TOP STORIES:

FOLLOW US

ರಂಜು ತುಳುರಂಗ ಪ್ರೇಮಿ‌ ರಂಜಿತ್ ಕಕ್ಕಿಂಜೆ


ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ‌ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ.

ಇಂತಹ ನೈಜ ಪಾರದರ್ಶಕ ಗುಣವಿರುವಂತಹ ವ್ಯಕ್ತಿಯೇ ರಂಜಿತ್ ಕಕ್ಕಿಂಜೆ.ಅದರಲ್ಲಿಯೂ ತಾನು ನಿಂತ ನೆಲೆಯಾದ ತುಳುನಾಡಿನ ಪ್ರತಿಭೆಗಳು ಎತ್ತರೆತ್ತರ ಬೆಳೆಯಬೇಕು ದೇಶದೆಲ್ಲೆಡೆ ಪಸರಿಸಬೇಕೆಂಬುದೇ ಇವರ ಮುಖ್ಯ ಉದ್ದೇಶವಾಗಿದೆ.ಈ ಅಸಮಾನ್ಯ ವ್ಯಕ್ತಿಯ ಬಗ್ಗೆ ತಿಳಿಯೋಣ.

ಬರಹ-ತೃಪ್ತಿ.ಜಿ.ಕುಂಪಲ.

ರಂಜಿತ್ ಕಕ್ಕಿಂಜೆ ಇವರು ವಸಂತ್ ಪೂಜಾರಿ ಹಾಗೂ ಉಷಾ ದಂಪತಿಯವರ ಸುಪುತ್ರ.ಇವರು ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ ಎಸ್.ಡಿ.ಎಂ.ಐಟಿಸಿ ವೇಣೂರಿನಲ್ಲಿ‌ ಐಟಿಐ ಮುಗಿಸಿ,ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಪ್ರಸ್ತುತ ಸೌದಿ ಅರೇಬಿಯಾದ ಅಬ್ಹಾ ಏರ್ಪೋರ್ಟಿನಲ್ಲಿ ಗ್ರೌಂಡ್ ಸಪೋರ್ಟ್ ಸರ್ವಿಸಸ್ ಮೈಂಟೇನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಕಲಾಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಲಾವಿದನಾಗಿ,ಭಜಕನಾಗಿ,ನಾಯಕನಾಗಿ ಮುಂದುವರಿಯುತ್ತಿರುವ ಇವರು ಯುವ ಸಾಹಿತಿಯೂ ಹೌದು.ಒಬ್ಬ ಕಲಾವಿದನ ಸಾಧನೆಯನ್ನು ಎಳೆ ಎಳೆಯಾಗಿ ತನ್ನ ಬರವಣಿಗಯಲ್ಲಿ ಅಲಂಕರಿಸಿ ಸಾಧಕನ ಸಾಧನೆಗೆ ತನ್ನ ಲೇಖನಿಯ ಮುಖಾಂತರ ಜೀವ ತುಂಬುವ ಕಲಾ ಪೋಷಕರು ಇವರು.

ಭಜನೆಯೆಂದರೆ ಇವರಿಗೆ ಅಪಾರ ಪ್ರೀತಿ.ಬಾಲ್ಯದಲ್ಲೇ ಭಜನೆ ಮಾಡುತ್ತಾ ಬೆಳೆದವರು ಇವರು.ತನ್ನ ಊರಿನವರಾದ ಕಮಲಾಕ್ಷ ಪೂಜಾರಿಯವರ ಪ್ರೋತ್ಸಾಹದಿಂದ “ಶ್ರೀ ಶಬರಿ ಭಜನಾ ಮಂಡಳಿ” ಯನ್ನು ತೋಟತ್ತಾಡಿಯಲ್ಲಿ ಕಟ್ಟಿದರು.ನಂತರ ವೃತ್ತಿಯನ್ನು ಹರಸಿ ಬೆಂಗಳೂರಿಗೆ ನಡೆದವರು ತನ್ನ ಕಲೆಯಲ್ಲಿನ ಉತ್ಸಾಹವನ್ನು ಬಿಡದೆ ಬೆಂಗಳೂರಿನಲ್ಲಿಯೂ “ಮಕರ ಶ್ರೀ ಭಜನಾ ಮಂಡಳಿ” ಯನ್ನು ಹೊಸಳ್ಳಿಯ ಬಾಲಗಂಗಾಧೇಶ್ವರ ದೇವಸ್ಥಾನದಲ್ಲಿ ರಚಿಸಿದರು.ಹೀಗೇ ಕಲಾ ಆಸಕ್ತಿಯಿಂದ ಕಲಾಮಾತೆಯ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಧು ಬಂಗೇರ ಕಲ್ಲಡ್ಕ ಹಾಗೂ ಕಿಶನ್ ಪೂಜಾರಿ ಯವರೊಂದಿಗೆ ಕೂಡಿ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಬೆಂಗಳೂರು ಘಟಕವನ್ನು ಸ್ಥಾಪಿಸಲು ಶ್ರಮಿಸಿದರು.ಈ ಸಂಸ್ಥೆಯ ಮೊದಲ ವರ್ಷಾವಧಿಯಲ್ಲಿ ಸಾಂಸ್ಕೃತಿಕ ನಿರ್ದೇಶಕರಾಗಿ ಕಲಾ ಸೇವೆಯನ್ನು ಸಲ್ಲಿಸಿದರು.

ರಂಗದಲ್ಲಿ ಸಾಹಿತಿಯಾಗಿ ಬರವಣಿಗೆಯ ಮಾಲಾರ್ಪಣೆಯನ್ನು ಗೈಯುತ್ತಾ ಇವರು ಶಬರಿ ಭಜನಾ ತಂಡದ ಯುವಕರಿಗೆ ಅಭಿನಯವನ್ನು ಕಲಿಸಿ ಕಿರಣ್ ಕಕ್ಕಿಂಜೆಯವರ ಸಹಕಾರದಿಂದ “ಬುದ್ಧಿ ಬನ್ನಗ” ಎಂಬ ತುಳು ನಾಟಕದ ಸಾಹಿತ್ಯವನ್ನು ಸ್ವತಃ ತಾನೇ ಬರೆದು ನಿರ್ದೇಶಿಸಿ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾದರು.ತದನಂತರ “ಗೌಜಿ ಗಮ್ಮತ್ತ್”, ” ಎನ್ನ ತಂಗಡಿ”, “ಮಲ್ಲಸ್ತಿಕೆದ ಮರ್ಮಾಲ್”,” ಒಂಜೆಕ್ ಒಂಜರೆ ಮಲ್ಪೊರ್ಚಿ” ಮೊದಲಾದ ನಾಟಕಗಳಿಗೆ ಸಾಹಿತ್ಯ ಬರೆದು ನಿರ್ದೇಶಿಸಿ ನಟಿಸಿರುವ ಹೆಗ್ಗಳಿಕೆ ಇವರದ್ದು.ಇವರು “ಗೋಲ್ಮಾಲ್” ಎಂಬ ತುಳು ಚಲನಚಿತ್ರದಲ್ಲಿಯೂ ನಟಿಸಿರುವರು. ತನ್ನ ವೃತ್ತಿಜೀವನದಲ್ಲೂ ತುಳುನಾಡಿನ ಯುವ ಪ್ರತಿಭೆಗಳಿಗೆ ನಿರಂತರ ನಿಸ್ವಾರ್ಥ ಸೇವೆಯಲ್ಲಿ ಇವರು “ಕಲಾವಿದೆರೆ ಕಡಲ್” ಎಂಬ ವಾಟ್ಸ್ ಆ್ಯಪ್ ಗ್ರೂಪ್ ನಿರ್ಮಿಸಿ ತುಳುನಾಡ ಪ್ರತಿಭೆಗಳಿಗೆ ತನ್ನ ಬರವಣಿಗೆಯ ಮೂಲಕ ಪ್ರೋತ್ಸಾಹವನ್ನು ನೀಡುತ್ತಾ,ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರ ನಿಸ್ವಾರ್ಥ ಕಲಾ ಸೇವೆಗೊಂದು ಗುರುತು ಎಂಬಂತೆ ಪ್ರಶಸ್ತಿ,ಪುರಸ್ಕಾರಗಳು ಇವರಿಗೆ ದೊರಕದೆ ಉಳಿದಿಲ್ಲ.ಯುವವಾಹಿನಿ(ರಿ).ಬೆಂಗಳೂರು ಘಟಕದ ವತಿಯಿಂದ ಸನ್ಮಾನ,ಮಡಿಲು ಸಂಸ್ಥೆಯಿಂದ “ಮಡಿಲು” ಪುರಸ್ಕಾರ,”ತೆಲಿಕೆದ ತೆನಾಲಿ” ಕಾರ್ಲ ತಂಡದಿಂದ “ಕಲಾವಿದರ ಕಣ್ಮಣಿ” ಎಂಬ ಬಿರುದು ನೀಡಿ ಗೌರವಿಸಲಾಗಿದೆ.ನಿಜವಾಗಿಯೂ ಇವರು ಕಲಾವಿದರ ಕಣ್ಮಣಿಯೆ ಹೌದು.ತೆರೆಮರೆಯಲ್ಲಿ ಅಡಗಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ರಂಜುರವರಂತಹ ಕಲಾ ಪೋಷಕ ಹುಟ್ಟಲೇಬೇಕು.ಕಲಾವಿದನು ಅರಳಲು ಪ್ರಶಂಸೆಗಿಂತ ಇತರರ ಪ್ರೋತ್ಸಾಹದಲ್ಲಿ ಖುಷಿಪಟ್ಟು ತ‌ನಗೆ ತಾನು ಪ್ರಶಂಸೆಯನ್ನು ಪಡೆವ ನಿಸ್ವಾರ್ಥ ಕಲಾಸೇವಕನ ಅಡಿಯಲ್ಲಿ ಮತ್ತಷ್ಟು ಪ್ರತಿಭೆಗಳು ಚಿಗುರಲಿ.ನಾಟಕ ಪ್ರೇಮಿಗಳ ಮನರಂಜಿಸಲು “ರಂಜು” ರವರಿಗೆ ಕಲಾಮಾತೆಯ ಆಶೀರ್ವಾದ ಸದಾ ಇರಲಿ. ದೇವರು ಒಳಿತನ್ನು ಕರುಣಿಸಲಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »