TOP STORIES:

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ


ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.

 

ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.

ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್. ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.ಜೊತೆಗೆ ರಾಜ್ಯದಾದ್ಯಂತ ನಾರಾಯಣ ಗುರುಗಳ[Narayana Guru] ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರಮುಖರಾದ ಲೋಹಿತ್ ನಾಯಕ, ಜಗದೀಶ ನಾಯ್ಕ, ಪ್ರಭು ಸಾಲರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘು ಬೆಳಲೆ, ಹರೀಶ್ ನಾಯ್ಕ, ಪ್ರದೀಪ ನಾಯ್ಕ, ವಕೀಲರಾದ ಮಂಜುನಾಥ್, ಕನ್ನಡ ಪರ ಯುವ ಹೋರಾಟಗಾರರಾದ ಮಹೇಶ್, ನಾಗರಾಜ ಶೆಟ್ಟಿ, ನಾಮಧಾರಿ ಬಿಲ್ಲವ ಸಂಘದ ಮುಖಂಡರಾದ ಶೇಖರ್ ಪೂಜಾರಿ ಮುಂತಾದವರು ಭಾಗವಹಿಸಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »