TOP STORIES:

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »