TOP STORIES:

FOLLOW US

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.


ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು.

ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂಭವಾದ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಶ್ರೀಮತಿ ಅನಿತಾಕಮಲಾಕ್ಷ  ಜೊತೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಸುಧೀರ್ ಇವರು ಮುನ್ನಡೆಸಿ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನುನಡೆಸಿಕೊಟ್ಟರು.

ಬಳಿಕ ಪ್ರೇರಕ ವಾಗ್ಮಿ ಶ್ರೀ ರಾಜೇಶ್ ಗೋಪೆ ಇವರು ಮಕ್ಕಳಿಗಾಗಿ ವಿವಿಧ ಪ್ರೇರೇಪಣಾ ಚಟುವಟಿಕೆಗಳನ್ನು ನಡೆಸಿ ಮಕ್ಕಳೊಂದಿಗೆಹಾಡಿ ಕುಣಿದರಲ್ಲದೆ ಮಕ್ಕಳೆಲ್ಲರನ್ನೂ ಧ್ಯಾನಾಸಕ್ತರನ್ನಾಗಿಸಿದರು.

11.30 ಸುಮಾರಿಗೆ ಸಭಾ ಕಾರ್ಯಕ್ರಮವು ಆರಂಭಗೊಂಡಿತು. ಪಿವಿಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಾಲೈವೇಣಿ ಅವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟಕರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಅವರು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಕಾರಿ ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನುನೆನಪಿಸಿಕೊಂಡು ಶಾಲಾಮಕ್ಕಳಿಗೆ ಉತ್ತಮ ನಡವಳಿಕೆಯ ಕಿವಿಮಾತುಗಳನ್ನಾಡಿದರು.

ಪಿವಿಪಿ ಶಾಲೆಯ ವಿದ್ಯಾಧಿಕಾರಿಗಳಾದ ಶ್ರೀ ಸೋಮಶೇಖರ್ ಅವರು ಮಾತನಾಡಿ ಯುವವಾಹಿನಿಯ ಸಮಾಜ ಸೇವಾಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ಡಾ. ಉಷಾ ಮೋಹನ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಇವರ ಸಹಯೋಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಶೂವಿತರಣೆಯನ್ನು ಮಾಡಲಾಯಿತು.

ಮಕ್ಕಳಿಂದ ಹಾಗೂ  ಘಟಕದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ನಡೆಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಬಿಗ್ ಬಾಸ್ ಸ್ಪರ್ಧಿಗಳಾದ ಶ್ರೀ ಧನರಾಜ್ ಮತ್ತು ಶ್ರೀ ಶಮಂತ್ ( ಬ್ರೋ ಗೌಡ) ಇವರು ಮಾತನಾಡಿಮಕ್ಕಳನ್ನು ಮನರಂಜಿಸಿದರು.

ಪತ್ರಕರ್ತರಾದ ಶ್ರೀ ನವೀನ್ ಸೂರಿಂಜೆ ಯವರು ಕೂಡ ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಹಿತವಚನ ಗಳನ್ನಾಡಿದರು.

ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆ ನರೇಂದ್ರಬಾಬು ಅವರು ಮುಖ್ಯ ಅತಿಥಿಯ ಭೂಮಿಕೆಯಲ್ಲಿ ಮಾತನಾಡಿ ಪಿವಿಪಿ ಶಾಲೆಯಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಸ್ಮರಿಸಿಕೊಂಡು, ಯುವವಾಹಿನಿ ಯಂತಹ ಸಂಘಟನೆಗಳುಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ  ಬರಬೇಕೆಂದು ಪ್ರೇರೇಪಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರು ನೆಲೆಯಲ್ಲಿ ಮಾತನಾಡಿದ ಶ್ರೀ ರಾಘವೇಂದ್ರ ಪೂಜಾರಿ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದ ಗಣ್ಯ ಅತಿಥಿಗಳ ಸಾಲಿನಲ್ಲಿ ಶ್ರೀ ಪಿವಿಪಿ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಶ್ರೀ ಪ್ರಕಾಶ್ ಎಸ್, ಯುವವಾಹಿನಿಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸುಧೀರ್ಪೂಜಾರಿ, ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಸಲಹೆಗಾರರಾದ ಶ್ರೀ ರಘು ಮಟ್ಟು ಇನ್ನಿತರರು ಭಾಗವಹಿಸಿದ್ದರು.

ಎಲ್ಲಾ ಗಣ್ಯ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ಶ್ರೀ ಶಶಿಧರ ಕೋಟ್ಯಾನ್ ಇವರು ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿಯಮಾಹಿತಿಯನ್ನು ಒದಗಿಸಿಕೊಟ್ಟು ನೆರೆದ ಅತಿಥಿಗಳಿಗೆ ಹಾಗೂ ಶಾಲೆಯ ಆಡಳಿತ ವರ್ಗ, ಶಿಕ್ಷಕ ವರ್ಗಕ್ಕೆ ಮತ್ತು ಮಕ್ಕಳಿಗೆ ಹೃತ್ಪೂರ್ವಕಧನ್ಯವಾದಗಳನ್ನು ಸಮರ್ಪಿಸಿದರು.

ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,

ಯುವವಾಹಿನಿ (ರಿ)  ಬೆಂಗಳೂರು ಘಟಕ


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »