TOP STORIES:

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !


ಬಂಟ್ವಾಳ: ಶಬರಿಮಲೆಗೆ ಪಾದಯಾತ್ರೆಯಲ್ಲಿ ಹೊರಟ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋ ಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ ತಿಂಡಿ ತಿನಸುಗಳನ್ನು ತಿಂದು, ಅವರ ತಂಡದ ಪ್ರೀತಿಯ “ಮಲ್ಲಿ’ಯಾಗಿ ಇದೀಗ ವ್ರತಾಧಾರಿಗಳು ಅದನ್ನು ಊರಿಗೆ ತರುವುದಕ್ಕೆ ನಿರ್ಧರಿಸಿದ್ದಾರೆ.

ಮಣಿನಾಲ್ಕೂರು ಗ್ರಾಮದ ಬಡೆಕೊಟ್ಟಿನಿಂದ ಡಿ. 11ರಂದು ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡವೊಂದು ಪಾದಯಾತ್ರೆಯ ಮೂಲಕ ಶಬರಿಮಲೆಗೆ ಹೊರಟಿತ್ತು. ತಂಡವು ಎಟ್ಟುಮಾನೂರ್‌ ತಲುಪಿದ ಸಂದರ್ಭದಲ್ಲಿಅವರ ಜತೆ ಶ್ವಾನವೊಂದು ಹೆಜ್ಜೆ ಹಾಕುವುದನ್ನು ಕಂಡರು. ಬಳಿಕ ಅವರು ಅದಕ್ಕೆ ತಿಂಡಿ ಹಾಕಲು ಆರಂಭಿಸಿದ್ದು, ಅಂದಿನಿಂದ ನಿರಂತರವಾಗಿ ಹಲವು ದಿನಗಳ ಕಾಲ ಆ ತಂಡದ ಜತೆಗೆ ಶ್ವಾನ ಹೆಜ್ಜೆ ಹಾಕಿದೆ.

ದಾರಿ ಕಾಯುವ ಶ್ವಾನ
ಬೆಳಗ್ಗೆ ಇವರ ಜತೆಗೆ ಹೆಜ್ಜೆ ಹಾಕುವ ಶ್ವಾನವು ಮುಂದೆ ಹೋಗಿ ನಿಂತು ಇವರು ಬರುವುದನ್ನೇ ಕಾಯುತ್ತದೆ. ಇವರ ತಂಡ ಹತ್ತಿರಕ್ಕೆ ಬಂದ ಬಳಿಕ ಮತ್ತೆ ಮುಂದೆ ಸಾಗುತ್ತದೆ. ಹೀಗೆ ಸಾಗುತ್ತಿರುವ ವೇಳೆ ಮಣ್ಣಕಟ್ಟ ಬದ್ರಿ ದೇವಸ್ಥಾನದ ಬಳಿ ಶ್ವಾನ ತಪ್ಪಿ ತಮಿಳುನಾಡಿನ ತಂಡವೊಂದರ ಜತೆ ಸೇರಿತ್ತು. ಬಳಿಕ ಅದು ಇವರ ತಂಡ ಅಲ್ಲ ಎಂದು ತಿಳಿದು ಮತ್ತೆ ಇವರನ್ನು ಹುಡುಕಿಕೊಂಡು ಬಂದಿತ್ತು ಎಂದು ವ್ರತಾಧಾರಿಗಳು ವಿವರಿಸುತ್ತಾರೆ.

ಮತ್ತೊಂದು ಶ್ವಾನ ಬಂದಿತ್ತು!
ಪಾಲಾದ ಬಳಿಕ ಮತ್ತೊಂದು ದೊಡ್ಡ ಗಾತ್ರದ ಶ್ವಾನವೊಂದು ಇವರ ತಂಡದ ಜತೆಗೆ ಹೆಜ್ಜೆ ಹಾಕಲು ಆರಂಭಿಸಿತ್ತು. ಆದರೆ ಬಳಿಕ ಅದಕ್ಕೆ ನಡೆದು ಆಯಾಸವಾಗಿ ಕಾಲನೋವು ಆರಂಭಗೊಂಡಿತ್ತು. ವ್ರತಾಧಾರಿಗಳು ದೇವಸ್ಥಾನದಲ್ಲಿ ನಿಂತ ಸಂದರ್ಭ ಅದನ್ನು ಆರೈಕೆ ಮಾಡಿ ನೋವಿಗೆ ಸ್ಟ್ರೇ ಔಷಧ ಹಾಕಿದ್ದರು. ಆದರೆ ಸ್ವಲ್ಪ ದೂರ ಇವರ ಜತೆ ಸಾಗಿದ ಆ ಶ್ವಾನ ಮುಂದೆ ಕಣ್ಮರೆಯಾಗಿತ್ತು.

ಊರಿಗೆ ತರುವುದಕ್ಕೆ ನಿರ್ಧಾರ
ಜ. 3ರಂದು ಅಯ್ಯಪ್ಪ ವ್ರತಾಧಾರಿಗಳ ತಂಡ ಪಂಪೆಗೆ ತಲುಪಿದ್ದು, ಸ್ವಾಮಿಯ ಸನ್ನಿಧಿಗೆ ತೆರಳಿದ್ದಾರೆ. ತಂಡದ ಚೇತನ್‌ ಗುರುಸ್ವಾಮಿ ಅದನ್ನು ತಮ್ಮ ಊರಿಗೆ ಕರೆದುಕೊಂಡು ಬರುವುದಾಗಿ ನಿರ್ಧರಿಸಿ, ಹೀಗಾಗಿ “ಮಲ್ಲಿ’ಯನ್ನು ಹೊಟೇಲೊಂದರ ಬಳಿ ಕಟ್ಟಿ ಹಾಕಿ ದ್ದಾರೆ. ಸನ್ನಿಧಿಗೆ ಹೋಗಿ ಹಿಂದಿರು ವವರೆಗೆ ನೋಡಿಕೊಳ್ಳಿ, ಸ್ಥಳದ ಬಾಡಿಗೆ ಯನ್ನೂ ಕೊಡುತ್ತೇವೆ ಎಂದು ಹೊಟೇಲ್‌ನವರಲ್ಲಿ ವಿನಂತಿಸಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »