆಗೆ ಬರುತ್ತಿದೆ.
ಪರ್ಪಲೆಯ ಸತ್ಯ ಸಾನಿಧ್ಯ ನಿತ್ಯ ನಿರಂತರ ಬೆಳಗುತ್ತಿರಲಿ
ಜೈ ಮಹಾಕಾಲ್

credits: beauty of tulunadu


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »