TOP STORIES:

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ನೆಲೆಯಲ್ಲಿ ಸಮಾಜ ಸೇವೆಯಲ್ಲಿ  ಮೈಗೂಡಿಸಿಕೊಂಡು, ಅಪಾರ ಶ್ರದ್ಧೆ, ಭಕ್ತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಬಹು ದೊಡ್ಡ ಜವಾಬ್ದಾರಿಯನ್ನು  ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡು25 ವರ್ಷಗಳಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರು ಕ್ಷೇತ್ರದ ಅಭಿವೃದ್ಧಿಯರುವಾರಿ ಜನಾರ್ದನ ಪೂಜಾರಿಯವರ ಅಪ್ಪಟ ಅನುಯಾಯಿಯಾಗಿ ದೇವಸ್ಥಾನಗಳು ಧಾರ್ಮಿಕತೆಯ ಜತೆ ಸಮಾಜಮುಖಿಚಟುವಟಿಕೆಗಳಲ್ಲಿ ಕೂಡ ಮುಂದೆ ಬರಬೇಕೆಂದು ತೋರಿಸಿಕೊಟ್ಟವರು.

1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆಪ್ರಾರಂಭಿಸಿ 4 ವರ್ಷಗಳ ಬಳಿಕ ಸ್ವಂತ ಕಚೇರಿಯನ್ನು ಪ್ರಾರಂಭಿಸಿದರು. ಶುದ್ಧಹಸ್ತದ ರಾಜಕಾರಣಿ ಬಿ.ಜನಾರ್ದನ ಪೂಜಾರಿಯವರಎಲ್ಲ ಚುನಾವಣೆಗಳಲ್ಲಿ ಅವರೊಂದಿಗೆ ದುಡಿದಿರುವ ಇವರು ಜಾತ್ಯತೀತ ಮನೋಭಾವ, ಸರ್ವರಿಗೂ ಸಮಪಾಲು, ಸರ್ವರಿಗೂಸಮಬಾಳು ಎನ್ನುವ ತತ್ವ ಸಿದ್ಧಾಂತದ ಬಗ್ಗೆ ಒಲವು ಹೊಂದಿರುವವರು.

ಕರೊನಾ ಮಹಾಮಾರಿಯ ಸಂದರ್ಭ ಬಡವರ, ನಿರಾಶ್ರಿತರ, ಕೂಲಿಕಾರ್ಮಿಕರ ಸಹಾಯಕ್ಕೆಸ್ವತಃ ಮುಂದೆ ನಿಂತು ಕೆಲಸ ಮಾಡಿದ್ದು, ಗುರುಬೆಳದಿಂಗಳು ಸಂಸ್ಥೆಯ ಮೂಲಕ ಜನಾರ್ದನ ಪೂಜಾರಿಯವರ ಮಾರ್ಗದರ್ಶನ, ದಿ. ಜಯಸುವರ್ಣರ ಆಶೋತ್ತರಗಳಸ್ಫೂರ್ತಿಯ ನೆಲೆಯಲ್ಲಿ ಹಿರಿಯರ ಜತೆ ಕ್ರಿಯಾಶೀಲ ಯುವಕರ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು ಪದ್ಮರಾಜ್ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿತು.

ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಶ್ರೀ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸಂದರ್ಭ ಮುಂಚೂಣಿಯಲ್ಲಿ ನಿಂತುಹೋರಾಟ, 10ನೇ ತರಗತಿಯಲ್ಲಿ ಸಮಾಜ ವಿಜ್ಞಾನ ಪಠ್ಯ ಕೈಬಿಟ್ಟದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ಹೋರಾಟಸಂಘಟಿಸಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಗೌರವಿಸುತ್ತ ಎಲ್ಲ ವರ್ಗದ ಜನರಿಂದ ಪ್ರೀತಿ ವಿಶ್ವಾಸ ಗಳಿಸಿದ್ದು. ಮೊದಲಾದ ಅಂಶಗಳ ಜತೆ ಪದ್ಮರಾಜ್‌ರವರಿಗೆ ವಿಧಾನಸಭಾ ಟಿಕೆಟ್ ನೀಡಿದರೆ ಅವರ ವರ್ಚಸ್ಸು ಎಲ್ಲಾ ವಿಭಾಗದಜನಸಮುದಾಯ ವನ್ನು ಆಕರ್ಷಿಸುವ ಜತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಗೆಲ್ಲಲುಸಹಾಯವಾಗುತ್ತದೆ ಎನ್ನುವ ಹಲವಾರು ಸಮೀಕ್ಷೆ ವರದಿಗಳು ಪದ್ಮರಾಜ್ ಆರ್‌ಗೆ ಸೀಟ್ ಗ್ಯಾರಂಟಿಯಾಗಲು ಪಕ್ಕಾ ಕಾರಣ ಎಂದುತಿಳಿದು ಬಂದಿದೆ. ಇವರಿಗೆ ಟಿಕೆಟ್ ನೀಡಿದರೆ ಕರಾವಳಿಯ ರಾಜಕೀಯದಲ್ಲಿ ಮಹತ್ವದ ತಿರುವು ಕಾಣಲಿದೆ ಎನ್ನುವ ಅಂಶವೂಬಹಿರಂಗವಾಗಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »