TOP STORIES:

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »