TOP STORIES:

ಯುವವಾಹಿನಿ ರಿ ಕೊಲ್ಯ ಘಟಕದ ವತಿಯಿಂದ ಮನೆಮನ ಬೆಳಗಿಸಿದ ಗುರುಭಜನೆ , ಗುರುಸ್ಮರಣೆ


ಯುವವಾಹಿನಿ ರಿ ಕೊಲ್ಯ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಕಾರ್ಯಗಳಿಗೆ ಪೂರಕವಾಗಿ ನಮ್ಮ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ರವರ ತರವಾಡು ಮನೆ ಕಣೀರುತೋಟದಲ್ಲಿ ದಿನಾಂಕ 05-10-2023 ನೇ ಗುರುವಾರದಂದು ಸಂಜೆ ಗುರುಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಜರುಗಿತು.

ಭಗವಂತನೊಂದಿಗೆ ನೇರವಾಗಿ ಸಂವಾದಿಸುವ ಸಾಧನವೆಂದರೆ ಅದು ಭಜನೆ. ಭಜನೆ ಇದ್ದಲ್ಲಿ ಎಂದಿಗೂ ವಿಭಜನೆ ಇರುವುದಿಲ್ಲ. ದೇವರ ನಾಮವನ್ನು, ಮಹಿಮೆಯನ್ನು ಹಾಡಿ ಭಜಿಸುವ ಮೂಲಕ ಭಗವಂತನೊಂದಿಗೆ ಲೀನವಾಗುವಂತಹ ಆ ಒಂದು ಅನುಭವವನ್ನು ವರ್ಣಿಸಲು ಅಸಾಧ್ಯ. ಹಿರಿಯರ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಸಂಪ್ರದಾಯವನ್ನು ಮರೀಚಿಕೆ ಆಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಮನವಿ ಮಾಡಿ, ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಇದರ ಹಿರಿಯ ಭಜನಾ ಸಂಚಾಲಕರು, ಯುವವಾಹಿನಿ ರಿ ಕೊಲ್ಯ ಘಟಕದ ಆರೋಗ್ಯ ನಿರ್ದೇಶಕರೂ ಆಗಿರುವ ಶಶಿಕಾಂತ್ ಪರ್ಯತ್ತೂರು ಭಜನೆಯ ಮಹತ್ವದ ಕುರಿತು ವ್ಯಾಖ್ಯಾನ ನೀಡಿದರು.

ಯುವವಾಹಿನಿ ರಿ ಕೊಲ್ಯ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಚರಿತ್ರೆಯನ್ನು ಆಧರಿಸಿದ ಚಿತ್ರಣವನ್ನು ಕಥನಕವನದ ಮೂಲಕ ಪ್ರಸ್ತುತ ಪಡಿಸಿದರು. ಬ್ರಹ್ಮಶ್ರೀ ನಾರಾಯಣಗುರುಗಳು ನಡೆದು ಬಂದ ದಾರಿ, ಅವರ ಬದುಕು, ತತ್ವಾದರ್ಶಗಳು, ಸಮಾಜದ ಅಭ್ಯುದಯಕ್ಕೆ ನೀಡಿರುವ ಸಂದೇಶಗಳ ಕುರಿತು ಅರ್ಥಪೂರ್ಣವಾಗಿ ಮಂಡಿಸಿ ಕಿರು ಉಪನ್ಯಾಸ ನೀಡಿದರು.

ಯುವವಾಹಿನಿ ರಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜೇಶ್ ಬಿ. ಈ ಸಂದರ್ಭದಲ್ಲಿ ಹಾಜರಿದ್ದು ಸರ್ವರಿಗೂ ಮಾದರಿಯಾಗಿರುವ ಅರ್ಥಪೂರ್ಣ ಕಾರ್ಯಕ್ರಮದ ಆಯೋಜನೆಗೆ ಅಭಿನಂದನೆ ಸಲ್ಲಿಸಿದರು.‌ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅದೇ ರೀತಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಶ್ರೀ ಕುಸುಮಾಕರ ಕುಂಪಲರವರು ಸರ್ವರನ್ನು ಒಟ್ಟುಗೂಡಿಸುವ ಭಜನಾ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಣ್ಣಿನ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಕಾಲಘಟ್ಟದಲ್ಲಿ ಈ ರೀತಿಯ ಭಜನಾ ಸಂಕೀರ್ತನೆಗಳು ಬಹಳ ಅರ್ಥಪೂರ್ಣ, ಪ್ರತಿಯೊಬ್ಬರ ಮನೆಮನದಿಂದಲೇ ಈ ಕುರಿತು ಜಾಗೃತಿ ಮೂಡಬೇಕು ಎಂದು ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆಯವರು ಅಭಿಪ್ರಾಯ ವ್ಯಕ್ತಪಡಿಸಿದರು.

 

ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಇದರ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಕೊಲ್ಯ ಉಪಸ್ಥಿತರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಸ್ಥಾಪಕಾಧ್ಯಕ್ಷರಾದ ಶ್ರೀ ಸುರೇಶ್ ಬಿಲ್ಲವ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ, ಪ್ರಥಮ ಉಪಾಧ್ಯಕ್ಷರು ಶ್ರೀಮತಿ ಸುಧಾ ಸುರೇಶ್, ದ್ವಿತೀಯ ಉಪಾಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಬಂಧುಗಳು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಮಂಡಳಿಯ ಸದಸ್ಯರು ಹಾಗೂ ಬಿಲ್ಲವ ಸೇವಾ ಸಮಾಜ ರಿ ಕೊಲ್ಯದ ಸದಸ್ಯರು, ರಶ್ಮಿ ಸನಿಲ್ ಕುಟುಂಬಸ್ಥರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ್ದರು. ಭಜನೆಯ ನಂತರ ಗುರುಪೂಜೆ ಮತ್ತು ಪ್ರಸಾದ ವಿತರಣೆ ಹಾಗೂ ಸರ್ವರಿಗೂ ಅನ್ನ ಸಂತರ್ಪಣೆಯನ್ನು ನೀಡಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕೊಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.‌


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »