TOP STORIES:

ಶ್ರೀಮಂತ ರಾಜ ಗುಳಿಗ ಸೇವಾನಿಧಿಯಿಂದ ಬಡಕುಟುಂಬಕ್ಕೆ ನೆರವು


ಕೊರೋನ ಎಂತ ಪರಿಸ್ಥಿತಿಗೆ ಕೆಲವರನ್ನು ತಂದು ನಿಲ್ಲಿಸಿದೆ ಎಂದರೆ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ಬಂದು ಒದಗಿದೆ ಎಂದರೆ ತಪ್ಪಾಗಲಾರದು.ಇಂತಹ ಸಮಯದಲ್ಲಿ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಂದು ಕುಟುಂಬ ತುಂಬಾ ಕಷ್ಟದಲ್ಲಿ ಬದುಕುವ ಪರಿಸ್ಥಿತಿ ಬಂದು ಒದಗಿದೆ.ಕೊರೋನ ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕನಿಗೆ ಬೆನ್ನಿನಲ್ಲಿ ಒಂದು ಸಣ್ಣ ನೋವು ಕಾಣಿಸಿಕೊಂಡಿತು.ಅದನ್ನು ಕಂಡ ತಾಯಿ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸುತ್ತಾರೆ ಅಲ್ಲಿ ಅದು ಇದು ಅಂತ ಹೇಳಿ ಸುಮಾರು ದೈಹಿಕ ಪರೀಕ್ಷೆಗಳನ್ನು ಮಾಡಿಸಿ ಕೊನೆಗೆ ಕೊರೋನ ಟೆಸ್ಟ್ ಮಾಡಿಸುತ್ತಾರೆ.ಮಗನಿಗೆ ಕೊರೋನ ಪಾಸಿಟಿವ್ ಇದೆ ಅಂತ ಹೇಳಿ ಎರಡು ಹೆಸರಾಂತ ಆಸ್ಪತ್ರೆಗೆಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ದಿನ ಚಿಕಿತ್ಸೆ ನೀಡುತ್ತಾರೆ.ಆದರೆ ಏನು ಮಾಡುವುದು ವಿಧಿ ಲಿಖಿತ ಎಂಬಂತೆ ಕೊನೆಗೂ ಮಗ ತಾಯಿಯನ್ನು ಬಿಟ್ಟು ದೇವರ ಪಾದ ಸೇರಿಯೆ ಬಿಡುತ್ತಾರೆ.ಆದರೆ ಏನು ಮಾಡೋದು ಮೊದಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈ ಬಡಕುಟುಂಬ ಸಾಲ ಸೋಲ ಮಾಡಿ ಏಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ ಮಗ ಉಳಿಯಲಿಲ್ಲ ಎಂಬ ದು:ಖ ಒಂದೆಡೆಯಾದರೆ ಇನ್ನೊಂದೆಡೆ ಮಗನ ಅಂತ್ಯಕ್ರಿಯೆ ಮಾಡಲು ಹಣವಿಲ್ಲದ ಪರಿಸ್ಥಿತಿಗೆ ಬಂದು ಬಿಟ್ಟಿದೆ ಅಷ್ಟು ಬಡತನ ಆ ಕುಟುಂಬಕ್ಕೆ ಇತ್ತು.

ಈ ವಿಷಯ ತಿಳಿದ ಶ್ರೀಮಂತ ರಾಜ ಗುಳಿಗ ನೆಲೆಸಿರುವ ಶ್ರೀ ಕ್ಷೇತ್ರ ಪಚ್ಚನಾಡಿಯ ಧರ್ಮಾಧಿಕಾರಿ ಸತೀಶ್ ಪೂಜಾರಿ ಬಂದಲೆ ಪಚ್ಚನಾಡಿ ಇವರ ಮುಂದಾಳತ್ವದಲ್ಲಿರುವ ಶ್ರೀಮಂತ ರಾಜ ಗುಳಿಗ ಸೇವಾ ನಿಧಿಯಿಂದ ಈ ಕುಟುಂಬಕ್ಕೆ 25000ರೂಪಾಯಿ ಮತ್ತು ಕೆಲವು ದಿನ ನಿತ್ಯದ ಸಾಮಾಗ್ರಿಗಳನ್ನು ನೀಡುವ ಮೂಲಕ ಮಾನವೀಯತೆಯ ಮೆರದರು.ಇಂತಹ ಕಾರ್ಯಗಳು ಇನ್ನಷ್ಟು ಈ ಕ್ಷೇತ್ರದಿಂದಾಗಲಿ ಶ್ರೀಮಂತ ರಾಜ ಗುಳಿಗ ಎಲ್ಲರಿಗೂ ಒಳಿತು ಮಾಡಲಿ ಎಂದು ಹಾರೈಸುತ್ತೇವೆ..


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »