TOP STORIES:

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »