TOP STORIES:

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?


ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

 

ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ.

ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡಬೇಕು. ನಿರ್ದಿಷ್ಟ ಸಮಯದಲ್ಲಿ ಉತ್ತಮ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಉತ್ತಮ ಗಾಢವಾದ ನಿದ್ರೆಗೆ ಮೆಲೆಟೊನಿನ್​ ಹಾರ್ಮೋನ್​ ಅಗತ್ಯ. ಇದು ಮಲಗುವ ವಾತಾವರಣ ಅಥವಾ ಕೋಣೆ ಸಂಪೂರ್ಣ ಕತ್ತಲಾಗಿದ್ದಾರೆ ಇದು ಉತ್ತೇಜನಗೊಳ್ಳುತ್ತದೆ. ಎಂದರೆ, ಮಲಗುವಾಗ ಯಾವುದೇ ಟಿವಿ, ಕಂಪ್ಯೂಟರ್​ ಮತ್ತು ಫೋನ್​ ಸ್ಕ್ರೀನ್​ ಇಲ್ಲದೇ ಮಲಗುವುದರಿಂದ ಆರಾಮದಾಯಕ ಉತ್ತಮ ನಿದ್ರೆಯನ್ನು ನೀವು ಮಾಡಬಹುದು.

ಕೊಠಡಿಯ ತಾಪಮಾನ ಕೂಡ ಮುಖ್ಯ: ಅನೇಕರು ರಾತ್ರಿ ತಾಪಮಾನದ ಬಗ್ಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಆದರೆ, ನಿದ್ರೆ ವಿಚಾರದಲ್ಲಿ ಇದು ಅವಶ್ಯಕತೆ ಹೊಂದಿದೆ. ತೀರ ಚಳಿ ಅಥವಾ ತೀರ ಬಿಸಿಲಿನ ವಾತಾವರಣ ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ. ಜೊತೆಗೆ ಮಲಗುವ ಕೋಣೆಯಲ್ಲಿ ಯಾವುದೆ ಕಿರಿಕಿರಿ ಮಾಡುವ ವಾಸನೆ ಅಂಶ ಇಲ್ಲದೇ ಇರುವಂತೆ ನೋಡಿಕೊಳ್ಳುವುದು ಅವಶ್ಯ. ಕಾರ್ಪೂರ ಅಥವಾ ಸಾಂಬ್ರಾಣಿ, ಮಲ್ಲಿಗೆ ಸುಂಗಂಧಗಳು ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ.

ಶುಚಿತ್ವ: ಮಲಗುವ ವಾತಾವರಣ ಮತ್ತು ಹಾಸಿಗೆ ಶುಚಿಯಾಗಿರುವಂತೆ ನೋಡಿಕೊಳ್ಳಿ. ಎಂಬ್ರೋಯ್ಡರಿ ಧಿರಿಸಿ ಅಥವಾ ಬೆಡ್​​ಶೀಟ್​ಗಳು ನಿಮಗೆ ಕಿರಿಕಿರಿ ಮಾಡದಂತೆ ಇರಬೇಕು. ಜೊತೆಗೆ ಹೊದಿಕೆ ಮತ್ತು ದಿಂಬುಗಳು ಕೂಡ ಸಮಯದಕ್ಕೆ ಸರಿಯಾಗಿ ಸ್ವಚ್ಛ ಮಾಡುವತ್ತ ಗಮನಹರಿಸಿ. ರಾತ್ರಿ ಮಲಗುವಾಗ ಅದಷ್ಟು ಸಡಿಲವಾದ ಕಾಟನ್​ ಧಿರಿಸಿನಲ್ಲಿ ಮಲಗುವುದು ಉತ್ತಮ.

ಈ ಚಟದಿಂದ ದೂರ ಇರಿ: ಹಗಲಿನ ಹೊತ್ತಿನಲ್ಲಿ ಹೆಚ್ಚು ನಿದ್ದೆ, ಅಥವಾ ಮಲಗುವ ಮುನ್ನ ಹೆಚ್ಚಿನ ವ್ಯಾಯಾಮ ಅಥವಾ ನೀರು ಕಡಿಯುವುದು ಕೂಡ ನಿದ್ರಾಹೀನತೆಗೆ ಕಾರಣವಾಗಲಿದೆ. ಅನೇಕ ಜನರು ಮಲಗುವ ಮುನ್ನ ಕೆಲವು ಸಮಯ ನೀರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಇದರಿಂದ ಪದೆ ಪದೇ ಎಚ್ಚರವಾಗುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ನಡೆಸುತ್ತಾರೆ. ಆದರೆ ಇದು ಕೂಡ ತಪ್ಪು ಅಭ್ಯಾಸ ಇದರಿಂದ ದೇಹ ನಿರ್ಜಲೀಕರಣಗೊಂಡು, ಎಚ್ಚರಗೊಳ್ಳುವಂತೆ ಮಾಡುತ್ತದೆ.

ಆರು ಗಂಟೆಗಿಂತ ಕಡಿಮೆ ನಿದ್ದೆ ಮಾಡುವ , 9ಗಂಟೆಗಿಂತಲೂ ಹೆಚ್ಚಿನ ಅವಧಿ ನಿದ್ದೆ ಮಾಡುವುದು ಅನೇಕ ಸಮಸ್ಯೆಗಳಿಗೆ ನಿಮ್ಮನ್ನು ತುತ್ತು ಮಾಡುವ ಸಾಧ್ಯತೆ ಇದೆ. ಆರು ಗಂಟೆಗಿಂತ ಕಡಿಮೆ ನಿದ್ದೆ ಅಥವಾ ನಿದ್ರಾಹೀನತೆ ಹೊಂದಿರುವವರು ಅನೇಕ ಗಂಭೀರ ಆರೋಗ್ಯಕರ ಸಮಸ್ಯೆ ಎದುರಿಸುವಂತೆ ಆಗುತ್ತದೆ. ಈ ಹಿನ್ನೆಲೆ ಸರಿಯಾದ ನಿದ್ರೆ ಸಮಯವನ್ನು ಪಾಲಿಸುವುದು ಅಗತ್ಯವಾಗಿದೆ. ಇದು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಡೆಂಘೀ ರೋಗ ನಿಯಂತ್ರಣಕ್ಕೆ ಪಪ್ಪಾಯ ಎಲೆ ಸಹಾಯಕವಾಗುತ್ತದೆಯಾ?


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »