TOP STORIES:

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮಮಗುವಂತೆ ಪ್ರೀತಿಸಿ ಎಂದು ಹಿತನುಡಿ ಹೇಳಿದರು. ಅಲ್ಲದೇ ವೃದ್ಧರೊಂದಿಗೆ ಆಟೋಟಗಳನ್ನು ನಡೆಸಿ ನಕ್ಕು ನಲಿದು ಒಂದು ದಿನ ಆಶ್ರಮ ದಲ್ಲಿ ಕಳೆದರು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »