TOP STORIES:

ರಂಜು ತುಳುರಂಗ ಪ್ರೇಮಿ‌ ರಂಜಿತ್ ಕಕ್ಕಿಂಜೆ


ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ‌ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ.

ಇಂತಹ ನೈಜ ಪಾರದರ್ಶಕ ಗುಣವಿರುವಂತಹ ವ್ಯಕ್ತಿಯೇ ರಂಜಿತ್ ಕಕ್ಕಿಂಜೆ.ಅದರಲ್ಲಿಯೂ ತಾನು ನಿಂತ ನೆಲೆಯಾದ ತುಳುನಾಡಿನ ಪ್ರತಿಭೆಗಳು ಎತ್ತರೆತ್ತರ ಬೆಳೆಯಬೇಕು ದೇಶದೆಲ್ಲೆಡೆ ಪಸರಿಸಬೇಕೆಂಬುದೇ ಇವರ ಮುಖ್ಯ ಉದ್ದೇಶವಾಗಿದೆ.ಈ ಅಸಮಾನ್ಯ ವ್ಯಕ್ತಿಯ ಬಗ್ಗೆ ತಿಳಿಯೋಣ.

ಬರಹ-ತೃಪ್ತಿ.ಜಿ.ಕುಂಪಲ.

ರಂಜಿತ್ ಕಕ್ಕಿಂಜೆ ಇವರು ವಸಂತ್ ಪೂಜಾರಿ ಹಾಗೂ ಉಷಾ ದಂಪತಿಯವರ ಸುಪುತ್ರ.ಇವರು ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ ಎಸ್.ಡಿ.ಎಂ.ಐಟಿಸಿ ವೇಣೂರಿನಲ್ಲಿ‌ ಐಟಿಐ ಮುಗಿಸಿ,ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಪ್ರಸ್ತುತ ಸೌದಿ ಅರೇಬಿಯಾದ ಅಬ್ಹಾ ಏರ್ಪೋರ್ಟಿನಲ್ಲಿ ಗ್ರೌಂಡ್ ಸಪೋರ್ಟ್ ಸರ್ವಿಸಸ್ ಮೈಂಟೇನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಕಲಾಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಲಾವಿದನಾಗಿ,ಭಜಕನಾಗಿ,ನಾಯಕನಾಗಿ ಮುಂದುವರಿಯುತ್ತಿರುವ ಇವರು ಯುವ ಸಾಹಿತಿಯೂ ಹೌದು.ಒಬ್ಬ ಕಲಾವಿದನ ಸಾಧನೆಯನ್ನು ಎಳೆ ಎಳೆಯಾಗಿ ತನ್ನ ಬರವಣಿಗಯಲ್ಲಿ ಅಲಂಕರಿಸಿ ಸಾಧಕನ ಸಾಧನೆಗೆ ತನ್ನ ಲೇಖನಿಯ ಮುಖಾಂತರ ಜೀವ ತುಂಬುವ ಕಲಾ ಪೋಷಕರು ಇವರು.

ಭಜನೆಯೆಂದರೆ ಇವರಿಗೆ ಅಪಾರ ಪ್ರೀತಿ.ಬಾಲ್ಯದಲ್ಲೇ ಭಜನೆ ಮಾಡುತ್ತಾ ಬೆಳೆದವರು ಇವರು.ತನ್ನ ಊರಿನವರಾದ ಕಮಲಾಕ್ಷ ಪೂಜಾರಿಯವರ ಪ್ರೋತ್ಸಾಹದಿಂದ “ಶ್ರೀ ಶಬರಿ ಭಜನಾ ಮಂಡಳಿ” ಯನ್ನು ತೋಟತ್ತಾಡಿಯಲ್ಲಿ ಕಟ್ಟಿದರು.ನಂತರ ವೃತ್ತಿಯನ್ನು ಹರಸಿ ಬೆಂಗಳೂರಿಗೆ ನಡೆದವರು ತನ್ನ ಕಲೆಯಲ್ಲಿನ ಉತ್ಸಾಹವನ್ನು ಬಿಡದೆ ಬೆಂಗಳೂರಿನಲ್ಲಿಯೂ “ಮಕರ ಶ್ರೀ ಭಜನಾ ಮಂಡಳಿ” ಯನ್ನು ಹೊಸಳ್ಳಿಯ ಬಾಲಗಂಗಾಧೇಶ್ವರ ದೇವಸ್ಥಾನದಲ್ಲಿ ರಚಿಸಿದರು.ಹೀಗೇ ಕಲಾ ಆಸಕ್ತಿಯಿಂದ ಕಲಾಮಾತೆಯ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಧು ಬಂಗೇರ ಕಲ್ಲಡ್ಕ ಹಾಗೂ ಕಿಶನ್ ಪೂಜಾರಿ ಯವರೊಂದಿಗೆ ಕೂಡಿ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಬೆಂಗಳೂರು ಘಟಕವನ್ನು ಸ್ಥಾಪಿಸಲು ಶ್ರಮಿಸಿದರು.ಈ ಸಂಸ್ಥೆಯ ಮೊದಲ ವರ್ಷಾವಧಿಯಲ್ಲಿ ಸಾಂಸ್ಕೃತಿಕ ನಿರ್ದೇಶಕರಾಗಿ ಕಲಾ ಸೇವೆಯನ್ನು ಸಲ್ಲಿಸಿದರು.

ರಂಗದಲ್ಲಿ ಸಾಹಿತಿಯಾಗಿ ಬರವಣಿಗೆಯ ಮಾಲಾರ್ಪಣೆಯನ್ನು ಗೈಯುತ್ತಾ ಇವರು ಶಬರಿ ಭಜನಾ ತಂಡದ ಯುವಕರಿಗೆ ಅಭಿನಯವನ್ನು ಕಲಿಸಿ ಕಿರಣ್ ಕಕ್ಕಿಂಜೆಯವರ ಸಹಕಾರದಿಂದ “ಬುದ್ಧಿ ಬನ್ನಗ” ಎಂಬ ತುಳು ನಾಟಕದ ಸಾಹಿತ್ಯವನ್ನು ಸ್ವತಃ ತಾನೇ ಬರೆದು ನಿರ್ದೇಶಿಸಿ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾದರು.ತದನಂತರ “ಗೌಜಿ ಗಮ್ಮತ್ತ್”, ” ಎನ್ನ ತಂಗಡಿ”, “ಮಲ್ಲಸ್ತಿಕೆದ ಮರ್ಮಾಲ್”,” ಒಂಜೆಕ್ ಒಂಜರೆ ಮಲ್ಪೊರ್ಚಿ” ಮೊದಲಾದ ನಾಟಕಗಳಿಗೆ ಸಾಹಿತ್ಯ ಬರೆದು ನಿರ್ದೇಶಿಸಿ ನಟಿಸಿರುವ ಹೆಗ್ಗಳಿಕೆ ಇವರದ್ದು.ಇವರು “ಗೋಲ್ಮಾಲ್” ಎಂಬ ತುಳು ಚಲನಚಿತ್ರದಲ್ಲಿಯೂ ನಟಿಸಿರುವರು. ತನ್ನ ವೃತ್ತಿಜೀವನದಲ್ಲೂ ತುಳುನಾಡಿನ ಯುವ ಪ್ರತಿಭೆಗಳಿಗೆ ನಿರಂತರ ನಿಸ್ವಾರ್ಥ ಸೇವೆಯಲ್ಲಿ ಇವರು “ಕಲಾವಿದೆರೆ ಕಡಲ್” ಎಂಬ ವಾಟ್ಸ್ ಆ್ಯಪ್ ಗ್ರೂಪ್ ನಿರ್ಮಿಸಿ ತುಳುನಾಡ ಪ್ರತಿಭೆಗಳಿಗೆ ತನ್ನ ಬರವಣಿಗೆಯ ಮೂಲಕ ಪ್ರೋತ್ಸಾಹವನ್ನು ನೀಡುತ್ತಾ,ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರ ನಿಸ್ವಾರ್ಥ ಕಲಾ ಸೇವೆಗೊಂದು ಗುರುತು ಎಂಬಂತೆ ಪ್ರಶಸ್ತಿ,ಪುರಸ್ಕಾರಗಳು ಇವರಿಗೆ ದೊರಕದೆ ಉಳಿದಿಲ್ಲ.ಯುವವಾಹಿನಿ(ರಿ).ಬೆಂಗಳೂರು ಘಟಕದ ವತಿಯಿಂದ ಸನ್ಮಾನ,ಮಡಿಲು ಸಂಸ್ಥೆಯಿಂದ “ಮಡಿಲು” ಪುರಸ್ಕಾರ,”ತೆಲಿಕೆದ ತೆನಾಲಿ” ಕಾರ್ಲ ತಂಡದಿಂದ “ಕಲಾವಿದರ ಕಣ್ಮಣಿ” ಎಂಬ ಬಿರುದು ನೀಡಿ ಗೌರವಿಸಲಾಗಿದೆ.ನಿಜವಾಗಿಯೂ ಇವರು ಕಲಾವಿದರ ಕಣ್ಮಣಿಯೆ ಹೌದು.ತೆರೆಮರೆಯಲ್ಲಿ ಅಡಗಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ರಂಜುರವರಂತಹ ಕಲಾ ಪೋಷಕ ಹುಟ್ಟಲೇಬೇಕು.ಕಲಾವಿದನು ಅರಳಲು ಪ್ರಶಂಸೆಗಿಂತ ಇತರರ ಪ್ರೋತ್ಸಾಹದಲ್ಲಿ ಖುಷಿಪಟ್ಟು ತ‌ನಗೆ ತಾನು ಪ್ರಶಂಸೆಯನ್ನು ಪಡೆವ ನಿಸ್ವಾರ್ಥ ಕಲಾಸೇವಕನ ಅಡಿಯಲ್ಲಿ ಮತ್ತಷ್ಟು ಪ್ರತಿಭೆಗಳು ಚಿಗುರಲಿ.ನಾಟಕ ಪ್ರೇಮಿಗಳ ಮನರಂಜಿಸಲು “ರಂಜು” ರವರಿಗೆ ಕಲಾಮಾತೆಯ ಆಶೀರ್ವಾದ ಸದಾ ಇರಲಿ. ದೇವರು ಒಳಿತನ್ನು ಕರುಣಿಸಲಿ.


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »