TOP STORIES:

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್


ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲʼ ಎಂದರು.

ಎರಡು ವರ್ಷಗಳ ಅನುಭವದಿಂದ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್‌ ಹರಡುವುದನ್ನು ಲಾಕ್‌ಡೌನ್‌ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್‌ ನಿಯಂತ್ರಣ ಸಾಧ್ಯ ಎಂದು ಹೇಳಿದರು.

ʼಓಮೈಕ್ರಾನ್‌ ತಳಿಯ ಕೊರೊನಾ ವೈರಾಣುವಿನ ಸೋಂಕು ಹರಡದಂತೆ ತಡೆಯುವುದು ಅಸಾಧ್ಯ. ಸಹಜವಾಗಿಯೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಆದರೆ, ಯಾವುದೇ ತೊಂದರೆ ಆಗುವುದಿಲ್ಲ. ಜನರು ಹೆಚ್ಚು ಮುನ್ನೆಚ್ಚರಿಕೆಯಿಂದ ಇರಬೇಕುʼ ಎಂದು ಸುಧಾಕರ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇ 3.95 ತಲುಪಿದೆ. ಈ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ. ಕೋವಿಡ್‌ ನಿಯಂತ್ರಣ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್‌ನಿಂದ ರಕ್ಷಣೆ ಸಾಧ್ಯ. ಲಸಿಕೆ ಪಡೆದವರಲ್ಲಿ ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಮತ್ತು ಸಾವಿನಿಂದಲೂ ಪಾರಾಗಬಹುದು. ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.

ಇಂದು ಸಭೆ: ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಚರ್ಚಿಸಲು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯಮಟ್ಟದ ಕೋವಿಡ್‌ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »