TOP STORIES:

FOLLOW US

ವಿಷ ಕಾರುವವರಿಗೆ “ವಿಷಯ”ಯುಕ್ತ ಕಾರ್ಕೋಟಕ ವಿಷದಿಂದ ಅರ್ಪಣೆ…


ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಬೇಕೆಂಬ ಕೂಗು ಇವತ್ತು ನಿನ್ನೆಯದ್ದಲ್ಲ, ಸಮಾರು ವರುಷದಿಂದ ಕೇಳಿ ಬಂದ ಕೂಗು ಇದಾಗಿದೆ.


ಈ ಕೂಗಿಗೆ ನಾನು ಧ್ವನಿಯಾಗಿದ್ದೆ, ಆ ಧ್ವನಿ ಮೆಲ್ಲಗೆ ಗಡಸು ಧ್ವನಿಯಾಗುತ್ತ ಬೆಳೆದಿತ್ತು..!!
ಕರಾವಳಿಗರ ಒಕ್ಕೊರಲ ಅಭಿಪ್ರಾಯಕ್ಕೆ ಒಂದು ರೀತಿಯ ಬಲವು ನಿಧಾನವಾಗಿ ಬಲ ಸೇರುತ್ತಿತ್ತು.!
ಆದರೆ ಅದರ ಬಲವನ್ನು ಕುಗ್ಗಿಸುವ ಸಣ್ಣ ಧ್ವನಿಯು ಕೂಡ ಮೆಲ್ಲಗೆ ಏಳುತ್ತಿದೆ ಎಂಬುದನ್ನು ಹೇಳಲು ಭಯ ಪಡಬೇಕಾಗಿಲ್ಲ.


ಇತ್ತೀಚೆಗೆ ಮಾನ್ಯ ಸ್ವಾಮೀಜಿಗಳಿಂದ ಒಂದು ಹೇಳಿಕೆಯ ಮಾತು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿತ್ತು.! ಕೋಟಿ-ಚೆನ್ನಯರ ಹೆಸರಿಗೆ ಬದಲಾಗಿ ಇನ್ನೊಂದು ಹೆಸರನ್ನು ಸೂಚಿಸಿದ್ದರು.! ಒಂದು ವಿಚಿತ್ರ ಅನಿಸಿದ್ದು ಆ ಹೆಸರಿಗೆ ಖಂಡಿತ ನಮ್ಮ ವಿರೋಧವಿಲ್ಲ, ಆದರೆ ಇಷ್ಟು ದಿನ ಇಲ್ಲದ ಆ ಹೆಸರು ಬಲು ಬೇಗನೆ ಬಂದ ಕಾರಣ ಗೊತ್ತಾಗಬೇಕಿತ್ತು ಅಷ್ಟೇ!! ಶ್ರೀ ಗಳೇ ಕೋಟಿ ಚೆನ್ನಯರು ಹಿಂದುಗಳು ಅಲ್ಲವೇ, ಅಲ್ಲದಿದ್ದರೆ ನೇರವಾಗಿ ಹೇಳಿಬಿಡಿ! ಅಥವಾ ಕೋಟಿ ಚೆನ್ನಯರ ಹೆಸರಿಗೆ ಇರುವ ಬಲದ ಶಕ್ತಿಯನ್ನು ಒಡೆಯುವ ಕಾರ್ಯಕ್ಕೆ ಕೈ ಹಾಕಿದಿರ, ಅಥವಾ ಇನ್ಯಾವುದೇ ಕುತಂತ್ರ ಶಕ್ತಿಗಳ ಒತ್ತಾಸೆಗೆ ಬಲಿಯಾದಿರಿ ಎಂಬುದು ನೀವೇ ಹೇಳಬೇಕಾಗಿದೆ..! ಕೋಟಿ ಚೆನ್ನಯರು ಮಾಡಿದ ಸಾಮಾಜಿಕ ಕಾರ್ಯದ ಬಗ್ಗೆ ಒಮ್ಮೆ ಗಮನ ಹರಿಸಿ ಬನ್ನಿ ಗುರುಗಳೇ..! ಇದನ್ನು ಗೌರವಯುತವಾಗಿಯೇ ಹೇಳುತ್ತಿದ್ದೇನೆ.

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರನ್ನು ಇಡಬಾರದೆಂದು ಹೇಳುವವರಲ್ಲಿ ಒಂದು ಸಣ್ಣ ಮನವಿ, ನೀವು ನೇರವಾಗಿ ಹೇಳಿಬಿಡಿ ಬೆಂಬಲವಿಲ್ಲ ಎಂದು, ಅದರ ಜೊತೆಗೆ ಕಾರಣವನ್ನು ತಿಳಿಸಿಬಿಡಿ ಅಷ್ಟೇ.

ಕೋಟಿ-ಚೆನ್ನಯರ ಹೆಸರನ್ನು ವಿರೋಧಿಸುವ ಅಥವಾ ಅವಮಾನಿಸುವ ವ್ಯಕ್ತಿಗಳು ಯಾರೇ ಇರಲಿ, ಯಾವುದೇ ಸಂಘಟನೆಯಿರಲಿ ಅಥವಾ ರಾಜಕೀಯ ಪಕ್ಷವೇ ಇರಲಿ ಅದು ನಿಮ್ಮ ಸಮಾಧಿಗೆ ನೀವೇ ತೋಡಿದ ಹೊಂಡದಂತೆ!

ರಾಜಕೀಯ ಪಕ್ಷಗಳ ಸ್ಥಿರತೆ ಅಸ್ಥಿರತೆಯ ಕಡೆಗೆ ಸಾಗುತ್ತದೆ ಅದು ಮಾತ್ರ ಸಣ್ಣಗೆ ನೆನಪಿರಲಿ.
ಮತ್ತೊಂದು ಬೇಸರದ ವಿಷಯವೆಂದರೆ ಯಾವುದೇ ಹಿಂದು ಸಂಘಟನೆಗಳು ಇದರ ಪರವಾದ ಮಾತುಗಳನ್ನೇ ಆಡಿಲ್ಲ, ಕೋಟಿ-ಚೆನ್ನಯರ ಹೆಸರಿಡಬೇಕೆಂಬ ಕೂಗಿಗೆ ಬಲವಾದ ಧ್ವನಿ ಆಗಲೇ ಇಲ್ಲ ಎಂಬುದು ನನ್ನಂತಹ ನೂರಾರು ಹಿಂದು ಕಾರ್ಯಕರ್ತರ ಮನದಾಳದ ಪ್ರಶ್ನೆಯಾಗಿಯೇ ಉಳಿದಿದೆ. ಹಿಂದು ಸಂಸ್ಕೃತಿಗೆ ಬೆಂಬಲವಾಗಿ ನಿಲ್ಲುವ ಬಾ.ಜ.ಪ ದಿಂದಲೂ ಇದಕ್ಕೆ ಸೂಕ್ತವಾದ ಬೆಂಬಲವೂ ಕೂಡ ವ್ಯಕ್ತವಾಗಿಲ್ಲ ಇದು ಕೂಡ ನನ್ನಂತಹ ಕಾರ್ಯಕರ್ತರಿಗೆ ಮೂಡಿದ ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.

ಮಿಥುನ್ ರೈ ಯವರು ಕೆಲ ದಿನಗಳ ಹಿಂದೆ ನಡೆಸಿದ ಪರ ಹೋರಾಟದ ದಾರಿ ಪಕ್ಷಾತೀತವಾಗಿ ಎಲ್ಲರೂ ಒಪ್ಪುವಂತದ್ದೇ, ಆದರೆ ಇದು ರಾಜಕೀಯದ ಆಸೆಗಾಗಿ ಸಾಗಬಾರದಷ್ಟೇ..!

ಎಲ್ಲಾ ಗ್ರಾಮಗಳಲ್ಲೂ ಬಲಿಷ್ಟವಾಗಿರುವ ನಮ್ಮ ಬಿಲ್ಲವ ಸಂಘಟನೆಯ ಮುಖಂಡರೆಲ್ಲೀ..??
ಕಳೆದ ಎರಡು ಮೂರು ವಾರಗಳಿಂದ ಕಾರ್ಯ ಚಟುವಟಿಕೆಗಳು ಮಾತ್ರ ಕಣ್ಣಿಗೆ ಗೋಚರಿಸುತ್ತಿದೆ, ಅದಕ್ಕಿಂತ ಮೊದಲಿನ ಪರ ಕಾರ್ಯಗಳೇ ಇಲ್ಲಾ..!
ಕರಾವಳಿಯ ಎಂ.ಪಿ ಮತ್ತು ಎಂ.ಎಲ್.ಎಗಳು ಇದರ ಪರವಾದ ಒಂದು ಮಾತನ್ನು ಆಡುತ್ತಿಲ್ಲ..!? ಕಾರಣ ಏನೆಂದು ತಿಳಿಸುವಿರಾ..!?

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಮರು ನಾಮಕರಣ ಆಗಬೇಕೆಂಬ ಕೂಗು ಜಾತಿ, ಪಕ್ಷ ಮತ್ತು ಧರ್ಮಕ್ಕಿಂತ ಮೀರಿದ ಕೂಗು..! ನೆನಪಿರಲಿ ಇದು ಈಡೇರದಿದ್ದರೆ ಕರಾವಳಿಯ ರಾಜಕೀಯ ಚಿತ್ರಣವೇ ಬದಲಾದೀತು ಜೋಕೆ..!!

– ವಿಜೇತ್ ಪೂಜಾರಿ ಶಿಬಾಜೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »