TOP STORIES:

FOLLOW US

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್


ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕುಬಡಗಿನ ಅನೇಕ

     (Copyrights owned by: billavaswarriors.com )
ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ ಕಲಾ ಪ್ರೇಮಿಗಳ ಮನಗೆದ್ದ ತನ್ನದೇ ಆದ ಛಾಪನ್ನು ಒತ್ತಿ  ಪ್ರೇಕ್ಷಕರ ಮನ ಗೆಲ್ಲಲು ಅಂಗೈಅಗಲದ ರಂಗದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಕಗಳನ್ನು ಸಾಕ್ಷಾತ್ಕರಿಸಿ ಪುರಾಣ ಕಥೆಗಳಿಗೆ ಜೀವಂತಿಕೆಯನ್ನು ನೀಡಬಲ್ಲತೆಂಕುಬಡಗಿನ ಪ್ರಬುದ್ಧ ಕಲಾವಿದರನೇಕರು ಇಂದು ಕಣ್ಮರೆಯಾದರೂ ಅವರೆಲ್ಲರ ಆದರ್ಶನೀಯವಾದ ಮಾರ್ಗದರ್ಶನದಲ್ಲಿಯಕ್ಷರಂಗದತ್ತ ಪಾದ ಬೆಳೆಸುವ ಕಲಾವಿದರಿಂದ ಯಕ್ಷಗಾನವನ್ನು ಉಳಿಸಬೇಕು, ಬೆಳೆಸಬೇಕು ಮಾತ್ರವಲ್ಲದೆ ರಂಗಕರ್ಮಿಗಳಬದುಕನ್ನು ರೂಪಿಸಲೆಂದು ಉದಯಿಸಿರುವ  ಸಂಘ ಸಂಸ್ಥೆಗಳು ಹಲವಾರು.ಹಾಗಾಗಿ ಸರ್ವಾಂಗ ಸುಂದರವಾದ ಯಕ್ಷಗಾನವು ನಮ್ಮಜಿಲ್ಲೆಯ ಜನ ಜೀವನದಲ್ಲಿ ಬೆರೆತಂತೆ ಮತ್ಯಾವ ಕಲಾಪ್ರಕಾರವೂ ಬೆರೆತಿಲ್ಲವೆನ್ನಬಹುದು.

  (Copyrights owned by: billavaswarriors.com )
ಜಾನಪದ ಕಲಾಪ್ರಕಾರವು ಕೆಲವು ನಿರ್ದಿಷ್ಟ ಜಾತಿ,ಪಂಗಡಗಳಿಗೆ ಮಿಸಲಾಗಿದ್ದರೆ ಯಕ್ಷಗಾನಕ್ಕೆ ಬಂಧನವಿಲ್ಲ. ರಂಗದಲ್ಲಿ ಎಲ್ಲಾಸಮಾಜದ ಜನರು ವಿವಿಧ ಸ್ತರಗಳಲ್ಲಿ ಪಾರಂಗತರಾಗಿರುವುದನ್ನು ನಾವು ಕಾಣಬಹುದು. ಜನಾಕರ್ಷಣಿಯಾವಾದ ಕಲಾಪ್ರಪಂಚಕ್ಕೆ ಬೆಡಗಿಗೆ ಮನಸೋತು ತಾನೂ ಒಬ್ಬ ಅತ್ಯುತ್ತಮ ಕಲಾವಿದನಾಗಬೇಕೇಂಬ ಹಂಬಲ ಜಾಗ್ರತವಾದಾರೂ ಎಲ್ಲರಿಗೂಅವರ ಬಯಕೆ ಈಡೆರುವ ಅವಕಾಶ ಒದಗುವುದಿಲ್ಲ .ಪರಿಸರ ಪರಿಸ್ಥಿತಿ ಸಂಧರ್ಭದಲ್ಲಿ ಅನುಕೂಲವಾಗಿ ಒದಗಿ ಬಂದರೆ ಮಾತ್ರಬಾಳ ಪ್ರತಿಭೆಗಳಲ್ಲಿ ಸುಪ್ತವಾಗಿರುವ ಕಲಾ ಚೇತನಗಳಿಗೆ ಆಕಾರವು ಪ್ರಾಪ್ತಿಯಾಗುತ್ತದೆಯೆಂಬುದಕ್ಕೆ ಉಡುಪಿ ಜಿಲ್ಲೆಯ ಕಾಪುಸಮೀಪದ ಮೂಳೂರು ತುರ್ಕಿ ತೋಟದ ಜಯಂತಿ ಶಿವರಾಮ ಕೋಟ್ಯಾನ್ ರವರ ಪುತ್ರ ರೋಶನ್ ಕೋಟ್ಯಾನ್ ರವರೆಉದಾಹರಣೆಯಾಗಿದ್ದಾರೆ.

ಬೆಳೆಯುವ ಸಿರಿ ಮೊಳಕೆಯಲ್ಲಿಎಂಬತೆ ಮಹಾನಗರ ಮುಂಬಯಿಯ ಘಾಟ್ಕೋಪಾರ್ ಪಶ್ಚಿಮ ಆಂಗ್ಲ ಮಾಧ್ಯಮದ ಉತ್ತರ ಮುಂಬಾಯಿ ಶಾಲೆಯ ಆರನೇ ತರಗತಿ ಕಲಿಯುತ್ತಿರುವಾಗಲೇ ಶಾಲೆಯ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾಮುಖ್ಯೋಪಾಧ್ಯಾಯರಿಂದಲೇ ಪ್ರಶಂಸಿತನಾಗಿ ಭವಿಷ್ಯತ್ತಿನಲ್ಲಿ ತಾನೋರ್ವ ಶ್ರೇಷ್ಠ ಕಲಾವಿದನಾಗ ಬಲ್ಲೇ ಎಂಬ  ಭರವಸೆಯನ್ನುಮೂಡಿಸಿರುವ ಪುಟ್ಟ ಬಾಲಕನೇ ಇಂದು ಮುಂಬಯಿ ಹಾಗೂ ವಿದೇಶದಲ್ಲಿ ಯಕ್ಷ ಕಲಾಭಿಮಾನಿಗಳು ಕಂಡಉದಯೋನ್ಮುಖಭಾಗವತ

ಶಾಲೆಯ ಬಿಡುವಿನ ಸಮಯದಲ್ಲಿ ಇವರ ಕಲಾಭಿರುಚಿಯು  ಕೆರಳಿ ಅದು ಪ್ರತಿಭೆಗೆ ಬರಲು ಪ್ರೋತ್ಸಾಹಿಸಿದವರೆಂದರೆ ಇವರ ಮಾತಪಿತರು ,ಮಾತ್ರವಲ್ಲದೆ ಮನೆ ಸಮೀಪದ ಸಂಘಾನಿ ಶನಿ ಮಂದಿರದ ಭಕ್ತ ವ್ರಂದ.

ಇವರೆಲ್ಲರ ಸಂಪೂರ್ಣ ಸಹಕಾರದಿಂದ ಮಂದಿರದ ವಠಾರದಲ್ಲಿ ಜರಗುತ್ತಿದ್ದ  ಪ್ರತಿಯೊಂದು ಧಾರ್ಮಿಕ ಸಾಂಸ್ಕೃತಿಕಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತ ವ್ರಂದದ ಪ್ರಶಂಸೆಗೆ ಪಾತ್ರರಾದ ಅತ್ಯುತ್ತಮ ಭಜನಾ ಗಾಯಕರಾದ ಇವರ ಮಾವನಾದನಾಗೇಶ್ ಸುವರ್ಣರಿಂದ ಭಜನಾ ತರಬೇತಿಯನ್ನು ಅಲ್ಲದೆ ಶನಿಗ್ರಂಥ ಪಾರಾಯಣದ ತರಬೇತಿಯನ್ನು ಪಡೆದು ಎಲ್ಲರಿಂದಲೂ ಸೈಎನಿಸಿಕೊಂಡವರು.

    (Copyrights owned by: billavaswarriors.com )
ಯಕ್ಷರಂಗದ ಸವ್ಯಸಾಚಿಯೆಂದು ಖ್ಯಾತರಾದ ಕಟೀಲು ಮೇಳದ ಸುಪ್ರಸಿದ್ಧ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದಮೃದಂಗನಾದವನ್ನು ಯಕ್ಷರಂಗದ ಪರಂಪರೆಯ ಯಕ್ಷಕಲಾ ಗುರುಗಳಾದ ಮೋಹನ ಬೈಪಡಿತ್ತಾಯರವರಿಂದ ಭಾಗವತಿಕೆಯನ್ನುಅಭ್ಯಾಸ ಮಾಡಿ ಗುರು ಪ್ರೇರಣೆಯಂತೆ ಗುರುನಾರಾಯಣ ಮೇಳದವರಶ್ರೀ ದೇವಿ ಮಹಾತ್ಮೆಪ್ರಸಂಗದಲ್ಲಿ ಪ್ರಥಮಭಾಗವತಿಕೆಯನ್ನು ಮಾಡಿ ಪ್ರೇಕ್ಷಕರ ಮನಗೆದ್ದು ಗುರುಪ್ರಶಂಸೆಯನ್ನು ಪಡೆದ ಕೀರ್ತಿಗೆ ಭಾಜನರಿವರು.ಗುರುನಾರಾಯಣ ಮೇಳದಪ್ರಸಿದ್ಧ ಭಾಗವತ ಜಯಪ್ರಕಾಶ್ ನಿಡ್ವಣ್ಣಾಯರವರಿಂದ ಭಾಗವತಿಕೆಯ ಹೆಚ್ಚಿನ ತರಬೇತಿಯನ್ನು ಪಡೆದಿರುವ ಇವರು ಉದ್ಯೋಗದನಿಮಿತ್ತ ವಿದೇಶಕ್ಕೆ ತೆರಳಿ ಅಲ್ಲಿ ಶಿಪ್ಪಿಂಗ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ತನ್ನ ಕಲಾ ಪ್ರತಿಭೆಗೆ  ಕಾರಣರಾಗಿರುವ ಹಿರಿಯಕಿರಿಯರನೇಕರನ್ನು ಸದಾ ಸ್ಮರಿಸುತ್ತಿರುವ ಪ್ರಸ್ತುತ ವಿದೇಶದಲ್ಲಿರೂ ಆಗಾಗ್ಗೆ ತನ್ನತಾಯ್ನಾಡಿಗೆ ಮರಳಿದಾಗ ನಗರದಲ್ಲಿ ಜರಗುತ್ತಿರುವ ಪ್ರತಿಯೊಂದು ಸಂಘ ಸಂಸ್ಥೆಗಳ ಧಾರ್ಮಿಕಸಾಂಸ್ಕೃತಿಕ ಕಾರ್ಯಕ್ರಮದಲ್ಲಿಭಾಗವಹಿಸಿ ತನ್ನ ಕಲಾರಂಗದ ಮನದಾಸೆಯನ್ನು ಪೂರೈಸಿಕೊಂಡು ಸಂತಸ ಪಡುವ ಸಂತೃಪ್ತ ಕಲಾವಿದರು.

ಇವರ ಕಲಾ ಪ್ರೌಡಿಮೆಗೆ ತಾನಾಗಿ ಒಲಿದು ಬಂದ ಸನ್ಮಾನಗಳು, ಪ್ರಶಸ್ತಿಗಳು ಅನೇಕ.

ಅವುಗಳಲ್ಲಿ ಪ್ರಧಾನವಾದವು ಬೆಹರಿನ್ ಕರ್ನಾಟಕ ಸಂಘದ ವತಿಯಿಂದ ಹಾಗೂ “ಹವ್ಯಾಸಿ ಕಲಾವಿದರುಸೌದಿ ಅರೇಬಿಯಾಮತ್ತು  ಕುಡ್ಲ ಅಡ್ವೆಂಚರ್‌  ದಮಾಮ್  ಇಲ್ಲಿ ಅಲ್ಲದೆ ಅಮ್ಮ ಕಲಾವಿದರು, ಪಟ್ಲ ಫೌಂಡೇಶನ್ ಟ್ರಸ್ಟ್. ಮುಂತಾದ ಕಡೆಗಳಲ್ಲಿಒದಗಿರುವ ಗೌರವ ಸನ್ಮಾನಗಳು   ಅವಿಸ್ಮರಣೀಯವಾಗಿದೆ ಎನ್ನುತ್ತಾರೆ. ಮುಂಬೈಯ ಯಕ್ಷ  ಭ್ರಾಮರಿ ನೃತ್ಯ ನಿಲಯದ ಸನ್ಮಾನವುಮತ್ತು ಇವರಿಗೆ    ಭ್ರಮರಇಂಚರ ಹಾಗೂ 2021 ಮುಂಬಾಯಿ ಯಲ್ಲಿ ನಡೆದ ಜಯ.ಸಿ. ಸುವರ್ಣ ಬಿಲ್ಲವಾರ್ ಐಕೊನ್ ಪ್ರಶಸ್ತಿತುಂಬಾ ಖುಷಿ ಕೊಟ್ಟಿದ್ದೆನ್ನುತ್ತಾರೆ. ಶ್ರೀಯುತರು 2013ರಲ್ಲಿ ಶ್ರೀ ಮತಿ ದೀಕ್ಷಾ ಎಂಬವರೊಡನೆ ದಾಂಪತ್ಯ ಜೀವನಕ್ಕೆ ಪಾದಾರ್ಪಣೆಮಾಡಿರುತ್ತಾರೆ ಇವರಿಗೆ ವೃತಿ ಎಂಬ ಪುಟ್ಟ ಹೆಣ್ಣು ಮಗಳು ಇದ್ದಾರೆ ಹೀಗೆ ಚಿಕ್ಕದಾದರೂ ಚೊಕ್ಕ ಸಂಸಾರದಲ್ಲಿ ಸಂತೃಪ್ತ ಜೀವನನಡೆಸುತ್ತಿದ್ದಾರೆ.

ವಿದೇಶದಲ್ಲಿ ಅದೆಷ್ಟೋ ಯಕ್ಷ ಕಲಾಭಿಮಾನಿಗಳು ಇದ್ದು ಅವರಿಗೆ ಇವರ ಭಾಗವತಿಕೆ ಎಂದರೆ ಅಚ್ಚು ಮೆಚ್ಚು. ಇವರುವಿದ್ಯಭ್ಯಾಸವನ್ನು ಮುಂಬೈಯಲ್ಲಿ ಪೂರ್ಣಗಳಿಸಿರುದರಿಂದ ಇವರಿಗೆ ಕನ್ನಡ ಅಕ್ಷರ ಓದಲು ಬರೆಯಲು ಬರುವುದಿಲ್ಲ ಆದರೂಇವರು ಛಲ ಬಿಡದೆ ಕನ್ನಡದಲ್ಲಿ ಬರೆದ ಭಾಗವತಿಕೆಯನ್ನು ಹಲವರ ಸಹಾಯದಿಂದ  ಹಿಂದಿ ಭಾಷೆಯಲ್ಲಿ ಬರೆದು  ಭಾಗವತಿಕೆಯನ್ನುಅಭ್ಯಾಸ ಮಾಡುತ್ತಾರೆ. ವೃತ್ತಿ ಜೀವನದಲ್ಲಿ ಸಮಯ ಸರಿಯಾಗಿ ಸಿಕ್ಕಿಲ್ಲವೆಂದರೂ ಸುಮಾರೂ ಮೂರು ಗಂಟೆಗಳ ಕಾಲ ತನ್ನವಾಹನದಲ್ಲಿ ಸಂಚಾರ ಮಾಡಿ ಯಕ್ಷಗಾನ ಅಭ್ಯಾಸ ಮಾಡಿ ಮತ್ತು ಯುವಕರನ್ನು ಯಕ್ಷರಂಗದತ್ತ ಒಲವು ಮೂಡಿಸುವ ಕಾರ್ಯಮಾಡುತ್ತಿದ್ದಾರೆ‌. ತನ್ನ ಕಲಾ ಜೀವನದಲ್ಲಿ ಸಂಪೂರ್ಣ ರೀತಿಯಲ್ಲಿ ಸಹಕರಿಸುವ ಕಟೀಲು ಮೇಳದ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿಬೊಂದೆಲ್ ಹಾಗೂ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ದೀಪಕ್ ರಾವ್ ಪೇಜಾವರ ಅವರ ಹಾಗೂ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಪಟ್ಲ ಇವರಹೆಸರನ್ನು ಹೇಳಲು ಮರೆಯುದಿಲ್ಲ.

ಬೊಟ್ಟಿಕೆರೆ ಪುರುಷೋತ್ತಮ ಪೂಂಜರು,ಮೋಹನ ಬೈಪಾಡಿತ್ತಾಯರು,ಜಯಪ್ರಕಾಶ್ ನಿಡ್ವಣ್ಣಾಯರು ಹೀಗೆ ಗುರುತ್ರಯರಿಂದ ಯಕ್ಷರಂಗದ ತರಬೇತಿ ಪಡೆದಿರುವ ಇವರು ಭವಿಷ್ಯತ್ತಿನಲ್ಲಿ ಅತ್ಯುತ್ತಮ ಕಲಾವಿದನಾಗಿ ಯಕ್ಷ ಪ್ರಪಂಚದಲ್ಲಿ ವಿಜೃಂಭಿಸಲಿಯೆಂಬುದೇನಮ್ಮ ಶುಭ ಹಾರೈಕೆ.

(Copyrights owned by: billavaswarriors.com )

ಟೀಮ್ ಬಿಲ್ಲವ ವಾರಿಯರ್ಸ್ 

 


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »