TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »