TOP STORIES:

ಲೇಡಿಹಿಲ್ ಗೆ ಶ್ರೀ ನಾರಾಯಣ ಗುರು ವೃತ್ತ ಎಂದು ಪುನರ್ ನಾಮಕರಣ ಬೇಕೆ..? ಕಾರಣಗಳು ಇಲ್ಲಿವೆ


Credits: Billavaswarriors.com – Special article

ಕೇರಳದ ಚೆಂಬಝತ್ತಿ ಎಂಬಲ್ಲಿ ಜನಿಸಿದ ಬ್ರಹ್ಮಶ್ರಿ ಶ್ರೀ ನಾರಾಯಣ ಗುರುಗಳು ತಮ್ಮ ಸಮಾನ ಸಮಾಜದ ತತ್ವಕ್ಕಾಗಿ ಇಂದು ಇಡೀ ವಿಶ್ವಕ್ಕೆ ಗುರುವಾಗಿ ನಿಂತಿದ್ದಾರೆ. ಓರ್ವ ಈಳವ(ಬಿರುವ) ಸಮುದಾಯದ ಸದಸ್ಯನಾಗಿದ್ದು, ಪಕ್ವತೆ ಪಡೆದಾಗ ಸಮಾಜಿಕ ಅನ್ಯಾಯದ ವಿರುದ್ಧ ಹೋರಾಡಿ ಸಮಾಜಿಕ ನವೋತ್ಥಾನಕ್ಕೆ ಕಾರಣೀಕರ್ತರಾದ ಶ್ರೀ ನಾರಾಯಣ ಗುರುಗಳು ಜಾತಿ-ಧರ್ಮಗಳ ಬೇಧವಿಲ್ಲದೆ ಎಲ್ಲರಿಂದಲೂ ಅರಾಧಿಸಲ್ಪಟ್ಟವರಾಗಿದ್ದಾರೆ. ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಇಂತಹ ಅವತಾರ ಪುರುಷನ ಹೆಸರು ನಾಮಕರಣ ಮಾಡಿದರೆ ಅದು ವಿದ್ಯಾವಂತರ ನಗರವಾದ ಮಂಗಳೂರಿಗೆ ಹೊಸ ಶೋಭೆ ನೀಡಲಿದೆ ಎಂದರೆ ತಪ್ಪಾಗಲಾರದು.ಲೇಡಿಹಿಲ್ ವೃತ್ತದಿಂದ ಶ್ರೀ ನಾರಾಯಣ ಗುರುಗಳ ಪ್ರತಿಶ್ಠಾಪನೆಯಿರುವ. ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿರುವ, ಬಿಲ್ಲವರ ಪ್ರಮುಖ ಆರಾಧನ ಕೇಂದ್ರವಾದ ಕುದ್ರೋಳಿ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆ ಆರಂಭವಾಗುತ್ತೆ. ಸಾವಿರಾರು ಭಕ್ತರು ದಿನಂಪ್ರತಿ ಇದೇ ರಸ್ತೆಯನ್ನು ಬಳಸಿಕೊಂಡು ದೇವಸ್ಥಾನಕ್ಕೆ ಬರುತ್ತಾರೆ. ಲೇಡಿಹಿಲ್ ಹೆಸರು ಮಂಗಳೂರಿನ ನಿವಾಸಿಗಳಿಗೆ ಪರಿಚಿತವಾಗಿರಬಹುದು ಆದರೆ ಹೊರಜಿಲ್ಲೆಗಳಿಂದ , ನೆರೆಯ ರಾಜ್ಯಗಳಿಂದ ಬರುವ ಭಕ್ತರಿಗೆ ಈ ವೃತ್ತ ಕುದ್ರೋಳಿ ದೇವಸ್ಥಾನಕ್ಕೆ ಹೋಗುವ ವೃತ್ತ ಎಂದೇ ಪರಿಚಿತವಾಗಿದೆ. ನಗರದ ಮಧ್ಯದಿಂದ ದೇವಸ್ಥಾನಕ್ಕೆ ಧ್ವಾರ ಹಾಗೂ ರಸ್ತೆಯಿದ್ದರೂ ಟ್ರಾಫಿಕ್ ಸಮಸ್ಯೆಯ ಬಹುದೊಡ್ಡ ಭಕ್ತಗಣ ಲೇಡಿಹಿಲ್ ವೃತ್ತದ ಮುಂದಿನ ರಸ್ತೆಯಿಂದಲೇ ಕುದ್ರೋಳಿಗೆ ತೆರೆಳುವ ವಾಡಿಕೆಯನ್ನು ಬೆಳೆಸಿಕೊಂಡಿದ್ದಾರೆ. ಅದಲ್ಲದೆ ಪಾಲಿಕೆ,ಜಿಲ್ಲೆ, ರಾಜ್ಯ ಆಡಳಿತಗಳು ಕುದ್ರೋಳಿ ದೇವಸ್ಥಾನದ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವುದು ಇದೇ ರಸ್ತೆಯನ್ನು ಗಮನದಲ್ಲಿಟ್ಟುಕೊಂಡಾಗಿದೆ. ಇಲ್ಲಿಯ ವರೆಗೂ ಯಾವೊಬ್ಬನೂ ಇದರ ಬಗ್ಗೆ ಆಕ್ಶೇಪವೆತ್ತಲಿಲ್ಲ. ಹೀಗಿರುವಾಗ ಇಷ್ಟೆಲ್ಲಾ ಮಹತ್ವವಿರುವ ರಸ್ತೆಯ ಆರಂಭದಲ್ಲಿರುವ ವೃತ್ತಕ್ಕೆ ಶ್ರೀ ನಾರಾಯಣ ಗುರುಗಳ ಹೆಸರು ಕೊಡುವಲ್ಲಿ ಯಾಕೆ ಹಿಂದೇಟು ಎಂಬ ಪ್ರಶ್ನೆ ಉದ್ಭವಿಸುತ್ತದೆ.

(Billavaswarriors.com – Special article)

ಕುದ್ರೋಳಿ ದೇವಸ್ಥಾನದ ಉದ್ಧಾರಕರಾದ ಹಾಗೂ ಜಿಲ್ಲೆಯ ಬಿಲ್ಲವರ ಹೆಮ್ಮೆಯಾದ ಶ್ರೀ ಜನಾರ್ಧನ ಪೂಜಾರಿಯವರು ಶ್ರೀ ನಾರಾಯಣ ಗುರುಗಳ ಅತೀ ದೊಡ್ಡ ಭಕ್ತರು. ಗುರುಗಳ ಹಾದಿಯಲ್ಲಿ ನಡೆದು ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದವರು. ಲೇಡಿಹಿಲ್ ವೃತ್ತಕ್ಕೆ ಗುರುಗಳ ಹೆಸರನ್ನಿಡಬೇಕೆಂಬ ಅವರ ಬಹಳ ಕಾಲದ ಕನಸಾಗಿತ್ತು. ಅಧಿಕಾರದಲ್ಲಿರುವಾಗ ಜನಾರ್ಧನ ಪೂಜಾರಿಯವರು ಧರ್ಮ-ಜಾತಿ ನೋಡದೆ ಎಲ್ಲರನ್ನೂ ಸಮಾನವಾಗಿ ನೋಡಿದವರು. ಇಂದು ನಾರಾಯಣ ಗುರು ವೃತ್ತ ಎಂಬ ನಾಮಕರಣ ಬೇಡ ಎಂದು ಸರಕಾರಿ ಕಛೇರಿಗಳಿಗೆ ಅಲೆಯುವವರು ಒಂದು ಕಾಲದಲ್ಲಿ ಜನಾರ್ಧನ ಪೂಜಾರಿಗಳ ಹಿಂದೆ ಜೈ ಹಾಕಿದವರು, ಬೇಕಾದ ಅನುದಾನ, ಸವಲತ್ತುಗಳನ್ನು ಪಡೆದುಕೊಂಡವರು. ಇಂದು ಮಾತ್ರ ಅವರಿಗೆ ಪೂಜಾರಿಯವರ ಕನಸು ನನಸು ಮಾಡಲು ಅಂಜಿಕೆ. ಇದು ಅನ್ನ ಕೊಟ್ಟ ಕೈಗಳಿಗೆ ದ್ರೋಹ ಬಗೆದಂತೆ.

ಮಂಗಳೂರಿನ ಲೇಡಿಹಿಲ್ ಪ್ರದೇಶದಲ್ಲಿ ಶ್ರೀ ನಾರಾಯಣ ಗುರು ವೃತ್ತವಿದ್ದರೆ ಯಾರಿಗೂ ಏನೂ ನಶ್ಟವಿಲ್ಲ. ವೃತ್ತದ ಸುತಮುತ್ತಲು ನಾಲ್ಕು ಶಾಳೆಗಳಿವೆ. ನಾರಾಯಣ ಗುರುಗಳ ನಾಮ ಜಪಿಸಿ ಅವರ ಹಾದಿಯಲ್ಲಿ ನಡೆಯುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಗುರು ವೃತ್ತ ಉತ್ತಮ ಹಾದಿಯಾಗಲಿದೆ. ಪಾಲಿಕೆ ಹಾಗೂ ಸರಕಾರ ಈ ಬಗ್ಗೆ ತುರ್ತು ಗಮನ ಹರಿಸಿ ಜನಾರ್ಧನ ಪೂಜಾರಿಯವರ ಕಸನು, ಲಕ್ಷಾಂತರ ಬಿಲ್ಲವರ ಮನದಾಸೆ ಹಾಗೂ ಕೋಟಿಗಟ್ಟಲೆ ಶ್ರೀ ನಾರಾಯಣ ಗುರುಗಳ ಅಭಿಮಾನಿಗಳ ಬಯಕೆ ಈಡೇರಿಸಬೇಕಾದು ಈಗಿನ ಮೊದಲ ಆಧ್ಯತೆ.

Credits: Billavaswarriors.com – Special article


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »