TOP STORIES:

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ


ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭುನೇತೃತ್ವದ ನಿರ್ಣಾಯಕ ಸಮಿತಿ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ: ಮಾ.6ರಂದು ತಣ್ಣೀರುಬಾವಿಯ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದುರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಯಪದವು ಪರಿಚಯ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿಕಮಲದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಯಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆಸೇರಿಸಲಾಗಿತ್ತು. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದು, ಗಂಭೀರ ಗಾಯವಾದ ದಿನವೇಶಾಲೆ ಬಿಟ್ಟಿದ್ದಾರೆ. ಕೇವಲ 15 ದಿನ ಶಾಲೆಯ ಮೆಟ್ಟಿಲು ಹತ್ತಿದ್ದು, ಅವರಿಗೆ ಅಕ್ಷರ ಜ್ಞಾನವಿಲ್ಲ.

ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾವಿತರಕರಾಗಿದ್ದರು. ಅಂಗಡಿಯಲ್ಲಿ ಸಹಾಯಕರಾಗಿದ್ದರು. ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿದ್ದರು. ಮೇಸ್ತ್ರಿಗೆ ಹೆಲ್ಪರ್ಆಗಿದ್ದರು. ಹೋಟೆಲ್‌ನಲ್ಲಿ ಸಹಾಯಕರಾಗಿದ್ದರು. ಅರ್ಚಕರ ಸಹಾಯಕನಾಗಿಯೂ ಕೆಲಸ ಮಾಡಿದ್ದರು.

2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರನಾದರು. ಬಳಿಕಸ್ವಂತ ಅನುಗ್ರಹ ಕನ್‌ಸ್ಟ್ರಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟ್ರೀಸ್ ಸ್ಥಾಪಿಸಿ, ಯಶಸ್ವಿ ಮತ್ತು ಬೇಡಿಕೆಯಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್‌ಮೆಂಟ್‌ ನಿರ್ಮಿಸಿದ ಹಿರಿಮೆಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ.

ಸಮಾಜಸೇವೆ: ಸಮಾಜಸೇವೆಯು ರವಿ ಕಕ್ಯಪದವು ಅವರ ಇಷ್ಟದ ಪ್ರವೃತ್ತಿ. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನುಸಮಾಜಸೇವೆಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡುತ್ತಿದ್ದಾರೆ. ಕುಲ್ಕುಂದಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನಮಾಡುತ್ತಿದ್ದಾರೆ.

ಸಮಾಜಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೆಸಿಐನ ವಲಯ ಉಪಾಧ್ಯಕ್ಷ, ವಲಯಾಧಿಕಾರಿ ಆಗಿದ್ದರು. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು *’ಬೆಂಕಿಯಲ್ಲಿ ಅರಳಿದಹೂವು‘ ಎಂಬ ಪುಸ್ತಕ ಬರೆದಿದ್ದಾರೆ.

ರವಿ ಕಕ್ಯಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಇತ್ಯಾದಿಯಲ್ಲದೇ, 270ಕ್ಕೂ ಅಧಿಕಸನ್ಮಾನಗಳು ಲಭಿಸಿವೆ.

ಶೂನ್ಯದಿಂದ ಬಂದು ಸಾಧಕನಾಗಿ ಮೆರೆದ ಅವರ ಜೀವನ ವೃತ್ತಾಂತ ಮತ್ತೊಬ್ಬರಿಗೆ ಪ್ರೇರಣದಾಯಕ. ಬದುಕಿನ ಕಷ್ಟ, ಕಾರ್ಪಣ್ಯ, ಕಲ್ಲು ಮುಳ್ಳುಗಳನ್ನು ದಾಟಿ ಸಾಧನೆ ಮಾಡಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »