TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಗೆ ಮರದ ಕಡ್ಚಿಲ್ ಅಳವಡಿಕೆ


ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ.

ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಆದಿ ದೈವ ಧೂಮಾವತಿ ಕ್ಷೇತ್ರ – ಸಾಯನ ಬೈದ್ಯರ ಗುರು ಪೀಠಬಡಗನ್ನೂರು ಗ್ರಾಮ, ಪಡುಮಲೆ, ಪುತ್ತೂರು ತಾಲೂಕು ದ.ಕ. ಯಲ್ಲಿದೆ.

ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿದ ಯಮಳ ವೀರರು ಕೋಟಿ-ಚೆನ್ನಯರು ನಾಡಿನಾದ್ಯಂತ 250 ಕ್ಕಿಂತಲೂ ಅಧಿಕ ಗರೋಡಿಗಳಲ್ಲಿ ಆರಾಧನೆ ಪಡೆಯುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ತಮ್ಮ ಹುಟ್ಟೂರಿನಲ್ಲಿ ಉಪಾಸನೆ ಪಡೆಯುವ ಸುವರ್ಣ ಕಾಲ ಕೂಡಿ ಬಂದಿದೆ. ಹುಟ್ಟೂರಿನ ಈ ಆರಾಧನೆಯು, ಸ್ವತಃ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ನಡೆಯುವ ಮೂಲಕ ಸಮಸ್ತ ಭಕ್ತರ ಪಾಲಿಗೆ ಸಂಭ್ರಮದ ಕ್ಷಣ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಮಾತೆ ದೇಯಿ ಬೈದ್ಯೆತಿ, ಗುರು ಸಾಯನ ಬೈದ್ಯರ ಸಹಿತ ಕೌಟುಂಬಿಕ ಚೌಕಟ್ಟಿನಲ್ಲಿ ನಡೆಯುವ ಮೂಲಸ್ಥಾನದ ಆರಾಧನೆ ಕೋಟಿ-ಚೆನ್ನಯರ ಉಪಾಸನಾ ಪರಂಪರೆಯಲ್ಲೇ ಕಲಶಪ್ರಾಯವಾಗಿ ಕಂಗೊಳಿಸಲಿದೆ.
ಕೋಟಿ ಚೆನ್ನಯರು ನಲಿದಾಡಿದ ಮಣ್ಣಿನಲ್ಲಿ.ಗೆಜ್ಜೆಗಿರಿ ನಂದನ ಬಿತ್ತಿಲ್ ಅವಳಿ ವೀರರ ಜನ್ಮದ ಮೂಲ ನೆಲೆ. ಅವರ ತರವಾಡು ಕ್ಷೇತ್ರ, ಮಾತ್ರವಲ್ಲ ಸ್ವತಃ ಕೋಟಿ-ಚೆನ್ನಯರು ಬಾಳಿ ಬೆಳಗಿದ ತಾಣ. ಮಾವ ಸಾಯನ ಬೈದ್ಯರ ಕರ್ಮಭೂಮಿಯೂ ಇದೇ, ಮಾತೆ ದೇಯಿ ಬೈದ್ಯೆತಿಗೆ ಪುನರ್ಜನ್ಮ ನೀಡಿದ ಮೂಲ ಸ್ಥಾನವೂ ಇದೇ. ಈ ಎಲ್ಲ ದೈವಾಂಶ ಸಂಭೂತರಿಂದ ಉಪಾಸನೆ ಪಡೆದ ಧೂಮಾವತಿ ದೈವದ ತಾಣವೂ ಇದೇ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »