TOP STORIES:

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ನೆಲೆಯಲ್ಲಿ ಸಮಾಜ ಸೇವೆಯಲ್ಲಿ  ಮೈಗೂಡಿಸಿಕೊಂಡು, ಅಪಾರ ಶ್ರದ್ಧೆ, ಭಕ್ತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಬಹು ದೊಡ್ಡ ಜವಾಬ್ದಾರಿಯನ್ನು  ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡು25 ವರ್ಷಗಳಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರು ಕ್ಷೇತ್ರದ ಅಭಿವೃದ್ಧಿಯರುವಾರಿ ಜನಾರ್ದನ ಪೂಜಾರಿಯವರ ಅಪ್ಪಟ ಅನುಯಾಯಿಯಾಗಿ ದೇವಸ್ಥಾನಗಳು ಧಾರ್ಮಿಕತೆಯ ಜತೆ ಸಮಾಜಮುಖಿಚಟುವಟಿಕೆಗಳಲ್ಲಿ ಕೂಡ ಮುಂದೆ ಬರಬೇಕೆಂದು ತೋರಿಸಿಕೊಟ್ಟವರು.

1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆಪ್ರಾರಂಭಿಸಿ 4 ವರ್ಷಗಳ ಬಳಿಕ ಸ್ವಂತ ಕಚೇರಿಯನ್ನು ಪ್ರಾರಂಭಿಸಿದರು. ಶುದ್ಧಹಸ್ತದ ರಾಜಕಾರಣಿ ಬಿ.ಜನಾರ್ದನ ಪೂಜಾರಿಯವರಎಲ್ಲ ಚುನಾವಣೆಗಳಲ್ಲಿ ಅವರೊಂದಿಗೆ ದುಡಿದಿರುವ ಇವರು ಜಾತ್ಯತೀತ ಮನೋಭಾವ, ಸರ್ವರಿಗೂ ಸಮಪಾಲು, ಸರ್ವರಿಗೂಸಮಬಾಳು ಎನ್ನುವ ತತ್ವ ಸಿದ್ಧಾಂತದ ಬಗ್ಗೆ ಒಲವು ಹೊಂದಿರುವವರು.

ಕರೊನಾ ಮಹಾಮಾರಿಯ ಸಂದರ್ಭ ಬಡವರ, ನಿರಾಶ್ರಿತರ, ಕೂಲಿಕಾರ್ಮಿಕರ ಸಹಾಯಕ್ಕೆಸ್ವತಃ ಮುಂದೆ ನಿಂತು ಕೆಲಸ ಮಾಡಿದ್ದು, ಗುರುಬೆಳದಿಂಗಳು ಸಂಸ್ಥೆಯ ಮೂಲಕ ಜನಾರ್ದನ ಪೂಜಾರಿಯವರ ಮಾರ್ಗದರ್ಶನ, ದಿ. ಜಯಸುವರ್ಣರ ಆಶೋತ್ತರಗಳಸ್ಫೂರ್ತಿಯ ನೆಲೆಯಲ್ಲಿ ಹಿರಿಯರ ಜತೆ ಕ್ರಿಯಾಶೀಲ ಯುವಕರ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು ಪದ್ಮರಾಜ್ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿತು.

ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಶ್ರೀ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸಂದರ್ಭ ಮುಂಚೂಣಿಯಲ್ಲಿ ನಿಂತುಹೋರಾಟ, 10ನೇ ತರಗತಿಯಲ್ಲಿ ಸಮಾಜ ವಿಜ್ಞಾನ ಪಠ್ಯ ಕೈಬಿಟ್ಟದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ಹೋರಾಟಸಂಘಟಿಸಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಗೌರವಿಸುತ್ತ ಎಲ್ಲ ವರ್ಗದ ಜನರಿಂದ ಪ್ರೀತಿ ವಿಶ್ವಾಸ ಗಳಿಸಿದ್ದು. ಮೊದಲಾದ ಅಂಶಗಳ ಜತೆ ಪದ್ಮರಾಜ್‌ರವರಿಗೆ ವಿಧಾನಸಭಾ ಟಿಕೆಟ್ ನೀಡಿದರೆ ಅವರ ವರ್ಚಸ್ಸು ಎಲ್ಲಾ ವಿಭಾಗದಜನಸಮುದಾಯ ವನ್ನು ಆಕರ್ಷಿಸುವ ಜತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಗೆಲ್ಲಲುಸಹಾಯವಾಗುತ್ತದೆ ಎನ್ನುವ ಹಲವಾರು ಸಮೀಕ್ಷೆ ವರದಿಗಳು ಪದ್ಮರಾಜ್ ಆರ್‌ಗೆ ಸೀಟ್ ಗ್ಯಾರಂಟಿಯಾಗಲು ಪಕ್ಕಾ ಕಾರಣ ಎಂದುತಿಳಿದು ಬಂದಿದೆ. ಇವರಿಗೆ ಟಿಕೆಟ್ ನೀಡಿದರೆ ಕರಾವಳಿಯ ರಾಜಕೀಯದಲ್ಲಿ ಮಹತ್ವದ ತಿರುವು ಕಾಣಲಿದೆ ಎನ್ನುವ ಅಂಶವೂಬಹಿರಂಗವಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »