TOP STORIES:

FOLLOW US

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮಮಗುವಂತೆ ಪ್ರೀತಿಸಿ ಎಂದು ಹಿತನುಡಿ ಹೇಳಿದರು. ಅಲ್ಲದೇ ವೃದ್ಧರೊಂದಿಗೆ ಆಟೋಟಗಳನ್ನು ನಡೆಸಿ ನಕ್ಕು ನಲಿದು ಒಂದು ದಿನ ಆಶ್ರಮ ದಲ್ಲಿ ಕಳೆದರು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »