TOP STORIES:

FOLLOW US

ವಾಹನ ಸವಾರರಿಗೆ ಗುಡ್ ನ್ಯೂಸ್!


ಬೆಂಗಳೂರು : ಒಂದು ರಾಜ್ಯದಿಂದ ಇನ್ನೊಂದು ರಾಜಯಕ್ಕೆ ಕೆಲಸಕ್ಕೆಂದು ತೆರಳುವ ಜನರಿಗೆ ವಾಹನ ನೋಂದಣಿಯ ಸಮಸ್ಯೆ ಹೆಚ್ಚಾಗಿದೆ. ಇಂತಹ ಸಮಸ್ಯೆ ಸರಿಮಾಡುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೆರವಾಗಲು ಮುಂದಾಗಿದೆ. ಈ ತೊಂದರೆ ನಿವಾರಿಸಲು ಹೊಸ ನೋಂದಣಿ ಗುರಿತು ಅಂದರೆ ಭಾರತ್ ಸರಣಿ(BH) ಪ್ರಾರಂಭಿಸಿದೆ. ಇದರ ಮೊದಲ ಬುಕಿಂಗ್ ಮಿರ್ಜಾಪುರದಲ್ಲಿ ಆಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಇದನ್ನು ಪರಿಚಯಿಸಿದೆ. ವಾಹನ ಮಾಲೀಕರು, ಬೇರೆ ರಾಜ್ಯಕ್ಕೆ ವರ್ಗಾವಣೆಗೊಂಡಾಗ ತಮ್ಮ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನವನ್ನು ಮತ್ತೆ ನೋಂದಾಯಿಸಬೇಕಿಲ್ಲ.

ಬಿಎಚ್ ಸರಣಿ ನಂಬರ್ ಪ್ಲೇಟ್ ಕಪ್ಪು ಮತ್ತು ಬಿಳಿ ಬಣ್ಣದ್ದಾಗಿರುತ್ತದೆ. ವಾಹನ ಸಂಖ್ಯೆ BH ಸರಣಿ ಪಡೆಯಲು ವಾಹನ ಮಾಲೀಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ಸಂಪರ್ಣ ಪ್ರಕ್ರಿಯೆ ಆನ್ ಲೈನ್ ನಲ್ಲಿ ನಡೆಯುತ್ತದೆ.

ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗಿಗಳು, ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕಚೇರಿಗಳನ್ನು ಹೊಂದಿರುವ ಖಾಸಗಿ ವಲಯದ ಕಂಪನಿಗಳು ಹಾಗೂ ಸಂಸ್ಥೆಗಳ ಉದ್ಯೋಗಿಗಳಿಗೆ ಇದರಿಂದ ಲಾಭವಾಗಲಿದೆ.

ತಮ್ಮ ವೈಯಕ್ತಿಕ ವಾಹನಗಳನ್ನು ಭಾರತ್ ಸರಣಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಇದು ಎಲ್ಲರಿಗೂ ಕಡ್ಡಾಯವಲ್ಲ. ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆ ನಂತರ ಭಾರತ್ ಸರಣಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ರಸ್ತೆ ಸಾರಿಗೆ ಸಚಿವಾಲಯ ಮತ್ತು ಹೆದ್ದಾರಿಗಳ ವಾಹನ ಪೋರ್ಟಲ್ ಗೆ ಲಾಗಿನ್ ಮಾಡಬೇಕು. ಹೊಸ ವಾಹನವನ್ನು ಖರೀದಿಸುವಾಗ ಡೀಲರ್ ಮಟ್ಟದಲ್ಲಿಯೂ ಇದನ್ನು ಮಾಡಬಹುದು. ಡೀಲರ್ ವಾಹನ ಮಾಲೀಕರ ಪರವಾಗಿ ವ್ಯಾನ್ ಪೋರ್ಟಲ್ ನಲ್ಲಿ ಲಭ್ಯವಿರುವ ಫಾರ್ಮ್ 20ನ್ನು ಭರ್ತಿ ಮಾಡಬೇಕು. ಕಾರಿನ ವೆಚ್ಚದ ಮೇಲೆ ರಸ್ತೆ ತೆರಿಗೆ ಪಾವತಿಸಬೇಕಾಗುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »