TOP STORIES:

FOLLOW US

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »