TOP STORIES:

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್


ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕುಬಡಗಿನ ಅನೇಕ

     (Copyrights owned by: billavaswarriors.com )
ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ ಕಲಾ ಪ್ರೇಮಿಗಳ ಮನಗೆದ್ದ ತನ್ನದೇ ಆದ ಛಾಪನ್ನು ಒತ್ತಿ  ಪ್ರೇಕ್ಷಕರ ಮನ ಗೆಲ್ಲಲು ಅಂಗೈಅಗಲದ ರಂಗದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಕಗಳನ್ನು ಸಾಕ್ಷಾತ್ಕರಿಸಿ ಪುರಾಣ ಕಥೆಗಳಿಗೆ ಜೀವಂತಿಕೆಯನ್ನು ನೀಡಬಲ್ಲತೆಂಕುಬಡಗಿನ ಪ್ರಬುದ್ಧ ಕಲಾವಿದರನೇಕರು ಇಂದು ಕಣ್ಮರೆಯಾದರೂ ಅವರೆಲ್ಲರ ಆದರ್ಶನೀಯವಾದ ಮಾರ್ಗದರ್ಶನದಲ್ಲಿಯಕ್ಷರಂಗದತ್ತ ಪಾದ ಬೆಳೆಸುವ ಕಲಾವಿದರಿಂದ ಯಕ್ಷಗಾನವನ್ನು ಉಳಿಸಬೇಕು, ಬೆಳೆಸಬೇಕು ಮಾತ್ರವಲ್ಲದೆ ರಂಗಕರ್ಮಿಗಳಬದುಕನ್ನು ರೂಪಿಸಲೆಂದು ಉದಯಿಸಿರುವ  ಸಂಘ ಸಂಸ್ಥೆಗಳು ಹಲವಾರು.ಹಾಗಾಗಿ ಸರ್ವಾಂಗ ಸುಂದರವಾದ ಯಕ್ಷಗಾನವು ನಮ್ಮಜಿಲ್ಲೆಯ ಜನ ಜೀವನದಲ್ಲಿ ಬೆರೆತಂತೆ ಮತ್ಯಾವ ಕಲಾಪ್ರಕಾರವೂ ಬೆರೆತಿಲ್ಲವೆನ್ನಬಹುದು.

  (Copyrights owned by: billavaswarriors.com )
ಜಾನಪದ ಕಲಾಪ್ರಕಾರವು ಕೆಲವು ನಿರ್ದಿಷ್ಟ ಜಾತಿ,ಪಂಗಡಗಳಿಗೆ ಮಿಸಲಾಗಿದ್ದರೆ ಯಕ್ಷಗಾನಕ್ಕೆ ಬಂಧನವಿಲ್ಲ. ರಂಗದಲ್ಲಿ ಎಲ್ಲಾಸಮಾಜದ ಜನರು ವಿವಿಧ ಸ್ತರಗಳಲ್ಲಿ ಪಾರಂಗತರಾಗಿರುವುದನ್ನು ನಾವು ಕಾಣಬಹುದು. ಜನಾಕರ್ಷಣಿಯಾವಾದ ಕಲಾಪ್ರಪಂಚಕ್ಕೆ ಬೆಡಗಿಗೆ ಮನಸೋತು ತಾನೂ ಒಬ್ಬ ಅತ್ಯುತ್ತಮ ಕಲಾವಿದನಾಗಬೇಕೇಂಬ ಹಂಬಲ ಜಾಗ್ರತವಾದಾರೂ ಎಲ್ಲರಿಗೂಅವರ ಬಯಕೆ ಈಡೆರುವ ಅವಕಾಶ ಒದಗುವುದಿಲ್ಲ .ಪರಿಸರ ಪರಿಸ್ಥಿತಿ ಸಂಧರ್ಭದಲ್ಲಿ ಅನುಕೂಲವಾಗಿ ಒದಗಿ ಬಂದರೆ ಮಾತ್ರಬಾಳ ಪ್ರತಿಭೆಗಳಲ್ಲಿ ಸುಪ್ತವಾಗಿರುವ ಕಲಾ ಚೇತನಗಳಿಗೆ ಆಕಾರವು ಪ್ರಾಪ್ತಿಯಾಗುತ್ತದೆಯೆಂಬುದಕ್ಕೆ ಉಡುಪಿ ಜಿಲ್ಲೆಯ ಕಾಪುಸಮೀಪದ ಮೂಳೂರು ತುರ್ಕಿ ತೋಟದ ಜಯಂತಿ ಶಿವರಾಮ ಕೋಟ್ಯಾನ್ ರವರ ಪುತ್ರ ರೋಶನ್ ಕೋಟ್ಯಾನ್ ರವರೆಉದಾಹರಣೆಯಾಗಿದ್ದಾರೆ.

ಬೆಳೆಯುವ ಸಿರಿ ಮೊಳಕೆಯಲ್ಲಿಎಂಬತೆ ಮಹಾನಗರ ಮುಂಬಯಿಯ ಘಾಟ್ಕೋಪಾರ್ ಪಶ್ಚಿಮ ಆಂಗ್ಲ ಮಾಧ್ಯಮದ ಉತ್ತರ ಮುಂಬಾಯಿ ಶಾಲೆಯ ಆರನೇ ತರಗತಿ ಕಲಿಯುತ್ತಿರುವಾಗಲೇ ಶಾಲೆಯ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾಮುಖ್ಯೋಪಾಧ್ಯಾಯರಿಂದಲೇ ಪ್ರಶಂಸಿತನಾಗಿ ಭವಿಷ್ಯತ್ತಿನಲ್ಲಿ ತಾನೋರ್ವ ಶ್ರೇಷ್ಠ ಕಲಾವಿದನಾಗ ಬಲ್ಲೇ ಎಂಬ  ಭರವಸೆಯನ್ನುಮೂಡಿಸಿರುವ ಪುಟ್ಟ ಬಾಲಕನೇ ಇಂದು ಮುಂಬಯಿ ಹಾಗೂ ವಿದೇಶದಲ್ಲಿ ಯಕ್ಷ ಕಲಾಭಿಮಾನಿಗಳು ಕಂಡಉದಯೋನ್ಮುಖಭಾಗವತ

ಶಾಲೆಯ ಬಿಡುವಿನ ಸಮಯದಲ್ಲಿ ಇವರ ಕಲಾಭಿರುಚಿಯು  ಕೆರಳಿ ಅದು ಪ್ರತಿಭೆಗೆ ಬರಲು ಪ್ರೋತ್ಸಾಹಿಸಿದವರೆಂದರೆ ಇವರ ಮಾತಪಿತರು ,ಮಾತ್ರವಲ್ಲದೆ ಮನೆ ಸಮೀಪದ ಸಂಘಾನಿ ಶನಿ ಮಂದಿರದ ಭಕ್ತ ವ್ರಂದ.

ಇವರೆಲ್ಲರ ಸಂಪೂರ್ಣ ಸಹಕಾರದಿಂದ ಮಂದಿರದ ವಠಾರದಲ್ಲಿ ಜರಗುತ್ತಿದ್ದ  ಪ್ರತಿಯೊಂದು ಧಾರ್ಮಿಕ ಸಾಂಸ್ಕೃತಿಕಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತ ವ್ರಂದದ ಪ್ರಶಂಸೆಗೆ ಪಾತ್ರರಾದ ಅತ್ಯುತ್ತಮ ಭಜನಾ ಗಾಯಕರಾದ ಇವರ ಮಾವನಾದನಾಗೇಶ್ ಸುವರ್ಣರಿಂದ ಭಜನಾ ತರಬೇತಿಯನ್ನು ಅಲ್ಲದೆ ಶನಿಗ್ರಂಥ ಪಾರಾಯಣದ ತರಬೇತಿಯನ್ನು ಪಡೆದು ಎಲ್ಲರಿಂದಲೂ ಸೈಎನಿಸಿಕೊಂಡವರು.

    (Copyrights owned by: billavaswarriors.com )
ಯಕ್ಷರಂಗದ ಸವ್ಯಸಾಚಿಯೆಂದು ಖ್ಯಾತರಾದ ಕಟೀಲು ಮೇಳದ ಸುಪ್ರಸಿದ್ಧ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದಮೃದಂಗನಾದವನ್ನು ಯಕ್ಷರಂಗದ ಪರಂಪರೆಯ ಯಕ್ಷಕಲಾ ಗುರುಗಳಾದ ಮೋಹನ ಬೈಪಡಿತ್ತಾಯರವರಿಂದ ಭಾಗವತಿಕೆಯನ್ನುಅಭ್ಯಾಸ ಮಾಡಿ ಗುರು ಪ್ರೇರಣೆಯಂತೆ ಗುರುನಾರಾಯಣ ಮೇಳದವರಶ್ರೀ ದೇವಿ ಮಹಾತ್ಮೆಪ್ರಸಂಗದಲ್ಲಿ ಪ್ರಥಮಭಾಗವತಿಕೆಯನ್ನು ಮಾಡಿ ಪ್ರೇಕ್ಷಕರ ಮನಗೆದ್ದು ಗುರುಪ್ರಶಂಸೆಯನ್ನು ಪಡೆದ ಕೀರ್ತಿಗೆ ಭಾಜನರಿವರು.ಗುರುನಾರಾಯಣ ಮೇಳದಪ್ರಸಿದ್ಧ ಭಾಗವತ ಜಯಪ್ರಕಾಶ್ ನಿಡ್ವಣ್ಣಾಯರವರಿಂದ ಭಾಗವತಿಕೆಯ ಹೆಚ್ಚಿನ ತರಬೇತಿಯನ್ನು ಪಡೆದಿರುವ ಇವರು ಉದ್ಯೋಗದನಿಮಿತ್ತ ವಿದೇಶಕ್ಕೆ ತೆರಳಿ ಅಲ್ಲಿ ಶಿಪ್ಪಿಂಗ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ತನ್ನ ಕಲಾ ಪ್ರತಿಭೆಗೆ  ಕಾರಣರಾಗಿರುವ ಹಿರಿಯಕಿರಿಯರನೇಕರನ್ನು ಸದಾ ಸ್ಮರಿಸುತ್ತಿರುವ ಪ್ರಸ್ತುತ ವಿದೇಶದಲ್ಲಿರೂ ಆಗಾಗ್ಗೆ ತನ್ನತಾಯ್ನಾಡಿಗೆ ಮರಳಿದಾಗ ನಗರದಲ್ಲಿ ಜರಗುತ್ತಿರುವ ಪ್ರತಿಯೊಂದು ಸಂಘ ಸಂಸ್ಥೆಗಳ ಧಾರ್ಮಿಕಸಾಂಸ್ಕೃತಿಕ ಕಾರ್ಯಕ್ರಮದಲ್ಲಿಭಾಗವಹಿಸಿ ತನ್ನ ಕಲಾರಂಗದ ಮನದಾಸೆಯನ್ನು ಪೂರೈಸಿಕೊಂಡು ಸಂತಸ ಪಡುವ ಸಂತೃಪ್ತ ಕಲಾವಿದರು.

ಇವರ ಕಲಾ ಪ್ರೌಡಿಮೆಗೆ ತಾನಾಗಿ ಒಲಿದು ಬಂದ ಸನ್ಮಾನಗಳು, ಪ್ರಶಸ್ತಿಗಳು ಅನೇಕ.

ಅವುಗಳಲ್ಲಿ ಪ್ರಧಾನವಾದವು ಬೆಹರಿನ್ ಕರ್ನಾಟಕ ಸಂಘದ ವತಿಯಿಂದ ಹಾಗೂ “ಹವ್ಯಾಸಿ ಕಲಾವಿದರುಸೌದಿ ಅರೇಬಿಯಾಮತ್ತು  ಕುಡ್ಲ ಅಡ್ವೆಂಚರ್‌  ದಮಾಮ್  ಇಲ್ಲಿ ಅಲ್ಲದೆ ಅಮ್ಮ ಕಲಾವಿದರು, ಪಟ್ಲ ಫೌಂಡೇಶನ್ ಟ್ರಸ್ಟ್. ಮುಂತಾದ ಕಡೆಗಳಲ್ಲಿಒದಗಿರುವ ಗೌರವ ಸನ್ಮಾನಗಳು   ಅವಿಸ್ಮರಣೀಯವಾಗಿದೆ ಎನ್ನುತ್ತಾರೆ. ಮುಂಬೈಯ ಯಕ್ಷ  ಭ್ರಾಮರಿ ನೃತ್ಯ ನಿಲಯದ ಸನ್ಮಾನವುಮತ್ತು ಇವರಿಗೆ    ಭ್ರಮರಇಂಚರ ಹಾಗೂ 2021 ಮುಂಬಾಯಿ ಯಲ್ಲಿ ನಡೆದ ಜಯ.ಸಿ. ಸುವರ್ಣ ಬಿಲ್ಲವಾರ್ ಐಕೊನ್ ಪ್ರಶಸ್ತಿತುಂಬಾ ಖುಷಿ ಕೊಟ್ಟಿದ್ದೆನ್ನುತ್ತಾರೆ. ಶ್ರೀಯುತರು 2013ರಲ್ಲಿ ಶ್ರೀ ಮತಿ ದೀಕ್ಷಾ ಎಂಬವರೊಡನೆ ದಾಂಪತ್ಯ ಜೀವನಕ್ಕೆ ಪಾದಾರ್ಪಣೆಮಾಡಿರುತ್ತಾರೆ ಇವರಿಗೆ ವೃತಿ ಎಂಬ ಪುಟ್ಟ ಹೆಣ್ಣು ಮಗಳು ಇದ್ದಾರೆ ಹೀಗೆ ಚಿಕ್ಕದಾದರೂ ಚೊಕ್ಕ ಸಂಸಾರದಲ್ಲಿ ಸಂತೃಪ್ತ ಜೀವನನಡೆಸುತ್ತಿದ್ದಾರೆ.

ವಿದೇಶದಲ್ಲಿ ಅದೆಷ್ಟೋ ಯಕ್ಷ ಕಲಾಭಿಮಾನಿಗಳು ಇದ್ದು ಅವರಿಗೆ ಇವರ ಭಾಗವತಿಕೆ ಎಂದರೆ ಅಚ್ಚು ಮೆಚ್ಚು. ಇವರುವಿದ್ಯಭ್ಯಾಸವನ್ನು ಮುಂಬೈಯಲ್ಲಿ ಪೂರ್ಣಗಳಿಸಿರುದರಿಂದ ಇವರಿಗೆ ಕನ್ನಡ ಅಕ್ಷರ ಓದಲು ಬರೆಯಲು ಬರುವುದಿಲ್ಲ ಆದರೂಇವರು ಛಲ ಬಿಡದೆ ಕನ್ನಡದಲ್ಲಿ ಬರೆದ ಭಾಗವತಿಕೆಯನ್ನು ಹಲವರ ಸಹಾಯದಿಂದ  ಹಿಂದಿ ಭಾಷೆಯಲ್ಲಿ ಬರೆದು  ಭಾಗವತಿಕೆಯನ್ನುಅಭ್ಯಾಸ ಮಾಡುತ್ತಾರೆ. ವೃತ್ತಿ ಜೀವನದಲ್ಲಿ ಸಮಯ ಸರಿಯಾಗಿ ಸಿಕ್ಕಿಲ್ಲವೆಂದರೂ ಸುಮಾರೂ ಮೂರು ಗಂಟೆಗಳ ಕಾಲ ತನ್ನವಾಹನದಲ್ಲಿ ಸಂಚಾರ ಮಾಡಿ ಯಕ್ಷಗಾನ ಅಭ್ಯಾಸ ಮಾಡಿ ಮತ್ತು ಯುವಕರನ್ನು ಯಕ್ಷರಂಗದತ್ತ ಒಲವು ಮೂಡಿಸುವ ಕಾರ್ಯಮಾಡುತ್ತಿದ್ದಾರೆ‌. ತನ್ನ ಕಲಾ ಜೀವನದಲ್ಲಿ ಸಂಪೂರ್ಣ ರೀತಿಯಲ್ಲಿ ಸಹಕರಿಸುವ ಕಟೀಲು ಮೇಳದ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿಬೊಂದೆಲ್ ಹಾಗೂ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ದೀಪಕ್ ರಾವ್ ಪೇಜಾವರ ಅವರ ಹಾಗೂ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಪಟ್ಲ ಇವರಹೆಸರನ್ನು ಹೇಳಲು ಮರೆಯುದಿಲ್ಲ.

ಬೊಟ್ಟಿಕೆರೆ ಪುರುಷೋತ್ತಮ ಪೂಂಜರು,ಮೋಹನ ಬೈಪಾಡಿತ್ತಾಯರು,ಜಯಪ್ರಕಾಶ್ ನಿಡ್ವಣ್ಣಾಯರು ಹೀಗೆ ಗುರುತ್ರಯರಿಂದ ಯಕ್ಷರಂಗದ ತರಬೇತಿ ಪಡೆದಿರುವ ಇವರು ಭವಿಷ್ಯತ್ತಿನಲ್ಲಿ ಅತ್ಯುತ್ತಮ ಕಲಾವಿದನಾಗಿ ಯಕ್ಷ ಪ್ರಪಂಚದಲ್ಲಿ ವಿಜೃಂಭಿಸಲಿಯೆಂಬುದೇನಮ್ಮ ಶುಭ ಹಾರೈಕೆ.

(Copyrights owned by: billavaswarriors.com )

ಟೀಮ್ ಬಿಲ್ಲವ ವಾರಿಯರ್ಸ್ 

 


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »