TOP STORIES:

ವಿಶ್ವ ಬಿಲ್ಲವ ಮಹಿಳಾ ಸಂಘದ ವಿದ್ಯಾರ್ಥಿ ವೇತನ ವಿತರಣೆ “ಹೆಜ್ಜೆ – 2022” ಕುದ್ರೋಳಿ ಕ್ಷೇತ್ರದ ದ್ವಿತೀಯ ವಾರ್ಷಿಕೋತ್ಸವದಂಗವಾಗಿ ವಿದ್ಯಾರ್ಥಿ ವೇತನ ವಿತರಣೆ


14-5-2022 ರಂದು ವಿಶ್ವಬಿಲ್ಲವ ಮಹಿಳಾ ಸಂಘದ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ನಡೆದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿರು ಕೊರಗಪ್ಪ ಮೆಮೋರಿಯಲ್ ಹಾಲ್ ನ ಸಭಾಂಗಣದಲ್ಲಿ ಜರುಗಿತು.
ಸಂಘದ ಅಧ್ಯಕ್ಷರಾದ ಉರ್ಮಿಳಾ ರಮೇಶ್ ಕುಮಾರ್ ರವರು ಪದಾಧಿಕಾರಿಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕುಮಾರಿ ಅಖಿಲಾರವರ ಸ್ವಾಗತ ನೃತ್ಯದ ಬಳಿಕ ಶ್ರೀಮತಿ ಉರ್ಮಿಳಾ ರಮೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಗುಣಶ್ರೀ ಹಾಗೂ ಗಾಯತ್ರಿರವರು ಗುರುಸ್ಮರಣೆ ಮಾಡಿದರು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ದುಬೈನಲ್ಲಿ‌ ಶಿಪ್ಪಿಂಗ್ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಶ್ರೀಮತಿ ಪೂರ್ಣಿಮ ಜಿತೇಂದ್ರ ಕೊಟ್ಯಾನ್ , ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾಗಿರುವ ಎಚ್.ಎಸ್. ಸಾಯಿರಾಂ, ಸಮಾಜಸೇವಕರಾದ ಪ್ರೊ.ಹಿಲ್ಡಾ ರಾಯಪ್ಪನ್, ಅನುಮಪ ಪತ್ರಿಕೆಯ ಸಂಸ್ಧಾಪಕಿ ಶಹನಾಜ್ ಎಂ, ಉಪಸ್ಥಿತರಿದ್ದರು.ವಿಜಯ ಅರುಣ್ ರವರು ಅತಿಥಿಗಳನ್ನು ಸ್ವಾಗತಿಸಿ,ಡಾ.ಅನಸೂಯ ಬಿ.ಸಾಲ್ಯಾನ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ಪೂರ್ಣಿಮಾ ಜಿತೇಯ ಕೊಟ್ಯಾನ್ ರವರು ಮಾತನಾಡುತ್ತಾ ದೇಶದಲ್ಲಿ ಸಾಧನಾಶೀಲ ಮಹಿಳೆಯರ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ಅವರ ಗುರಿ ಸಾಧನೆಗಳು ನಮಗೆ ಪ್ರೇರಣೆಯಾಗಬೇಕು , ಸಂಘಟನೆಯಲ್ಲಿ ಮಹಿಳೆಯ ಬಹುಮುಖ್ಯ ಪಾತ್ರವೇನು. ಸಂಘದಲ್ಲಿ ಮಹಿಳೆಯರು ಇನ್ನೊಬ್ಬರ ಆಸ್ತಿ, ಅಂತಸ್ತು, ಇನ್ನೊಬ್ಬರ ವೈಯಕ್ತಿಕ ವಿಷಯಗಳ ಬಗ್ಗೆ ಯೋಚಿಸದೆ, ಸಂಘಟನೆಗೆ ಹಾಗೂ ಸಮುದಾಯದ ಮಹಿಳೆಯರ ಏಳಿಗೆಯ ಬಗ್ಗೆ ಮಾತ್ರ ಚಿಂತಿಸುವಂತಾಗಬೇಕು. ಇತ್ತೀಚಿನ ದಿನಗಳಲ್ಲಿ ಉತ್ತಮ ಅಂಕಗಳೊಂದಿಗೆ ಪಾಸಾದ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು ವಿನಾ ಅವರನ್ನು ವೇದಿಕೆಗೆ ಕರೆದು ಅದ್ದೂರಿಯಾಗಿ ಶಾಲು, ಸನ್ಮಾನ ಹೊದಿಸಿ ಅವರ ತಲೆಯೊಳಗೆ ತಾನು ಇತರರಿಗಿಂತ ಭಿನ್ನ ಎಂಬ ವಿಚಾರವನ್ನು ತುಂಬುವಂತಾಗಬಾರದು ಎಂದರು. ಬಳಿಕ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿವೇತನ ವಿತರಿಸಿದ ಎಚ್.ಎಸ್.ಸಾಯಿರಾಂ ಸಂಘದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಶುಭವನ್ನು ಹಾರೈಸಿದರು. ನಂತರ ಡಿಗ್ರಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದ ಪ್ರಜ್ಞಾ ಸಲಹಾ ಕೇಂದ್ರದ ಸಂಸ್ಥಾಪಕರಾದ ಹಿಲ್ಡಾ ರಾಯಪ್ಪನ್ ಮಾತನಾಡಿ ಬಾಲ್ಯದಲ್ಲಿ ತಾನು ಬಿಲ್ಲವ ಸಮುದಾಯದ ಮನೆಯಲ್ಲಿ ಬೆಳೆದ ರೀತಿ, ಸಂಪ್ರದಾಯ ಬಧ್ದರಾಗಿ ತಾನು ಈ ಮಟ್ಟದಲ್ಲಿ ಬೆಳೆಯಲು ಕಾರಣರಾದ ಪಾಂಡೇಶ್ವರದ ಬಿಲ್ಲವ ಸುತ್ತಿನ ಮನೆಯವರೊಂದಿಗಿನ ಸವಿನೆನಪನ್ನು ಹಂಚಿಕೊಂಡರು.
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆಗಳನ್ನು ಗಮನಿಸಿ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಾಂತ್ವನ ಕೇಂದ್ರ ಸ್ಥಾಪಿಸಿ ನೋವಿಗೆ ದ್ವನಿಯಾಗಲು ಕರೆನೀಡಿದರು.ಇನ್ನುಳಿದ ಇತರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿದ ಅನುಪಮ ಪತ್ರಿಕೆಯ ಸಂಪಾದಕಿ ಶಹನಾಜ್ ಎಂ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಒಪ್ಪಿಕೊಂಡು ಪೂಜನೀಯ ಸ್ಥಾನ ಕೊಟ್ಟ ತನ್ನ ತಾಯಿಯ ಬಗ್ಗೆ ನೆನೆಪಿಸಿಕೊಂಡು ಹಾಗೆಯೇ ಕೇಂದ್ರದ ಮಾಜಿ ಸಚಿವರಾದ ಶ್ರೀ ಜನಾರ್ದನ ಪೂಜಾರಿಯವರು ತನ್ನ ಪತಿಯ ತಾಯಿಯ ಒಡನಾಟದಲ್ಲಿ ಬೆಳೆದು ಬಂದ ಬಗ್ಗೆಯ ಬಗ್ಗೆ ಹಾಗೂ ಆ ದಿನಗಳಲ್ಲಿ ಜಾತಿ, ಮತ,ಭೇದ ಇಲ್ಲದೆ ಬದುಕಿದ ರೀತಿಯನ್ನು ಕೊಂಡಾಡಿದರು. ಹಿಂದು , ಮುಸ್ಲಿಂ, ಕ್ರಿಶ್ಚನ್ ಎಂಬ ಭೇದವಿಲ್ಲದೆ ಎಲ್ಲ ಧರ್ಮವನ್ನು ಪ್ರೀತಿಸಿ ಗೌರವಿಸಿದ ಧೀಮಂತ ವ್ಯಕ್ತಿ ಸನ್ಮಾನ್ಯ ಶ್ರೀ ಜನಾರ್ದನ ಪೂಜಾರಿಯವರು ಎಂದು ಹೆಮ್ಮೆಯಿಂದ ನುಡಿದರು. ಇಂದು ವಿಶ್ವಬಿಲ್ಲವ ಮಹಿಳಾ ಸಂಘವು ಈ ವೇದಿಕೆಯಲ್ಲಿ ನಾರಾಯಣ ಗುರುಗಳ ತತ್ವವನ್ನು ಪಾಲಿಸಿಕೊಂಡು ಮುನ್ನಡೆದಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಣೇತ್ರದ ಸಭಾಂಗಣದಲ್ಲಿ ನಡೆದ ಈ ವಿದ್ಯಾರ್ಥಿ ವೇತನ ಕಾರ್ಯಕ್ರಮದಲ್ಲಿ ಇಂದು ನಾನು ಸಾಮರಸ್ಯದ ಬದುಕಿಗೆ ಅರ್ಥ ಕೊಟ್ಟ ಅರ್ಧ ಭಾರತವನ್ನು ಇಲ್ಲಿ ಕಂಡಂತಾಗಿದೆ ಎಂದರು.
ಕಾರ್ಯಕ್ರಮದ ಕೊನೆಯಲ್ಲಿ ಅಧ್ಯಕ್ಷರಾಗಿದ್ದ ಉರ್ಮಿಳಾ ರಮೇಶ್ ಕುಮಾರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಮಹನೀಯರು ಮಾಡುವ ಸಮಾಜಸೇವೆಯನ್ನು ಶ್ಲಾಘಿಸುತ್ತ ನಮ್ಮೀ ಸಂಘ ಕೂಡ ಎಲ್ಲರ ಸಹಕಾರವನ್ನು ಪಡೆಯುತ್ತ ಸಮಾಜದಲ್ಲಿ ಆರ್ಥಿಕವಾಗಿ ಕಂಗಲಾಗಿದ್ದ ಆಶಕ್ತರನ್ನು ಮೇಲೆತ್ತಿ ಸಶಕ್ತರನ್ನಾಗಿ ಮಾಡುವ ಮಾಡಲು ಕಂಕಣ ಬಧ್ದರಾಗಿ ಈ ಸಂಘವನ್ನು ವಿಶ್ವಮಟ್ಟದಲ್ಲಿ‌ ಬೆಳೆಸಿ ವಿಶ್ವದಾದ್ಯಂತ ನೆಲೆಸಿರುವ ಬಿಲ್ಲವರ ಸಹಕಾರ ಪಡೆದು ನಮ್ಮೀ ಸಂಘದ ಹೆಜ್ಜೆ ಗುರುತನ್ನು ಶಾಶ್ವತವಾಗಿರಿಸಲು ಇಟ್ಟ ಹೆಜ್ಜೆ ಹಿಂದೆ ಇಡದೆ ಸಂಘದ ಸದಸ್ಯರೆಲ್ಲರು ಹೆಜ್ಜೆಯ ಮೇಲೆ ಹೆಜ್ಜೆಯನ್ನಿಟ್ಟು ಮುಂದೆ ಮುಂದೆ ಸಾಗೋಣ ಎಂದರು. ಸಂಘದ ಸಲಹೆಗಾರರಾದ ಕೆ.ಎ.ರೋಹಿಣಿಯವರು ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಸುಜಾತ ಸುವರ್ಣ ಕೊಡ್ಮಾಣ್ ಇವರು ಧನ್ಯವಾದ ಸಮರ್ಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »