TOP STORIES:

FOLLOW US

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ನೆಲೆಯಲ್ಲಿ ಸಮಾಜ ಸೇವೆಯಲ್ಲಿ  ಮೈಗೂಡಿಸಿಕೊಂಡು, ಅಪಾರ ಶ್ರದ್ಧೆ, ಭಕ್ತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಬಹು ದೊಡ್ಡ ಜವಾಬ್ದಾರಿಯನ್ನು  ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡು25 ವರ್ಷಗಳಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರು ಕ್ಷೇತ್ರದ ಅಭಿವೃದ್ಧಿಯರುವಾರಿ ಜನಾರ್ದನ ಪೂಜಾರಿಯವರ ಅಪ್ಪಟ ಅನುಯಾಯಿಯಾಗಿ ದೇವಸ್ಥಾನಗಳು ಧಾರ್ಮಿಕತೆಯ ಜತೆ ಸಮಾಜಮುಖಿಚಟುವಟಿಕೆಗಳಲ್ಲಿ ಕೂಡ ಮುಂದೆ ಬರಬೇಕೆಂದು ತೋರಿಸಿಕೊಟ್ಟವರು.

1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆಪ್ರಾರಂಭಿಸಿ 4 ವರ್ಷಗಳ ಬಳಿಕ ಸ್ವಂತ ಕಚೇರಿಯನ್ನು ಪ್ರಾರಂಭಿಸಿದರು. ಶುದ್ಧಹಸ್ತದ ರಾಜಕಾರಣಿ ಬಿ.ಜನಾರ್ದನ ಪೂಜಾರಿಯವರಎಲ್ಲ ಚುನಾವಣೆಗಳಲ್ಲಿ ಅವರೊಂದಿಗೆ ದುಡಿದಿರುವ ಇವರು ಜಾತ್ಯತೀತ ಮನೋಭಾವ, ಸರ್ವರಿಗೂ ಸಮಪಾಲು, ಸರ್ವರಿಗೂಸಮಬಾಳು ಎನ್ನುವ ತತ್ವ ಸಿದ್ಧಾಂತದ ಬಗ್ಗೆ ಒಲವು ಹೊಂದಿರುವವರು.

ಕರೊನಾ ಮಹಾಮಾರಿಯ ಸಂದರ್ಭ ಬಡವರ, ನಿರಾಶ್ರಿತರ, ಕೂಲಿಕಾರ್ಮಿಕರ ಸಹಾಯಕ್ಕೆಸ್ವತಃ ಮುಂದೆ ನಿಂತು ಕೆಲಸ ಮಾಡಿದ್ದು, ಗುರುಬೆಳದಿಂಗಳು ಸಂಸ್ಥೆಯ ಮೂಲಕ ಜನಾರ್ದನ ಪೂಜಾರಿಯವರ ಮಾರ್ಗದರ್ಶನ, ದಿ. ಜಯಸುವರ್ಣರ ಆಶೋತ್ತರಗಳಸ್ಫೂರ್ತಿಯ ನೆಲೆಯಲ್ಲಿ ಹಿರಿಯರ ಜತೆ ಕ್ರಿಯಾಶೀಲ ಯುವಕರ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು ಪದ್ಮರಾಜ್ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿತು.

ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಶ್ರೀ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸಂದರ್ಭ ಮುಂಚೂಣಿಯಲ್ಲಿ ನಿಂತುಹೋರಾಟ, 10ನೇ ತರಗತಿಯಲ್ಲಿ ಸಮಾಜ ವಿಜ್ಞಾನ ಪಠ್ಯ ಕೈಬಿಟ್ಟದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ಹೋರಾಟಸಂಘಟಿಸಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಗೌರವಿಸುತ್ತ ಎಲ್ಲ ವರ್ಗದ ಜನರಿಂದ ಪ್ರೀತಿ ವಿಶ್ವಾಸ ಗಳಿಸಿದ್ದು. ಮೊದಲಾದ ಅಂಶಗಳ ಜತೆ ಪದ್ಮರಾಜ್‌ರವರಿಗೆ ವಿಧಾನಸಭಾ ಟಿಕೆಟ್ ನೀಡಿದರೆ ಅವರ ವರ್ಚಸ್ಸು ಎಲ್ಲಾ ವಿಭಾಗದಜನಸಮುದಾಯ ವನ್ನು ಆಕರ್ಷಿಸುವ ಜತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಗೆಲ್ಲಲುಸಹಾಯವಾಗುತ್ತದೆ ಎನ್ನುವ ಹಲವಾರು ಸಮೀಕ್ಷೆ ವರದಿಗಳು ಪದ್ಮರಾಜ್ ಆರ್‌ಗೆ ಸೀಟ್ ಗ್ಯಾರಂಟಿಯಾಗಲು ಪಕ್ಕಾ ಕಾರಣ ಎಂದುತಿಳಿದು ಬಂದಿದೆ. ಇವರಿಗೆ ಟಿಕೆಟ್ ನೀಡಿದರೆ ಕರಾವಳಿಯ ರಾಜಕೀಯದಲ್ಲಿ ಮಹತ್ವದ ತಿರುವು ಕಾಣಲಿದೆ ಎನ್ನುವ ಅಂಶವೂಬಹಿರಂಗವಾಗಿದೆ.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »