TOP STORIES:

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »