TOP STORIES:

ರೂಬಿಕ್ಸ್ ಕ್ಯೂಬ್ ಮಾಯಾಗಾರ – ಮಹೇಶ್ ಮಲ್ಪೆ


ರೂಬಿಕ್ಸ್ ಕ್ಯೂಬ್ ಮಾಯಾಗಾರಮಹೇಶ್ ಮಲ್ಪೆ

ತನ್ನೊಳಗೆ ಹುದುಗಿರುವ ಕಲೆಯನ್ನು ಗುರುತಿಸಿ, ದೊರೆತ ಅವಕಾಶಗಳನ್ನು, ವೇದಿಕೆಗಳನ್ನು ಉಪಯೋಗಿಸಿಕೊಂಡು ಸಾಧನೆಯಹಾದಿಯಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆಯ ಯುವ ಕಲಾವಿದ ಮಹೇಶ್ ಮಲ್ಪೆ.

    ಉಡುಪಿ ಜಿಲ್ಲೆಯ ಮಲ್ಪೆಯವರಾದ ಇವರು ಶೇಖರ್ ಪೂಜಾರಿ ಹಾಗು ಶ್ರೀಮತಿ ಮೀನಾಕ್ಷಿ ದಂಪತಿಗಳ ಮಗ. ಪ್ರಸ್ತುತಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಡಿಪಾರ್ಟ್ಮೆಂಟ್ನಲ್ಲಿ ಮಾರ್ಕೆಟಿಂಗ್ಹಾಗು ಫೀಲ್ಡ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಮಲ್ಪೆಯಲ್ಲಿ ಪಡೆದರು. ಶ್ಯಾಮಿಲಿ ಕಾಲೇಜಿನಲ್ಲಿ ಪದವಿ ಪೂರ್ವಶಿಕ್ಷಣ ಹಾಗು ಉಪೇಂದ್ರ ಪೈ ಮೆಮೊರಿಯಲ್  ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು.

ನಟನೆಯಲ್ಲಿ ಅಪಾರ ಆಸಕ್ತಿಯುಳ್ಳ ಇವರು ರಂಗಭೂಮಿ (ರಿ.) ಉಡುಪಿ ಕಿರ್ದಾರ್ ಥಿಯೆಟರ್ ಗ್ರೂಪ್, ವಿ ಆರ್ ಫ್ರೆಂಡ್ಸ್ ಸಾಸ್ತಾನತಂಡದ ಅನೇಕ ನಾಟಕಗಳಲ್ಲಿ ಭಾಗವಹಿಸಿದ್ದಾರೆ. ನಾಟಕ ನಿರ್ದೇಶಕರು ಆಗಿದ್ದು ನಾಟಕ ತರಬೇತಿಯನ್ನು ನೀಡುತ್ತಿದ್ದಾರೆ. ರಾಜ್ಯಹಾಗು ರಾಷ್ಟ್ರ ಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿದ್ದಾರೆ. ಕವನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದ ಬಹುಮಾನ ಪಡೆದಿದ್ದಾರೆ.

ಎಲ್ಲದಕ್ಕೂ ಒಂದು ಆರಂಭ ಇದ್ದೇ ಇರುತ್ತದೆ ಎಂಬಂತೆ ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು  ಪೆನ್, ಪೆನ್ಸಿಲ್ಬಳಕೆಯಿಲ್ಲದೆ ಉಪ್ಪು ಮತ್ತು ಬಣ್ಣಗಳನ್ನು ಬಳಸಿ ಮಾಡಿದ ಭಾರತ ನಕ್ಷೆಗೆ ದೊರೆತ ಪ್ರೋತ್ಸಾಹ ಮುಂದೆ ಇವರು ಇನ್ನಿತರ ಬೇರೆ ಬೇರೆವಸ್ತುಗಳನ್ನು ಉಪಯೋಗಿಸಿಕೊಂಡು ಚಿತ್ರ ನಿರ್ಮಾಣ ಮಾಡುವ  ಯೋಜನೆಗೆ ದಾರಿಯಾಯಿತು ಎನ್ನುತ್ತಾರೆ. ಪದವಿ ಪೂರ್ವಶಿಕ್ಷಣದ ಅವಧಿಯಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸಲು ಮೊದಲು ಪ್ರಯತ್ನಿಸಲು ಆರಂಭಿಸಿದ್ದು ಈಗ ಕೇವಲ 35 ರಿಂದ 45 ಸೆಕೆಂಡ್ಗಳಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುತ್ತಾರೆ. ಫೋಟೋ ಶಾಪ್ ಕೆಲಸ ಮಾಡುತ್ತಿರುವಾಗ ಫೋಟೋದಲ್ಲಿರುವ ಸಣ್ಣ ಸಣ್ಣ ಫಿಕ್ಸೆಲ್ಗಳನ್ನು ಗಮನಿಸಿದ ಇವರು ಫಿಕ್ಸೆಲ್  ಆರ್ಟ್ ನಲ್ಲಿ ವಿಶೇಷ ಆಸಕ್ತಿ ಬೆಳೆಸಿದರು. ಈಗ ಫಿಕ್ಸೆಲ್ ಕಾರ್ನರ್ ಸಂಸ್ಥೆಯರೂವಾರಿಯಾಗಿದ್ದಾರೆ. ತನ್ನ ಕಲ್ಪನೆಯೊಳಗಿನ ಚಿತ್ರಗಳಿಗೆ ರೂಬಿಕ್ಸ್ , ಪುಸ್ತಕ, ಗ್ರಾಫ್ ಶೀಟ್ ಹೀಗೆ ಇನ್ನಿತರ ವಸ್ತುಗಳನ್ನು ಬಳಸಿಚಿತ್ರಿಸಿ ಅದಕ್ಕೆ ಕಲಾತ್ಮಕವಾಗಿ ಜೀವ ನೀಡುವ ವಿಶೇಷ ಕಲೆ ಇವರದ್ದಾಗಿದೆ. ಕೋಟಿ ಚೆನ್ನಯ ಹಾಗು ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಪ್ರತಿರೂಪವನ್ನು  1,500 ರೂಬಿಕ್ಸ್ ಕ್ಯೂಬ್ ನಿಂದ ರಚಿಸಿ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. ನೆಸ್ಟ್ಲೆ ಕಂಪೆನಿಆಯೋಜಿಸಿದ್ದ ರಾಷ್ಟ್ರಮಟ್ಟದ 2020 ಮಂಚ್ ಸ್ಟಾರ್ ಪ್ರತಿಭಾ ಪ್ರದರ್ಶನದಲ್ಲಿ 1,300 ರೂಬಿಕ್ಸ್ ಕ್ಯೂಬ್ ನಲ್ಲಿ ಕಲಾಕೃತಿಯೊಂದನ್ನುರಚಿಸಿದರು. ವಿಶಿಷ್ಟ ಸಾಧನೆಗೆ ಪ್ರಥಮ ಬಹುಮಾನದೊಂದಿಗೆ 5ಲಕ್ಷ ಬಹುಮಾನವನ್ನು ಗೆದ್ದಿರುವ ಹೆಗ್ಗಳಿಕೆ ಇವರದ್ದಾಗಿದೆ. ಮಾರ್ಚ್ 2021ರಂದು ನಡೆದ ರೆಡ್ ಎಫ್ ಎಮ್ ಹಾಗು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನಡೆಸಿದ ಟ್ಯಾಲೆಂಟ್ ಅನ್ ಲಾಕ್ಡ್ಆನ್ಲೈನ್ ಸ್ಪರ್ಧೆಯಲ್ಲಿ ಭಾರತದಾದ್ಯಂತ 56,000 ಸ್ಪರ್ಧಿಗಳು ಭಾಗವಹಿಸಿದ್ದು ಇದರಲ್ಲಿ ಮಹೇಶ್ 1,300 ಕ್ಕೂ ಹೆಚ್ಚು ರೂಬಿಕ್ಸ್ಕ್ಯೂಬ್ ನಲ್ಲಿ ಇರ್ಫಾನ್ ಖಾನ್ ರವರ ಭಾವಚಿತ್ರ ರಚಿಸಿ ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ತನ್ನ ವಿಶೇಷ ಪ್ರತಿಭೆಯನ್ನು ಕೇವಲ ತನಗೆ ಮಾತ್ರ ಸೀಮಿತಗೊಳಿಸದೆ ಅನೇಕ ಸಂಸ್ಥೆಗಳಲ್ಲಿ, ಶಾಲೆಗಳಲ್ಲಿ ರೂಬಿಕ್ಸ್ ಕ್ಯೂಬ್ತರಬೇತಿಯನ್ನು, ಕಾರ್ಯಗಾರವನ್ನು ಮಾಡುತ್ತಿದ್ದಾರೆ. ಇಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುವ ಜೊತೆಗೆ ಜೀವನ ಪಾಠವನ್ನುಹೇಳುವುದು ಇವರ ವಿಶೇಷತೆಯಾಗಿದೆ.

ನಟನೆ, ಫೋಟೋಗ್ರಫಿ, ಹಾಡುಗಾರಿಕೆ, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ರೂಬಿಕ್ಸ್ ಕ್ಯೂಬ್ ಮತ್ತು ಮೊಸೈಕ್ ಆರ್ಟ್ಎರಡು ಕಲೆಯನ್ನು ಸೇರಿಸಿ ಗಿನ್ನಿಸ್ ರೆಕಾರ್ಡ್ ಮಾಡುವ ಕನಸನ್ನು ಹೊಂದಿದ್ದಾರೆ. ಸತತ ಪರಿಶ್ರಮ, ಪ್ರಯತ್ನದೊಂದಿಗಿನ ಇವರ ಉತ್ಸಾಹಿ ಹೆಜ್ಜೆಗಳು ಯಶಸ್ಸನ್ನು ಪಡೆಯಲಿ.

✍️ನಳಿನಿ ಎಸ್ ಸುವರ್ಣ

ಆಳ್ವಾಸ್ ಕಾಲೇಜು ಮೂಡುಬಿದಿರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »