TOP STORIES:

‘ರಾಜ್ ಸೌಂಡ್ಸ್ & ಲೈಟ್ಸ್’ ತುಳು ಚಿತ್ರಕ್ಕೆ ಸೌದಿ ಅರೇಬಿಯಾ ದಲ್ಲಿ ಉತ್ತಮ ಪ್ರತಿಕ್ರಿಯೆ


 

ಕರಾವಳಿಯ ಸಿನಿ ಲೋಕದಲ್ಲಿ ಬೆಳಕು ಪಸರಿಸುವ ಮತ್ತು ಸದ್ದು ಮಾಡುತ್ತಿರುವ ತುಳು ಚಿತ್ರ ‘ರಾಜ್ ಸೌಂಡ್ಸ್ & ಲೈಟ್ಸ್’ ಎಲ್ಲಾ ಗಡಿಗಳನ್ನು ದಾಟಿ 19 ದೇಶಗಳಲ್ಲಿ ಖ್ಯಾತಿ ಗಳಿಸಿ.

ಸೌದಿ ಅರೇಬಿಯಾ ದಲ್ಲಿ ಪ್ರಥಮ ಭಾರಿಗೆ ತುಳು ಚಿತ್ರ ಮಂಗಳೂರು ಅಸೋಸಿಯೇಷನ್ ಆಫ್ ಸೌದಿ ಅರೇಬಿಯಾ ದ ಅಧ್ಯಕ್ಷರು ಸತೀಶ್ ಕುಮಾರ್ ಬಜಾಲ್ ಹಾಗು ತಂಡದ ಪರವಾಗಿ ಪ್ರದರ್ಶನಗೊಂಡಿತು.

ಸೌದಿ ಅರೇಬಿಯಾ ಮೊದಲ ತುಳು ಚಲನಚಿತ್ರ ಇದಾಗಿದ್ದು, ಮೊದಲ ಪ್ರೀಮಿಯರ್ ಶೋನ ಎಲ್ಲಾ ಟಿಕೆಟ್‌ಗಳು ಸಂಪೂರ್ಣವಾಗಿ ಬುಕ್ ಆಗಿದ್ದು, ಪ್ರೀಮಿಯರ್ ಶೋಗಳಿಗೆ ಯಾವುದೇ ಟಿಕೆಟ್‌ಗಳು ಲಭ್ಯವಿಲ್ಲದಿದ್ದರೂ ತುಳುವರು ಅಸಂಖ್ಯಾತ ಕರೆಗಳೊಂದಿಗೆ ಟಿಕೆಟ್‌ಗಳನ್ನು ಪಡೆದುಕೊಳ್ಳಲು ಹಂಬಲಿಸುತ್ತಿದ್ದಾರೆ. ಆದರೆ ಸಿನಿಮಾದ ಹೆಚ್ಚಿನ ಪ್ರದರ್ಶನಗಳನ್ನು ಏರ್ಪಡಿಸುವ ಮೂಲಕ ಸತೀಶ್ ಕುಮಾರ್ ಬಜಾಲ್ ” ಮುಂದಿನ ದಿನಗಳಲ್ಲಿ ಸೌದಿ ಅರೇಬಿಯಾ ದ ಎಲ್ಲಾ ಸಿನಿಮಾ ಮಂದಿರದಲ್ಲಿ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ, ತುಳು ಚಿತ್ರ ಪ್ರೇಮಿ ಗಳು ನಿರಾಶರಾಗಬಾರದು, ಎಂದು ಪ್ರೀಮಿಯರ್ ಶೋ ನ ಉದ್ಘಾಟನೆಯ ಸಂದರ್ಭದಲ್ಲಿ ತಿಳಿಸಿದ್ದಾರೆ”.

ತುಳು ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ‘ರಾಜ್ ಸೌಂಡ್ಸ್ & ಲೈಟ್ಸ್’ ಸೌದಿ ಅರೇಬಿಯಾ ದಲ್ಲಿ ತೆರೆಕಂಡಿದೆ ಹೆಗ್ಗಳಿಕೆಯ ಪಾತ್ರ ಗಳಿಸಿದೆ.

‘ರಾಜ್ ಸೌಂಡ್ಸ್ & ಲೈಟ್ಸ್’, ಕನ್ನಡ ಚಲನಚಿತ್ರ ‘ಒಂದು ಮೊಟ್ಟೆಯ ಕಥೆ’ ನಿರ್ಮಾಪಕರದ್ದು, ರಾಹುಲ್ ಅಮೀನ್ ಅವರ ನಿರ್ದೇಶನದ ತುಳು ಚಿತ್ರ, ನಿರ್ದೇಶಕ ರಾಹುಲ್ ಅಮೀನ್ ಕಥೆಯನ್ನು ವಿಜೆ ವಿನೀತ್ ಜೊತೆಗೆ ಬರೆದಿದ್ದಾರೆ, ಚಿತ್ರವನ್ನು ವೈಭವ್ ಫ್ಲಿಕ್ಸ್ ಪ್ರಸ್ತುತಪಡಿಸುತ್ತಿದ್ದಾರೆ. ಮಂಗೊ ಪಿಕಲ್ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ. ಸತೀಶ್ ಕುಮಾರ್ ಬಜಾಲ್ ನೇತೃತ್ವದಲ್ಲಿ ಅರೇಬಿಯಾನ್ ಪಿಕ್ಚರ್ ಮೂಲಕ ಇದನ್ನು ಸೌದಿ ಅರೇಬಿಯಾದಲ್ಲಿ ವಿತರಿಸಲಾಗುತ್ತಿದೆ.

ಪ್ರಮುಖ ಕಲಾವಿದರಾದ ವಿನೀತ್ ಕುಮಾರ್ (ನಾಯಕ), ಯಶ ಶಿವಕುಮಾರ್ (ನಾಯಕಿ), ಅರವಿಂದ ಬೋಳಾರ್, ಕರಿಷ್ಮಾ ಅಮೀನ್, ಭೋಜರಾಜ್ ವಾಮಂಜೂರು, ಮತ್ತು ನವೀನ್ ಡಿ ಪಡೀಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ರೂಪ ವರ್ಕಾಡಿ, ಮರ್ವಿನ್ ಶಿರ್ವ, ನಮಿತ್ ಕುಳೂರು, ರವಿ ರಾಮುಜ ಜೊತೆಗೆ. ಇತರ ಪ್ರಸಿದ್ಧ ನಟರೊಂದಿಗೆ ಸೌದಿ ಅರೇಬಿಯಾದಲ್ಲಿ ಪ್ರದರ್ಶಗೊಂಡಿತು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »