TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.


ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು.

ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂಭವಾದ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಶ್ರೀಮತಿ ಅನಿತಾಕಮಲಾಕ್ಷ  ಜೊತೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಸುಧೀರ್ ಇವರು ಮುನ್ನಡೆಸಿ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನುನಡೆಸಿಕೊಟ್ಟರು.

ಬಳಿಕ ಪ್ರೇರಕ ವಾಗ್ಮಿ ಶ್ರೀ ರಾಜೇಶ್ ಗೋಪೆ ಇವರು ಮಕ್ಕಳಿಗಾಗಿ ವಿವಿಧ ಪ್ರೇರೇಪಣಾ ಚಟುವಟಿಕೆಗಳನ್ನು ನಡೆಸಿ ಮಕ್ಕಳೊಂದಿಗೆಹಾಡಿ ಕುಣಿದರಲ್ಲದೆ ಮಕ್ಕಳೆಲ್ಲರನ್ನೂ ಧ್ಯಾನಾಸಕ್ತರನ್ನಾಗಿಸಿದರು.

11.30 ಸುಮಾರಿಗೆ ಸಭಾ ಕಾರ್ಯಕ್ರಮವು ಆರಂಭಗೊಂಡಿತು. ಪಿವಿಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಾಲೈವೇಣಿ ಅವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟಕರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಅವರು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಕಾರಿ ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನುನೆನಪಿಸಿಕೊಂಡು ಶಾಲಾಮಕ್ಕಳಿಗೆ ಉತ್ತಮ ನಡವಳಿಕೆಯ ಕಿವಿಮಾತುಗಳನ್ನಾಡಿದರು.

ಪಿವಿಪಿ ಶಾಲೆಯ ವಿದ್ಯಾಧಿಕಾರಿಗಳಾದ ಶ್ರೀ ಸೋಮಶೇಖರ್ ಅವರು ಮಾತನಾಡಿ ಯುವವಾಹಿನಿಯ ಸಮಾಜ ಸೇವಾಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ಡಾ. ಉಷಾ ಮೋಹನ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಇವರ ಸಹಯೋಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಶೂವಿತರಣೆಯನ್ನು ಮಾಡಲಾಯಿತು.

ಮಕ್ಕಳಿಂದ ಹಾಗೂ  ಘಟಕದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ನಡೆಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಬಿಗ್ ಬಾಸ್ ಸ್ಪರ್ಧಿಗಳಾದ ಶ್ರೀ ಧನರಾಜ್ ಮತ್ತು ಶ್ರೀ ಶಮಂತ್ ( ಬ್ರೋ ಗೌಡ) ಇವರು ಮಾತನಾಡಿಮಕ್ಕಳನ್ನು ಮನರಂಜಿಸಿದರು.

ಪತ್ರಕರ್ತರಾದ ಶ್ರೀ ನವೀನ್ ಸೂರಿಂಜೆ ಯವರು ಕೂಡ ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಹಿತವಚನ ಗಳನ್ನಾಡಿದರು.

ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆ ನರೇಂದ್ರಬಾಬು ಅವರು ಮುಖ್ಯ ಅತಿಥಿಯ ಭೂಮಿಕೆಯಲ್ಲಿ ಮಾತನಾಡಿ ಪಿವಿಪಿ ಶಾಲೆಯಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಸ್ಮರಿಸಿಕೊಂಡು, ಯುವವಾಹಿನಿ ಯಂತಹ ಸಂಘಟನೆಗಳುಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ  ಬರಬೇಕೆಂದು ಪ್ರೇರೇಪಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರು ನೆಲೆಯಲ್ಲಿ ಮಾತನಾಡಿದ ಶ್ರೀ ರಾಘವೇಂದ್ರ ಪೂಜಾರಿ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದ ಗಣ್ಯ ಅತಿಥಿಗಳ ಸಾಲಿನಲ್ಲಿ ಶ್ರೀ ಪಿವಿಪಿ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಶ್ರೀ ಪ್ರಕಾಶ್ ಎಸ್, ಯುವವಾಹಿನಿಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸುಧೀರ್ಪೂಜಾರಿ, ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಸಲಹೆಗಾರರಾದ ಶ್ರೀ ರಘು ಮಟ್ಟು ಇನ್ನಿತರರು ಭಾಗವಹಿಸಿದ್ದರು.

ಎಲ್ಲಾ ಗಣ್ಯ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ಶ್ರೀ ಶಶಿಧರ ಕೋಟ್ಯಾನ್ ಇವರು ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿಯಮಾಹಿತಿಯನ್ನು ಒದಗಿಸಿಕೊಟ್ಟು ನೆರೆದ ಅತಿಥಿಗಳಿಗೆ ಹಾಗೂ ಶಾಲೆಯ ಆಡಳಿತ ವರ್ಗ, ಶಿಕ್ಷಕ ವರ್ಗಕ್ಕೆ ಮತ್ತು ಮಕ್ಕಳಿಗೆ ಹೃತ್ಪೂರ್ವಕಧನ್ಯವಾದಗಳನ್ನು ಸಮರ್ಪಿಸಿದರು.

ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,

ಯುವವಾಹಿನಿ (ರಿ)  ಬೆಂಗಳೂರು ಘಟಕ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »