TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »