TOP STORIES:

FOLLOW US

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ


ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭುನೇತೃತ್ವದ ನಿರ್ಣಾಯಕ ಸಮಿತಿ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ: ಮಾ.6ರಂದು ತಣ್ಣೀರುಬಾವಿಯ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದುರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಯಪದವು ಪರಿಚಯ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿಕಮಲದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಯಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆಸೇರಿಸಲಾಗಿತ್ತು. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದು, ಗಂಭೀರ ಗಾಯವಾದ ದಿನವೇಶಾಲೆ ಬಿಟ್ಟಿದ್ದಾರೆ. ಕೇವಲ 15 ದಿನ ಶಾಲೆಯ ಮೆಟ್ಟಿಲು ಹತ್ತಿದ್ದು, ಅವರಿಗೆ ಅಕ್ಷರ ಜ್ಞಾನವಿಲ್ಲ.

ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾವಿತರಕರಾಗಿದ್ದರು. ಅಂಗಡಿಯಲ್ಲಿ ಸಹಾಯಕರಾಗಿದ್ದರು. ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿದ್ದರು. ಮೇಸ್ತ್ರಿಗೆ ಹೆಲ್ಪರ್ಆಗಿದ್ದರು. ಹೋಟೆಲ್‌ನಲ್ಲಿ ಸಹಾಯಕರಾಗಿದ್ದರು. ಅರ್ಚಕರ ಸಹಾಯಕನಾಗಿಯೂ ಕೆಲಸ ಮಾಡಿದ್ದರು.

2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರನಾದರು. ಬಳಿಕಸ್ವಂತ ಅನುಗ್ರಹ ಕನ್‌ಸ್ಟ್ರಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟ್ರೀಸ್ ಸ್ಥಾಪಿಸಿ, ಯಶಸ್ವಿ ಮತ್ತು ಬೇಡಿಕೆಯಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್‌ಮೆಂಟ್‌ ನಿರ್ಮಿಸಿದ ಹಿರಿಮೆಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ.

ಸಮಾಜಸೇವೆ: ಸಮಾಜಸೇವೆಯು ರವಿ ಕಕ್ಯಪದವು ಅವರ ಇಷ್ಟದ ಪ್ರವೃತ್ತಿ. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನುಸಮಾಜಸೇವೆಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡುತ್ತಿದ್ದಾರೆ. ಕುಲ್ಕುಂದಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನಮಾಡುತ್ತಿದ್ದಾರೆ.

ಸಮಾಜಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೆಸಿಐನ ವಲಯ ಉಪಾಧ್ಯಕ್ಷ, ವಲಯಾಧಿಕಾರಿ ಆಗಿದ್ದರು. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು *’ಬೆಂಕಿಯಲ್ಲಿ ಅರಳಿದಹೂವು‘ ಎಂಬ ಪುಸ್ತಕ ಬರೆದಿದ್ದಾರೆ.

ರವಿ ಕಕ್ಯಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಇತ್ಯಾದಿಯಲ್ಲದೇ, 270ಕ್ಕೂ ಅಧಿಕಸನ್ಮಾನಗಳು ಲಭಿಸಿವೆ.

ಶೂನ್ಯದಿಂದ ಬಂದು ಸಾಧಕನಾಗಿ ಮೆರೆದ ಅವರ ಜೀವನ ವೃತ್ತಾಂತ ಮತ್ತೊಬ್ಬರಿಗೆ ಪ್ರೇರಣದಾಯಕ. ಬದುಕಿನ ಕಷ್ಟ, ಕಾರ್ಪಣ್ಯ, ಕಲ್ಲು ಮುಳ್ಳುಗಳನ್ನು ದಾಟಿ ಸಾಧನೆ ಮಾಡಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »