TOP STORIES:

ರೂಬಿಕ್ಸ್ ಕ್ಯೂಬ್ ಮಾಯಾಗಾರ – ಮಹೇಶ್ ಮಲ್ಪೆ


ರೂಬಿಕ್ಸ್ ಕ್ಯೂಬ್ ಮಾಯಾಗಾರಮಹೇಶ್ ಮಲ್ಪೆ

ತನ್ನೊಳಗೆ ಹುದುಗಿರುವ ಕಲೆಯನ್ನು ಗುರುತಿಸಿ, ದೊರೆತ ಅವಕಾಶಗಳನ್ನು, ವೇದಿಕೆಗಳನ್ನು ಉಪಯೋಗಿಸಿಕೊಂಡು ಸಾಧನೆಯಹಾದಿಯಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆಯ ಯುವ ಕಲಾವಿದ ಮಹೇಶ್ ಮಲ್ಪೆ.

    ಉಡುಪಿ ಜಿಲ್ಲೆಯ ಮಲ್ಪೆಯವರಾದ ಇವರು ಶೇಖರ್ ಪೂಜಾರಿ ಹಾಗು ಶ್ರೀಮತಿ ಮೀನಾಕ್ಷಿ ದಂಪತಿಗಳ ಮಗ. ಪ್ರಸ್ತುತಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಡಿಪಾರ್ಟ್ಮೆಂಟ್ನಲ್ಲಿ ಮಾರ್ಕೆಟಿಂಗ್ಹಾಗು ಫೀಲ್ಡ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಮಲ್ಪೆಯಲ್ಲಿ ಪಡೆದರು. ಶ್ಯಾಮಿಲಿ ಕಾಲೇಜಿನಲ್ಲಿ ಪದವಿ ಪೂರ್ವಶಿಕ್ಷಣ ಹಾಗು ಉಪೇಂದ್ರ ಪೈ ಮೆಮೊರಿಯಲ್  ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು.

ನಟನೆಯಲ್ಲಿ ಅಪಾರ ಆಸಕ್ತಿಯುಳ್ಳ ಇವರು ರಂಗಭೂಮಿ (ರಿ.) ಉಡುಪಿ ಕಿರ್ದಾರ್ ಥಿಯೆಟರ್ ಗ್ರೂಪ್, ವಿ ಆರ್ ಫ್ರೆಂಡ್ಸ್ ಸಾಸ್ತಾನತಂಡದ ಅನೇಕ ನಾಟಕಗಳಲ್ಲಿ ಭಾಗವಹಿಸಿದ್ದಾರೆ. ನಾಟಕ ನಿರ್ದೇಶಕರು ಆಗಿದ್ದು ನಾಟಕ ತರಬೇತಿಯನ್ನು ನೀಡುತ್ತಿದ್ದಾರೆ. ರಾಜ್ಯಹಾಗು ರಾಷ್ಟ್ರ ಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿದ್ದಾರೆ. ಕವನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದ ಬಹುಮಾನ ಪಡೆದಿದ್ದಾರೆ.

ಎಲ್ಲದಕ್ಕೂ ಒಂದು ಆರಂಭ ಇದ್ದೇ ಇರುತ್ತದೆ ಎಂಬಂತೆ ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು  ಪೆನ್, ಪೆನ್ಸಿಲ್ಬಳಕೆಯಿಲ್ಲದೆ ಉಪ್ಪು ಮತ್ತು ಬಣ್ಣಗಳನ್ನು ಬಳಸಿ ಮಾಡಿದ ಭಾರತ ನಕ್ಷೆಗೆ ದೊರೆತ ಪ್ರೋತ್ಸಾಹ ಮುಂದೆ ಇವರು ಇನ್ನಿತರ ಬೇರೆ ಬೇರೆವಸ್ತುಗಳನ್ನು ಉಪಯೋಗಿಸಿಕೊಂಡು ಚಿತ್ರ ನಿರ್ಮಾಣ ಮಾಡುವ  ಯೋಜನೆಗೆ ದಾರಿಯಾಯಿತು ಎನ್ನುತ್ತಾರೆ. ಪದವಿ ಪೂರ್ವಶಿಕ್ಷಣದ ಅವಧಿಯಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸಲು ಮೊದಲು ಪ್ರಯತ್ನಿಸಲು ಆರಂಭಿಸಿದ್ದು ಈಗ ಕೇವಲ 35 ರಿಂದ 45 ಸೆಕೆಂಡ್ಗಳಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುತ್ತಾರೆ. ಫೋಟೋ ಶಾಪ್ ಕೆಲಸ ಮಾಡುತ್ತಿರುವಾಗ ಫೋಟೋದಲ್ಲಿರುವ ಸಣ್ಣ ಸಣ್ಣ ಫಿಕ್ಸೆಲ್ಗಳನ್ನು ಗಮನಿಸಿದ ಇವರು ಫಿಕ್ಸೆಲ್  ಆರ್ಟ್ ನಲ್ಲಿ ವಿಶೇಷ ಆಸಕ್ತಿ ಬೆಳೆಸಿದರು. ಈಗ ಫಿಕ್ಸೆಲ್ ಕಾರ್ನರ್ ಸಂಸ್ಥೆಯರೂವಾರಿಯಾಗಿದ್ದಾರೆ. ತನ್ನ ಕಲ್ಪನೆಯೊಳಗಿನ ಚಿತ್ರಗಳಿಗೆ ರೂಬಿಕ್ಸ್ , ಪುಸ್ತಕ, ಗ್ರಾಫ್ ಶೀಟ್ ಹೀಗೆ ಇನ್ನಿತರ ವಸ್ತುಗಳನ್ನು ಬಳಸಿಚಿತ್ರಿಸಿ ಅದಕ್ಕೆ ಕಲಾತ್ಮಕವಾಗಿ ಜೀವ ನೀಡುವ ವಿಶೇಷ ಕಲೆ ಇವರದ್ದಾಗಿದೆ. ಕೋಟಿ ಚೆನ್ನಯ ಹಾಗು ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಪ್ರತಿರೂಪವನ್ನು  1,500 ರೂಬಿಕ್ಸ್ ಕ್ಯೂಬ್ ನಿಂದ ರಚಿಸಿ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. ನೆಸ್ಟ್ಲೆ ಕಂಪೆನಿಆಯೋಜಿಸಿದ್ದ ರಾಷ್ಟ್ರಮಟ್ಟದ 2020 ಮಂಚ್ ಸ್ಟಾರ್ ಪ್ರತಿಭಾ ಪ್ರದರ್ಶನದಲ್ಲಿ 1,300 ರೂಬಿಕ್ಸ್ ಕ್ಯೂಬ್ ನಲ್ಲಿ ಕಲಾಕೃತಿಯೊಂದನ್ನುರಚಿಸಿದರು. ವಿಶಿಷ್ಟ ಸಾಧನೆಗೆ ಪ್ರಥಮ ಬಹುಮಾನದೊಂದಿಗೆ 5ಲಕ್ಷ ಬಹುಮಾನವನ್ನು ಗೆದ್ದಿರುವ ಹೆಗ್ಗಳಿಕೆ ಇವರದ್ದಾಗಿದೆ. ಮಾರ್ಚ್ 2021ರಂದು ನಡೆದ ರೆಡ್ ಎಫ್ ಎಮ್ ಹಾಗು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನಡೆಸಿದ ಟ್ಯಾಲೆಂಟ್ ಅನ್ ಲಾಕ್ಡ್ಆನ್ಲೈನ್ ಸ್ಪರ್ಧೆಯಲ್ಲಿ ಭಾರತದಾದ್ಯಂತ 56,000 ಸ್ಪರ್ಧಿಗಳು ಭಾಗವಹಿಸಿದ್ದು ಇದರಲ್ಲಿ ಮಹೇಶ್ 1,300 ಕ್ಕೂ ಹೆಚ್ಚು ರೂಬಿಕ್ಸ್ಕ್ಯೂಬ್ ನಲ್ಲಿ ಇರ್ಫಾನ್ ಖಾನ್ ರವರ ಭಾವಚಿತ್ರ ರಚಿಸಿ ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ತನ್ನ ವಿಶೇಷ ಪ್ರತಿಭೆಯನ್ನು ಕೇವಲ ತನಗೆ ಮಾತ್ರ ಸೀಮಿತಗೊಳಿಸದೆ ಅನೇಕ ಸಂಸ್ಥೆಗಳಲ್ಲಿ, ಶಾಲೆಗಳಲ್ಲಿ ರೂಬಿಕ್ಸ್ ಕ್ಯೂಬ್ತರಬೇತಿಯನ್ನು, ಕಾರ್ಯಗಾರವನ್ನು ಮಾಡುತ್ತಿದ್ದಾರೆ. ಇಲ್ಲಿ ರೂಬಿಕ್ಸ್ ಕ್ಯೂಬ್ ಸರಿಪಡಿಸುವ ಜೊತೆಗೆ ಜೀವನ ಪಾಠವನ್ನುಹೇಳುವುದು ಇವರ ವಿಶೇಷತೆಯಾಗಿದೆ.

ನಟನೆ, ಫೋಟೋಗ್ರಫಿ, ಹಾಡುಗಾರಿಕೆ, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ರೂಬಿಕ್ಸ್ ಕ್ಯೂಬ್ ಮತ್ತು ಮೊಸೈಕ್ ಆರ್ಟ್ಎರಡು ಕಲೆಯನ್ನು ಸೇರಿಸಿ ಗಿನ್ನಿಸ್ ರೆಕಾರ್ಡ್ ಮಾಡುವ ಕನಸನ್ನು ಹೊಂದಿದ್ದಾರೆ. ಸತತ ಪರಿಶ್ರಮ, ಪ್ರಯತ್ನದೊಂದಿಗಿನ ಇವರ ಉತ್ಸಾಹಿ ಹೆಜ್ಜೆಗಳು ಯಶಸ್ಸನ್ನು ಪಡೆಯಲಿ.

✍️ನಳಿನಿ ಎಸ್ ಸುವರ್ಣ

ಆಳ್ವಾಸ್ ಕಾಲೇಜು ಮೂಡುಬಿದಿರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »