TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಗೆ ಮರದ ಕಡ್ಚಿಲ್ ಅಳವಡಿಕೆ


ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ.

ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಆದಿ ದೈವ ಧೂಮಾವತಿ ಕ್ಷೇತ್ರ – ಸಾಯನ ಬೈದ್ಯರ ಗುರು ಪೀಠಬಡಗನ್ನೂರು ಗ್ರಾಮ, ಪಡುಮಲೆ, ಪುತ್ತೂರು ತಾಲೂಕು ದ.ಕ. ಯಲ್ಲಿದೆ.

ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿದ ಯಮಳ ವೀರರು ಕೋಟಿ-ಚೆನ್ನಯರು ನಾಡಿನಾದ್ಯಂತ 250 ಕ್ಕಿಂತಲೂ ಅಧಿಕ ಗರೋಡಿಗಳಲ್ಲಿ ಆರಾಧನೆ ಪಡೆಯುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ತಮ್ಮ ಹುಟ್ಟೂರಿನಲ್ಲಿ ಉಪಾಸನೆ ಪಡೆಯುವ ಸುವರ್ಣ ಕಾಲ ಕೂಡಿ ಬಂದಿದೆ. ಹುಟ್ಟೂರಿನ ಈ ಆರಾಧನೆಯು, ಸ್ವತಃ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ನಡೆಯುವ ಮೂಲಕ ಸಮಸ್ತ ಭಕ್ತರ ಪಾಲಿಗೆ ಸಂಭ್ರಮದ ಕ್ಷಣ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಮಾತೆ ದೇಯಿ ಬೈದ್ಯೆತಿ, ಗುರು ಸಾಯನ ಬೈದ್ಯರ ಸಹಿತ ಕೌಟುಂಬಿಕ ಚೌಕಟ್ಟಿನಲ್ಲಿ ನಡೆಯುವ ಮೂಲಸ್ಥಾನದ ಆರಾಧನೆ ಕೋಟಿ-ಚೆನ್ನಯರ ಉಪಾಸನಾ ಪರಂಪರೆಯಲ್ಲೇ ಕಲಶಪ್ರಾಯವಾಗಿ ಕಂಗೊಳಿಸಲಿದೆ.
ಕೋಟಿ ಚೆನ್ನಯರು ನಲಿದಾಡಿದ ಮಣ್ಣಿನಲ್ಲಿ.ಗೆಜ್ಜೆಗಿರಿ ನಂದನ ಬಿತ್ತಿಲ್ ಅವಳಿ ವೀರರ ಜನ್ಮದ ಮೂಲ ನೆಲೆ. ಅವರ ತರವಾಡು ಕ್ಷೇತ್ರ, ಮಾತ್ರವಲ್ಲ ಸ್ವತಃ ಕೋಟಿ-ಚೆನ್ನಯರು ಬಾಳಿ ಬೆಳಗಿದ ತಾಣ. ಮಾವ ಸಾಯನ ಬೈದ್ಯರ ಕರ್ಮಭೂಮಿಯೂ ಇದೇ, ಮಾತೆ ದೇಯಿ ಬೈದ್ಯೆತಿಗೆ ಪುನರ್ಜನ್ಮ ನೀಡಿದ ಮೂಲ ಸ್ಥಾನವೂ ಇದೇ. ಈ ಎಲ್ಲ ದೈವಾಂಶ ಸಂಭೂತರಿಂದ ಉಪಾಸನೆ ಪಡೆದ ಧೂಮಾವತಿ ದೈವದ ತಾಣವೂ ಇದೇ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »