TOP STORIES:

FOLLOW US

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ


ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.

 

ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.

ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್. ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.ಜೊತೆಗೆ ರಾಜ್ಯದಾದ್ಯಂತ ನಾರಾಯಣ ಗುರುಗಳ[Narayana Guru] ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರಮುಖರಾದ ಲೋಹಿತ್ ನಾಯಕ, ಜಗದೀಶ ನಾಯ್ಕ, ಪ್ರಭು ಸಾಲರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘು ಬೆಳಲೆ, ಹರೀಶ್ ನಾಯ್ಕ, ಪ್ರದೀಪ ನಾಯ್ಕ, ವಕೀಲರಾದ ಮಂಜುನಾಥ್, ಕನ್ನಡ ಪರ ಯುವ ಹೋರಾಟಗಾರರಾದ ಮಹೇಶ್, ನಾಗರಾಜ ಶೆಟ್ಟಿ, ನಾಮಧಾರಿ ಬಿಲ್ಲವ ಸಂಘದ ಮುಖಂಡರಾದ ಶೇಖರ್ ಪೂಜಾರಿ ಮುಂತಾದವರು ಭಾಗವಹಿಸಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »